ಗ್ರೇಟರ್ ಹೈದರಾಬಾದ್ ಮೊದಲ ಮಹಿಳಾ ಮೇಯರ್ ಸಿಂಧು ರೆಡ್ಡಿ?
ಹೈದರಾಬಾದ್, ಡಿ. 7: ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ಎಸ್) ಈಗ ಮೇಯರ್ ನೇಮಕಕ್ಕೆ ಮುಂದಾಗಿದೆ. ಲಭ್ಯ ಮಾಹಿತಿಯಂತೆ ಎರಡು ಬಾರಿ ಕಾರ್ಪೊರೇಟರ್ ಸಿಂಧು ಆದರ್ಶ ರೆಡ್ಡಿ ಅವರಿಗೆ ಮೇಯರ್ ಆಗುವ ಯೋಗ ಒಲಿದು ಬಂದಿದೆ.
ಈ ಮೂಲಕ ಸಿಂಧು ರೆಡ್ಡಿ ಅವರು ಗ್ರೇಟರ್ ಹೈದರಾಬಾದ್ ನಗರದ ಮೊಟ್ಟ ಮೊದಲ ಮಹಿಳಾ ಮೇಯರ್ ಎನಿಸಿಕೊಳ್ಳಲಿದ್ದಾರೆ. 1951ರಿಂದ ಹೈದರಾಬಾದ್ ಕಾರ್ಪೊರೇಷನ್ ಇದ್ದು, ಆಂಧ್ರ -ತೆಲಂಗಾಣ ವಿಭಜನೆಗೂ ಮುನ್ನ ಮಹಿಳಾ ಪ್ರಥಮ ಪ್ರಜೆಯನ್ನು ಮುತ್ತಿನನಗರಿ ಕಂಡಿತ್ತು.
ಆದರೆ, 2009ರಿಂದ ಗ್ರೇಟರ್ ಹೈದರಾಬಾದ್ ಪಾಲಿಕೆ ರೂಪುಗೊಂಡಿದೆ. 2009ರಲ್ಲಿ ಕಾಂಗ್ರೆಸ್ಸಿನ ಬಂಡ ಕಾರ್ತಿಕ್ ರೆಡ್ಡಿ, 2012ರಲ್ಲಿ ಎಐಎಂಐಎಂನ ಮೊಹಮ್ಮದ್ ಮಾಜಿದ್ ಹುಸೇನ್ ಹಾಗೂ 2016ರಿಂದ ಟಿಆರ್ಎಸ್ ಪಕ್ಷದ ಬೊಂಥು ರಾಮ್ ಮೋಹನ್ ಅವರು ಮೇಯರ್ ಆಗಿದ್ದಾರೆ. ಸಿಂಧು ಅವರು ಭಾರತಿನಗರ ಡಿವಿಷನ್ ನಿಂದ ಗೆಲುವು ಸಾಧಿಸಿದ್ದು, ಹಾಲಿ ಮೇಯರ್ ಬೊಂಥು ರಾಮ್ ಮೋಹನ್ ಅವರ ಸ್ಥಾನವನ್ನು ತುಂಬಲಿದ್ದಾರೆ.

ಡಿ.1ರಂದು 150 ಸ್ಥಾನಕ್ಕಾಗಿ ಗ್ರೇಟರ್ ಹೈದರಾಬಾದಿನ ವಿವಿಧ ವಲಯಗಳಲ್ಲಿ ಮತದಾನ ನಡೆಸಲಾಗಿತ್ತು. ಡಿ. 4ರಂದು ಫಲಿತಾಂಶ ಪ್ರಕಟವಾಗಿತ್ತು. ಹಾಲಿ ಪಾಲಿಕೆ ಅವಧಿ ಫೆಬ್ರವರಿ 10, 2021ರಂದು ಕೊನೆಗೊಳ್ಳಲಿದೆ. ಸಾಮಾನ್ಯ ವರ್ಗದ ಮಹಿಳೆಗೆ ಈ ಬಾರಿ ಮೇಯರ್ ಸ್ಥಾನ ಮೀಸಲಾಗಿದೆ.
ಜಿಎಚ್ಎಂಸಿ ಚುನಾವಣೆಯಲ್ಲಿ ಆಡಳಿತಾರೂಢ ಟಿಆರ್ಎಸ್ 150 ವಾರ್ಡ್ಗಳ ಪೈಕಿ 55 ವಾರ್ಡ್ಗಳಲ್ಲಿ ಗೆಲುವು ಕಂಡಿದೆ. ಬಿಜೆಪಿ 48 ಮತ್ತು ಎಐಎಂಐಎಂ 44 ಕ್ಷೇತ್ರಗಳಲ್ಲಿ ಜಯಗಳಿಸಿವೆ. 2016ರಲ್ಲಿನಡೆದ ಚುನಾವಣೆಯಲ್ಲಿ ಟಿಆರ್ಎಸ್ 99 ಸೀಟುಗಳಲ್ಲಿ ಗೆದ್ದು ಭರ್ಜರಿ ಬಹುಮತ ಪಡೆದುಕೊಂಡಿತ್ತು. ಆಗ ಬಿಜೆಪಿ ಕೇವಲ ನಾಲ್ಕು ಕಡೆ ಗೆಲುವು ಕಂಡಿತ್ತು. ಈ ಬಾರಿ ಟಿಆರ್ಎಸ್ ಶೇ 40ರಷ್ಟು ಸೀಟುಗಳನ್ನು ಕಳೆದುಕೊಂಡಿದೆ.
ಮೇಯರ್ ಸ್ಥಾನಕ್ಕೆ ಸಿಂಧು: ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಪ್ರಗತಿ ಭವನಕ್ಕೆ ಕಾರ್ಪೊರೇಟರ್ ಸಿಂಧು ರೆಡ್ಡಿ ಅವರನ್ನು ಕರೆಸಿಕೊಂಡು ಅಭಿನಂದಿಸಿದ್ದಾರೆ. ಸಿಂಧು ಅವರ ಅಂಕಲ್ ಭೂಪಾಲ್ ರೆಡ್ಡಿ ಅವರು ಟಿಆರ್ಎಸ್ ಎಂಎಲ್ಸಿಯಾಗಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications