ಹೈದರಾಬಾದ್ ನಲ್ಲಿ ಸತ್ಯ ಪ್ರಮೋದ ತೀರ್ಥರ ಪಾದುಕಾ ಆರಾಧನೆ
ಹೈದರಾಬಾದ್, ನವೆಂಬರ್ 15: ಇಲ್ಲಿನ ಮಂದಾ ಗಾರ್ಡನ್ ನಲ್ಲಿ ನವೆಂಬರ್ 16, 17 ಹಾಗೂ 18ರಂದು ಉತ್ತರಾದಿ ಮಠದ ಸತ್ಯ ಪ್ರಮೋದ ತೀರ್ಥರ ಪಾದುಕಾ ಆರಾಧನೆ ನಡೆಯಲಿದ್ದು, ಅದಕ್ಕೆ ಪೂರ್ವಭಾವಿಯಾಗಿ ಮಂಗಳವಾರ ಸಂಜೆ ವೈಭವಯುತವಾದ ಶೋಭಾ ಯಾತ್ರೆ ನಡೆಯಿತು.
ಮಠಾಧೀಶರಾದ ಸತ್ಯಾತ್ಮ ತೀರ್ಥರನ್ನು ಆನೆ ಮೇಲೆ ಕೂರಿಸಿ, ಮೆರವಣಿಗೆ ಮಾಡಲಾಯಿತು. ಈ ಸಂದರ್ಭದಲ್ಲಿ ಭಜನಾ ಮಂಡಳಿ, ವೇದ ಪಾರಾಯಣ ಗೋಷ್ಠಿ, ನೃತ್ಯ, ನರ್ತನ ನಡೆಯಿತು. ಪಟಾಕಿ ಸಿಡಿಸಲಾಯಿತು. ಮೆರವಣಿಗೆ ವೇಳೆ ಅಪಾರ ಸಂಖ್ಯೆಯಲ್ಲಿ ಮಠದ ಭಕ್ತರು ಪಾಲ್ಗೊಂಡಿದ್ದರು.[ಮಳೆ ಅನಾಹುತ: ಮಳಖೇಡದ ಉತ್ತರಾದಿಮಠದಲ್ಲಿ 60 ಲಕ್ಷದಷ್ಟು ನಷ್ಟ]

ಮೂರು ದಿನ ನಡೆಯುವ ಕಾರ್ಯಕ್ರಮದಲ್ಲಿ ಬೆಳಗ್ಗೆ ವಿದ್ವತ್ ಗೋಷ್ಠಿಗಳು ಇರುತ್ತವೆ. 'ಅಸಂಪ್ರಜ್ಞಾತ್' ಎಂಬ ವಿಷಯದ ಕಾರ್ಯಾಗಾರ ನಡೆಯಲಿದೆ. ದಾಸ ಸಾಹಿತ್ಯ ಗೋಷ್ಠಿ, ಮೂಲ ರಾಮದೇವರ ಪೂಜೆ, ಸತ್ಯಾತ್ಮ ತೀರ್ಥರಿಗೆ ಪಾದಪೂಜೆ ಹಾಗೂ ಅವರಿಂದ ಆಶೀರ್ವಚನ ಇರುತ್ತದೆ.
ಇನ್ನು ಸತ್ಯ ಪ್ರಮೋದ ತೀರ್ಥರ ಜೀವನ ದರ್ಶನ ಎಂಬ ವಿಡಿಯೋ ಪ್ರದರ್ಶನ ಇರುತ್ತದೆ. ಸಾಯಂಕಾಲ ಉಪನ್ಯಾಸ ಕಾರ್ಯಕ್ರಮ ಇರುತ್ತದೆ. ಕೂಡ್ಲಿ ಮಠಾಧೀಶರಾದ ರಘು ವಿಜಯ ತೀರ್ಥರು, ವ್ಯಾಸನಕೆರೆ ಪ್ರಭಂಜನಾ ಚಾರ್ಯ, ಮಾಹುಲಿ ವಿದ್ಯಾಸಿಂಹಾ ಚಾರ್ಯ ಮೊದಲಾದವರು ಉಅಪನ್ಯಾಸ ನೀಡುತ್ತಾರೆ.[ನವವೃಂದಾವನ ವಿವಾದ: ಸತ್ಯಾತ್ಮತೀರ್ಥ ಸ್ವಾಮೀಜಿಗೆ ಪೊಲೀಸ್ ರಕ್ಷಣೆ]

ಇನ್ನು ಗುರುವಾರದಂದು 'ಧ್ಯಾನ ಪ್ರಮೋದ ಪ್ರಶಸ್ತಿ' ಯನ್ನು ವಿತರಿಸಿರುವ ಕಾರ್ಯಕ್ರಮ ಇರುತ್ತದೆ. ಪ್ರತಿ ವರ್ಷ ಸತ್ಯ ಪ್ರಮೋದ ತೀರ್ಥರ ಮೂಲ ವೃಂದಾವನ ಇರುವ ತಿರು ಕೋಯಿಲೂರ್ ನಲ್ಲಿ ಆರಾಧನೆ ನಡೆದ ಹದಿನೈದನೇ ದಿನಕ್ಕೆ ಬೇರೆ ಊರುಗಳಲ್ಲಿ ಈ ರೀತಿ ಪಾದುಕಾರಾಧನೆ ನಡೆಸಿಕೊಂಡು ಬರಲಾಗುತ್ತಿದೆ. ಈ ಬಾರಿ ಹೈದರಾಬಾದ್ ನಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಐದು ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications