ಸಪ್ತಗಿರಿ ಒಡೆಯನ ನೋಡಲು ನೂಕುನುಗ್ಗಲು
ತಿರುಮಲ, ಆ.18 : ಸಾಲು-ಸಾಲು ರಜೆಗಳ ಹಿನ್ನಲೆಯಲ್ಲಿ ತಿರುಪತಿಗೆ ಕಳೆದ ಎರಡು ದಿನಗಳಿಂದ ಜನಸಾಗರ ಹರಿದುಬರುತ್ತಿದೆ. ದೇವರ ದರ್ಶನ ಪಡೆಯಲು ಗಂಟೆಗಟ್ಟಲೇ ಸರತಿ ಸಾಲಿನಲ್ಲಿ ಕಾಯುವುದು ಅನಿವಾರ್ಯವಾಗಿದೆ. ವಿಐಪಿ ಪಾಸ್ ಪಡೆದು ಹೋಗುವ ಭಕ್ತಾದಿಗಳಿಗೂ ಕಾಯುವ ಸಂಕಷ್ಟ ತಪ್ಪಿದ್ದಲ್ಲ.
ಶುಕ್ರವಾರದಿಂದ ಸಾಲು-ಸಾಲು ರಜೆಗಳು ಆರಂಭವಾದ ಹಿನ್ನಲೆಯಲ್ಲಿ ಲಕ್ಷಾಂತರ ಭಕ್ತಾದಿಗಳು ಸಪ್ತಗಿರಿ ಒಡೆಯ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲು ಆಗಮಿಸಿದ್ದಾರೆ. ಇದರಿಂದ ದೇವರ ದರ್ಶನಕ್ಕೆ ನೂಕುನುಗ್ಗಲು ಉಂಟಾಗಿದ್ದು, ಭಕ್ತಾದಿಗಳು ಗಂಟೆಗಟ್ಟಲೇ ಸರದಿ ಸಾಲಿನಲ್ಲಿ ಕಾಯುವಂತಾಗಿದೆ. ಶನಿವಾರದಿಂದ ಇಂತಹ ಪರಿಸ್ಥಿತಿ ಉಂಟಾಗಿದ್ದು, ಸೋಮವಾರದ ತನಕ ಮುಂದುವರೆಯುವ ಸಾಧ್ಯತೆ ಇದೆ.
ಸಾಮಾನ್ಯ ಭಕ್ತಾದಿಗಳು ದೇವರ ದರ್ಶನ ಪಡೆಯಲು ಸುಮಾರು 16 ಗಂಟೆ ಕಾದು ನಿಂತಿದ್ದರೆ, 300 ರೂ. ನೀಡಿ ವಿಶೇಷ ಪಾಸ್ಪಡೆದು ದರ್ಶನಕ್ಕೆ ಆಗಮಿಸಿದ ಜನರು 10 ಗಂಟೆಗಳ ಕಾಲ ಕಾಯಬೇಕಾಯಿತು. [ತಿಮ್ಮಪ್ಪ 5 ಸಾವಿರ ಕೆಜಿ ಚಿನ್ನದೊಡೆಯ] ಚಿತ್ರಗಳಲ್ಲಿ ನೋಡಿ ತಿರುಪತಿಯಲ್ಲಿ ಜನಸಾಗರ

ಮೂರು ದಿನಗಳಿಂದ ತಿರುಪತಿಯಲ್ಲಿ ಜನಸಾಗರ
ಸಾಲು-ಸಾಲು ರಜೆಗಳ ಹಿನ್ನಲೆಯಲ್ಲಿ ಮೂರು ದಿನಗಳಿಂದ ತಿರುಪತಿಗೆ ಭಕ್ತಸಾಗರವೇ ಹರಿದುಬರುತ್ತಿದ್ದು, ದೇವರ ದರ್ಶನ ಪಡೆಯಲು ಗಂಟೆಗಟ್ಟಲೇ ಸರದಿ ಸಾಲಿನಲ್ಲಿ ಕಾಯುವಂತಾಗಿದೆ.

ಭಕ್ತಾದಿಗಳ ಪರದಾಟ
ಶನಿವಾರ ಮುಂಜಾನೆಯಿಂದ ತಿರುಪತಿಯಲ್ಲಿ ಜನಸಾಗರ ಹೆಚ್ಚಾಗಿದೆ. ಸೋಮವಾರದ ಸಂಜೆಯ ತನಕ ಪರಿಸ್ಥಿತಿ ಹೀಗೆಯೇ ಮುಂದುವರೆಯುವ ಸಾಧ್ಯತೆ ಇದೆ.

ಸಪ್ತಗಿರಿ ಒಡೆಯನ ದರ್ಶನಕ್ಕೆ ನೂಕುನುಗ್ಗಲು
ಲಕ್ಷಾಂತರ ಭಕ್ತರು ತಿರುಪತಿಗೆ ಆಗಮಿಸುತ್ತಿರುವುದರಿಂದ ಸಪ್ತಗಿರಿ ಒಡೆಯ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲು ಭಕ್ತಾದಿಗಳು ಪರದಾಟಬೇಕಾಗಿದೆ. ಗಂಟೆಗಟ್ಟಲೇ ಸರದಿ ಸಾಲಿನಲ್ಲಿ ಕಾಯುವಂತಾಗಿದೆ.

ವಿಐಪಿ ಪಾಸ್ಪಡೆದರೂ ದರ್ಶನ ಕಷ್ಟ
ಸಾಮಾನ್ಯ ಜನರು 16 ಗಂಟೆ ಮತ್ತು 300 ರೂ. ನೀಡಿ ವಿಶೇಷ ಪಾಸ್ ಪಡೆದರು ಕನಿಷ್ಠ 10 ಗಂಟೆ ತಿಮ್ಮಪ್ಪನ ದರ್ಶನಕ್ಕಾಗಿ ಕಾದು ನಿಲ್ಲಬೇಕಾಗಿದೆ.

ವಿಶೇಷ ಪಾಸ್ ಸ್ಥಗಿತ
ಭಕ್ತಾದಿಗಳ ಸಂಖ್ಯೆ ಗಮನಿಸಿದ ತಿರುಪತಿ ದೇವಾಲಯ ಆಡಳಿತ ಮಂಡಳಿ ಭಾನುವಾರ ಮುಂಜಾನೆಯಿಂದಲೇ 300ರೂ.ಗಳ ವಿಶೇಷ ಪಾಸ್ ನೀಡುವುದನ್ನು ಸ್ಥಗಿತಗೊಳಿಸಿದೆ.

ವಿಐಪಿ ಪ್ರವೇಶಕ್ಕೆ ತಡೆ
ಭಕ್ತರ ಸಂಖ್ಯೆ ಹೆಚ್ಚಾಗಿರುವ ಹಿನ್ನಲೆಯಲ್ಲಿ ದೇವಾಲಯದ ಆಡಳಿತ ಮಂಡಳಿ ಸೋಮವಾರ ವಿಐಪಿ ಪ್ರವೇಶವನ್ನು ರದ್ದುಗೊಳಿಸಿದ್ದು, ಆಗಮಿಸಿರುವ ಭಕ್ತಾದಿಗಳ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಟ್ಟಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications