ಸ್ಮೃತಿ ಸಮರ್ಥನೆ ನಂತರವೂ 10 ಪ್ರೊಫೆಸರ್ ಗಳು ರಿಸೈನ್
ಹೈದರಾಬಾದ್, ಜ. 21: ವಿದ್ಯಾರ್ಥಿ ರೋಹಿತ್ ವೆಮುಲ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರು ಸಮರ್ಥನೆ ನೀಡಿದ್ದನ್ನು ದಲಿತ ವಿದ್ಯಾರ್ಥಿ ಸಂಘಟನೆ ತಿರಸ್ಕರಿಸಿದೆ. ಸುಮಾರು 10 ಜನ ಎಸ್ ಸಿ ಎಸ್ಟಿ ಪ್ರೊಫೆಸರ್ ಗಳು ರಾಜೀನಾಮೆ ನೀಡಿದ್ದಾರೆ.
ಹೈದರಾಬಾದಿನ ಕೇಂದ್ರ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ 10 ಪ್ರೊಫೆಸರ್ಗಳು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯತ್ಯಕ್ಕೆ ರಾಜೀನಾಮೆ ನೀಡಿದ್ದಾರೆ.

ರೋಹಿತ್ನನ್ನು ಅಮಾನತು ಮಾಡಿದ ಸಮಿತಿಯಲ್ಲಿ ದಲಿತ ಪ್ರೊಫೆಸರ್ ಸಹ ಇದ್ದರು ಎಂಬ ಸಚಿವರ ಹೇಳಿಕೆಯನ್ನು ವಿಶ್ವವಿದ್ಯಾಲಯದ ಎಸ್ಸಿ/ಎಸ್ಸಿ ಟೀಚರ್ಸ್ ಮತ್ತು ಆಫೀಸರ್ಸ್ ಫೋರಮ್ ನಿರಾಕರಿಸಿದೆ. ಮೇಲ್ವರ್ಗದ ಪ್ರೊಫೆಸರ್ ಒಬ್ಬರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಸಮಿತಿಯಲ್ಲಿ ದಲಿತರು ಯಾರೂ ಇರಲಿಲ್ಲ ಎಂದು ತಿಳಿಸಿದೆ.
ಸಚಿವೆ ಸ್ಮೃತಿ ಅವರು ಜನತೆಯನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಕಾರ್ಯಕಾರಿ ಕೌನ್ಸಿಲ್ ನ ಉಪ ಸಮಿತಿಯ ನೇತೃತ್ವವನ್ನು ಮೇಲ್ವರ್ಗಕ್ಕೆ ಸೇರಿರುವ ಪ್ರೊಫೆಸರ್ ವಿಪಿನ್ ಶ್ರೀವಾಸ್ತವ್ ಅವರು ಹೊಂದಿದ್ದಾರೆ, ದಲಿತರಿಗೆ ಉಪಸಮಿತಿಯಲ್ಲಿ ಸ್ಥಾನ ಸಿಕ್ಕಿಲ್ಲ ಎಂದು ಎಸ್ಸಿ/ಎಸ್ಸಿ ಟೀಚರ್ಸ್ ಮತ್ತು ಆಫೀಸರ್ಸ್ ಫೋರಮ್ ಪ್ರಕಟಿಸಿದೆ. ರೋಹಿತ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರತಿಭಟನೆಗಳು ಹೆಚ್ಚುತ್ತಿದ್ದು, ಪ್ರೊಫೆಸರ್ಗಳು ಸಹ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications