ಮತದಾನದ ನಡುವೆ ಬಿಜೆಪಿ ಅಧ್ಯಕ್ಷರ ಹತ್ಯೆ ಯತ್ನದ ಗಾಳಿಸುದ್ದಿ!
ಹೈದರಾಬಾದ್, ಡಿ.1: ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗಾಗಿ ಮತದಾನ ನಡೆಯುವ ವೇಳೆಯಲ್ಲೇ ಗಾಳಿ ಸುದ್ದಿಯೊಂದು ಭಾರಿ ಸಂಚಲನ ಮೂಡಿಸಿತ್ತು. ತೆಲಂಗಾಣದ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಅವರ ಮೇಲೆ ಹತ್ಯೆ ಯತ್ನ ನಡೆದಿದೆ ಎಂಬ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿ ಭಾರಿ ಗೊಂದಲ, ಗಾಬರಿ, ಆತಂಕಕ್ಕೆ ಕಾರಣವಾಗಿತ್ತು.
ಆದರೆ, ಕೆಲ ಮಾಧ್ಯಮಗಳಲ್ಲಿ ಬಂದಿದ್ದ ಈ ವರದಿಗಳನ್ನು ಸಂಪೂರ್ಣವಾಗಿ ಸುಳ್ಳು ಸುದ್ದಿ ಎಂದು ಹೈದರಾಬಾದ್ ಕೇಂದ್ರ ವಲಯದ ಜಂಟಿ ಪೊಲೀಸ್ ಆಯುಕ್ತ ಪಿ ವಿಶ್ವಪ್ರಸಾದ್ ಅವರು ಸ್ಪಷ್ಟಪಡಿಸಿದ್ದಾರೆ.
'' ಬಂಡಿ ಸಂಜಯ್ ಅವರ ಮೇಲೆ ಹತ್ಯೆ ನಡೆದಿದೆ ಎಂದು ಕೆಲವು ಖಾಸಗಿ ಸುದ್ದಿ ಮಾಧ್ಯಮಗಳಲ್ಲಿ ವರದಿಗಳು ಬಂದಿವೆ. ಇದು ಸಂಪೂರ್ಣ ತಪ್ಪು ಮಾಹಿತಿ ಹಾಗೂ ಇಂಥ ಗಾಳಿಸುದ್ದಿಯನ್ನು ನಂಬಬೇಡಿ'' ಎಂದು ವಿಶ್ವಪ್ರಸಾದ್ ಅವರು ಹೇಳಿದರು.

ಮಾದಾಪುರದಲ್ಲಿ ಎರಡು ರಾಜಕೀಯ ಗುಂಪುಗಳ ಜೊತೆ ಮಾತಿನ ಚಕಮಕಿ, ಸಂಘರ್ಷಗಳು ದಾಖಲಾಗಿವೆ. ಈ ಸಂದರ್ಭದಲ್ಲಿ ಕಾರಿನ ಗಾಜೊಂದನ್ನು ಪುಡಿ ಮಾಡಲಾಗಿದೆ. ಈ ಕುರಿತಂತೆ ಕೇಂದ್ರ ವಲಯದಲ್ಲಿ ದೂರು ದಾಖಲಾಗಿದೆ ಎಂದರು.
ಗಾಳಿಸುದ್ದಿ ನಂತರ ಭದ್ರತೆ
ಗಾಳಿ ಸುದ್ದಿ ಹಬ್ಬುತ್ತಿದ್ದಂತೆ ನೆಕ್ಲೆಸ್ ರಸ್ತೆಯ ಬಳಿ ಇದ್ದ ಬಂಡಿ ಸಂಜಯ್ ಬಳಿ ರಾಮ್ ಗೋಪಾಲ್ ಪೇಟ್ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ತೆರಳಿ ಮನೆಗೆ ತೆರಳಲು ಮನವಿ ಮಾಡಿಕೊಂಡಿದ್ದಾರೆ. ಮನೆಗೆ ಭದ್ರತೆ ಒದಗಿಸಲಾಗಿದೆ. ಆದರೆ ಬಂಡಿ ಸಂಜಯ್ ಬೆಂಬಲಿಗರ ಕಾರಿನ ಮೇಲೆ ಎಐಎಂಐಎಂ ಗೂಂಡಾಗಳು ದಾಳಿ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಆದರೆ, ಇದು ಬಂಡಿ ಸಂಜಯ್ ಮಾಡಿರುವ ಡ್ರಾಮಾ ಎಂದು ಅಲ್ಲಗೆಳೆದಿದೆ.
2016ರಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ ಎಸ್) ಪಕ್ಷ 150ರಲ್ಲಿ 99 ಸ್ಥಾನಗಳಿಸಿ ಆಡಳಿತ ವಹಿಸಿಕೊಂಡಿತ್ತು. ಹಾಲಿ ಪಾಲಿಕೆ ಅವಧಿ ಫೆಬ್ರವರಿ 10, 2021ರಂದು ಕೊನೆಗೊಳ್ಳಲಿದೆ. 150 ಸದಸ್ಯರ ಆಯ್ಕೆಗಾಗಿ ಡಿಸೆಂಬರ್ 01ರಂದು ಬೆಳಗ್ಗೆ 7 ರಿಂದ ಸಂಜೆ 6 ತನಕ ಮತದಾನದ ನಡೆಸಲಾಗಿದೆ. ಸುಮಾರು 74.67 ಲಕ್ಷ ಮತದಾರರಿದ್ದು, ಸಂಜೆ 4 ಗಂಟೆ ವೇಳೆ ಶೇ 30ರಷ್ಟು ಮತದಾನ ದಾಖಲಾಗಿತ್ತು. ಡಿಸೆಂಬರ್ 4ರಂದು ಮತ ಎಣಿಕೆ ನಡೆಯಲಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications