ದಕ್ಷಿಣ ರಾಜ್ಯಗಳ ನಿರ್ಲಕ್ಷಿಸಿ ಸಮಗ್ರ ಭಾರತದ ಪ್ರಗತಿ ಅಸಾಧ್ಯ: ಅಮಿತ್ ಶಾ
ಹೈದರಾಬಾದ್, ನವೆಂಬರ್ 15: "ದಕ್ಷಿಣ ಭಾರತದ ರಾಜ್ಯಗಳ ಕೊಡುಗೆಯನ್ನು ನಿರ್ಲಕ್ಷಿಸಿ ಭಾರತದ ಸಮಗ್ರ ಪ್ರಗತಿಯನ್ನು ಆಲೋಚಿಸಲು ಸಾಧ್ಯವೇ ಇಲ್ಲ," ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ತಿರುಪತಿಯಲ್ಲಿ ದಕ್ಷಿಣ ವಲಯ ಮಂಡಳಿಯ 29ನೇ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, "ದಕ್ಷಿಣ ಭಾರತದ ರಾಜ್ಯಗಳ ಪ್ರಾಚೀನ ಸಂಸ್ಕೃತಿ, ಪರಂಪರೆ ಮತ್ತು ಭಾಷೆಗಳು ಭಾರತದ ಸಂಸ್ಕೃತಿ ಮತ್ತು ಇತಿಹಾಸದ ಮೌಲ್ಯವನ್ನು ಹೆಚ್ಚಿಸಿವೆ," ಎಂದು ತಿಳಿಸಿದರು.
ಸಭೆಯಲ್ಲಿ ಆಂಧ್ರ ಪ್ರದೇಶ, ತಮಿಳುನಾಡು, ಕರ್ನಾಟಕ, ಕೇರಳ ಮತ್ತು ತೆಲಂಗಾಣ ಹಾಗೂ ಕೇಂದ್ರಾಡಳಿತ ಪ್ರದೇಶಗಳಾದ ಪುದುಚೇರಿ, ಲಕ್ಷದ್ವೀಪ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹಗಳು ದಕ್ಷಿಣ ವಲಯ ಮಂಡಳಿಯ ಸದಸ್ಯ ರಾಜ್ಯಗಳಾಗಿವೆ. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು, ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

"ಕೊವಿಡ್-19 ಲಸಿಕಾಕರಣದ ವೇಗ ಹೆಚ್ಚಿಸಬೇಕು, ಮುಖ್ಯಮಂತ್ರಿಗಳೇ ಸ್ವತಃ ಈ ವಿಚಾರದ ನಿಗಾ ವಹಿಸಬೇಕು ಎಂದು ಅಮಿತ್ ಶಾ ವಿವಿಧ ರಾಜ್ಯಗಳ ಆಡಳಿತ ಮುಖ್ಯಸ್ಥರಿಗೆ ಸೂಚಿಸಿದರು. ಮಾದಕ ದ್ರವ್ಯಗಳ ಜಾಲವನ್ನು ಹತ್ತಿಕ್ಕಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ಭಾರತೀಯ ದಂಡಸಂಹಿತೆ ಮತ್ತು ಅಪರಾಧ ಪ್ರಕ್ರಿಯಾ ನಿಯಮಗಳಲ್ಲಿ ಬದಲಾವಣೆಗಳನ್ನು ಸೂಚಿಸುವಂತಿದ್ದರೆ ತಿಳಿಸಿ," ಎಂದು ಕೇಂದ್ರ ಗೃಹ ಅಮಿತ್ ಶಾ ಹೇಳಿದರು.
"ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದ ಅವರು, ಪೊಲೀಸ್ ಇಲಾಖೆಯಲ್ಲಿ ವಿಚಾರಣೆಗಾಗಿ ನಿರ್ದೇಶನಾಲಯ ಸ್ಥಾಪಿಸಬೇಕು. ಉತ್ತಮ ತನಿಖೆ ನಡೆಯುವುದನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಸ್ಥಳೀಯ ಭಾಷೆಗಳಲ್ಲಿ ಪಾಠ ಮಾಡುವ ಒಂದಾದರೂ ವಿಧಿವಿಜ್ಞಾನ (ಫೊರೆನ್ಸಿಕ್) ಕಾಲೇಜು ಆರಂಭಿಸಬೇಕು. ಆಗ ಉತ್ತಮ ತನಿಖೆ ನಿರ್ವಹಿಸಲು ಸೂಕ್ತ ರೀತಿಯಲ್ಲಿ ಸಜ್ಜುಗೊಂಡ ಮಾನವ ಸಂಪನ್ಮೂಲ ಸಿದ್ಧವಾಗುತ್ತದೆ," ಎಂದು ಅಭಿಪ್ರಾಯಪಟ್ಟರು.

ಸ್ಥಳೀಯ ಸಂಸ್ಕೃತಿ ಮತ್ತು ಭಾಷೆಗಳಿಗೆ ಗೌರವ
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸ್ಥಳೀಯ ಸಂಸ್ಕೃತಿ ಮತ್ತು ಭಾಷೆಗಳನ್ನು ಗೌರವಿಸುತ್ತದೆ. ಈ ಸಭೆಯಲ್ಲಿಯೂ ವಿವಿಧ ರಾಜ್ಯಗಳ ಭಾಷೆಗೆ ಅನುವಾದದ ಸೌಕರ್ಯ ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ರಾಜ್ಯಗಳ ಪ್ರತಿನಿಧಿಗಳು ಸ್ಥಳೀಯ ಭಾಷೆಗಳಲ್ಲಿಯೇ ಮಾತನಾಡಿದರೆ ನನಗೆ ಹೆಚ್ಚು ಸಂತೋಷವಾಗುತ್ತದೆ ಎಂದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ವಿವಿಧ ವಿಚಾರಗಳಿಗೆ ಸಂಬಂಧಿಸಿದಂತೆ ವಿಚಾರ ವಿನಿಮಯ ನಡೆಸಲು ವಲಯ ಮಂಡಳಿ ಸಭೆಗಳು ಅತ್ಯುತ್ತಮ ವೇದಿಕೆಗಳಾಗಿವೆ. ಭಾನುವಾರದ ಸಭೆಯಲ್ಲಿ ಚರ್ಚೆಗೆ ಬಂದ 51 ವಿಷಯಗಳ ಪೈಕಿ 30 ಅಂಶಗಳನ್ನು ಪರಿಹರಿಸಲಾಗಿದೆ. ವಲಯ ಮಂಡಳಿ ಸಭೆಗಳು ಸಲಹಾತ್ಮಕವಾಗಿದ್ದರೂ ಹಲವು ಪ್ರಮುಖ ವಿಚಾರಗಳನ್ನು ಪರಿಹರಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತವೆ. ಸದಸ್ಯ ರಾಜ್ಯಗಳ ಅತ್ಯುನ್ನತ ಹಂತದ ಆಡಳಿತ ಪ್ರತಿನಿಧಿಗಳು ಪರಸ್ಪರ ಭೇಟಿಯಾಗಿ ಚರ್ಚಿಸಲು ಇಂಥ ಸಭೆಗಳು ಅವಕಾಶ ಮಾಡಿಕೊಡುತ್ತವೆ ಎಂದು ಅಮಿತ್ ಶಾ ನುಡಿದರು.

ವಲಯ ಮಂಡಳಿ ಸಭೆಗಳಲ್ಲಿ ರಾಜ್ಯಗಳ ಗಡಿಗಳಿಗೆ ಸಂಬಂಧಿಸಿದ ವಿವಾದಗಳು, ಭದ್ರತೆ, ಮೂಲಸೌಕರ್ಯ ಸಮಸ್ಯೆಗಳು, ಪರಿಸರ, ವಸತಿ, ಶಿಕ್ಷಣ, ಆಹಾರ, ಪ್ರವಾಸೋದ್ಯಮ ಮತ್ತು ಸಾರಿಗೆ ಕುರಿತು ಚರ್ಚೆಗೆ ಅವಕಾಶವಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications