ಸನ್ನಡತೆ ತೋರಿ ಹೊರಬಂದು ಸರಣಿ ಮಹಿಳೆಯರ ಹತ್ಯೆ ಮುಂದುವರೆಸಿದ ಪಾಪಿ
ಹೈದರಾಬಾದ್, ಡಿಸೆಂಬರ್ 28: ಸರಣಿ ಕೊಲೆಗಳನ್ನು ಮಾಡಿ ಜೈಲು ಪಾಲಾಗಿ ಬಳಿಕ ಸನ್ನಡತೆ ಆಧಾರದ ಮೇಲೆ ಬಿಡುಗಡೆಗೊಂಡಿದ್ದ ಆರೋಪಿ ಮತ್ತಷ್ಟು ದುಷ್ಕೃತ್ಯಗಳನ್ನು ಎಸಗಿದ್ದಾನೆ.
ಹಲವು ಕೃತ್ಯಗಳಲ್ಲಿ ಭಾಗಿಯಾಗಿದ್ದ ಆತ 2018ರಲ್ಲಿ ಸನ್ನಡತೆ ಆಧಾರದ ಮೇಲೆ ಜೈಲಿನಿಂದ ಬಿಡುಗಡೆಗೊಳಿಸಲಾಗಿದ್ದು, ಒಂದು ವರ್ಷದಲ್ಲಿ ಮತ್ತೆ 4 ಕೊಲೆಗಳನ್ನು ಆತನ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೈಕಾಲು ಬಿಗಿದು ಉಸಿರುಗಟ್ಟಿಸಿ ವೃದ್ಧ ದಂಪತಿಯ ಕೊಲೆ
ಯೆರುಕಲಿ ಶ್ರೀನು ಆರೋಪಿ ಆಗಿದ್ದು, ಮೆಹಬೂಬನಗರದ ಪೊಲೀಸರು ಶುಕ್ರವಾರ ಆತನನ್ನು ಬಂಧಿಸಿದ್ದಾರೆ. ಆತನ ವಿರುದ್ಧ 13 ಕೊಲೆ ಪ್ರಕರಣಗಳು ದಾಖಲಾಗಿವೆ.
2007ರಲ್ಲಿ ಐದು ಮಂದಿ ಮಹಿಳೆಯರನ್ನು ಹತ್ಯೆ ಮಾಡಿದ್ದ ಈತ 2009ರಲ್ಲಿ ಆತನಿಗೆ ಶಿಕ್ಷೆಯಾಗಿತ್ತು. 2013ರಲ್ಲಿ ಸನ್ನಡತೆ ಆಧಾರದ ಮೇಲೆ ಆತನನ್ನು ಬಿಡುಗಡೆ ಮಾಡಲಾಗಿತ್ತು.
53 ವರ್ಷದ ಮಹಿಳೆಯನ್ನು ಹತ್ಯೆ ಮಾಡಿದ ಆರೋಪದ ಮೇಲೆ ಜೊತೆಗೆ ಇನ್ನೂ ಮೂವರನ್ನು ಕೊಲೆ ಮಾಡಿರುವ ಆರೋಪದ ಮೇಲೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಇತ್ತೀಚೆಗಷ್ಟೆ ಹೈದರಾಬಾದಿನಲ್ಲಿ ಪಶುವೈದ್ಯೆ ಮೇಲೆ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿ ಬೆಂಕಿ ಹಚ್ಚಿ ಕೊಲೆ ಮಾಡಿದ್ದರು. ಬಳಿಕ ಆರೋಪಿಗಳನ್ನು ಪೊಲೀಸರು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿದ್ದರು.