ಕಮಲ್, ರಜನಿ ರಾಜಕೀಯದಿಂದ ದೂರ ಇರಿ ಎಂದ ಚಿರಂಜೀವಿ
ಹೈದರಾಬಾದ್, ಸೆಪ್ಟೆಂಬರ್ 27: ನೀವು ಸೂಕ್ಷ್ಮ ಸಂವೇದನೆಯ ವ್ಯಕ್ತಿಯಾದರೆ ರಾಜಕಾರಣದಲ್ಲಿ ಇರುವುದು ಉಪಯೋಗ ಇಲ್ಲ ಎಂದು ತೆಲುಗಿನ ಮೆಗಾ ಸ್ಟಾರ್ ಚಿರಂಜೀವಿ ಅಭಿಪ್ರಾಯ ಪಟ್ಟಿದ್ದಾರೆ. ಇದು ರಜನೀಕಾಂತ್ ಹಾಗೂ ಕಮಲ್ ಹಾಸನ್ ಗೆ ಅವರು ನೀಡಿರುವ ಸಂದೇಶ. "ರಾಜಕೀಯದಿಂದ ದೂರ ಇರಿ" ಎಂದು ಚಿರಂಜೀವಿ ಇಬ್ಬರಿಗೂ ಸಲಹೆ ಮಾಡಿದ್ದಾರೆ.
ತಮಿಳು ನಿಯತಕಾಲಿಕೆ ಆನಂದ ವಿಕಟನ್ ಗೆ ಸಂದರ್ಶನ ನೀಡಿದ ಅವರು, ಒಳ್ಳೆಯ ಕೆಲಸ ಮಾಡುವ ಉದ್ದೇಶದಿಂದ ರಾಜಕಾರಣಕ್ಕೆ ಬರುವುದಕ್ಕೆ ನಿರ್ಧರಿಸಿದಾಗ ಸಿನಿಮಾ ಬದುಕಿನಲ್ಲಿ ನಂಬನ್ ಒನ್ ಸ್ಥಾನದಲ್ಲಿದ್ದೆ ಎಂದು ಅವರು ಹೇಳಿದ್ದಾರೆ.
"ರಾಜಕಾರಣ ಅನ್ನೋದು ಈಗ ಹಣ ಇರುವವರಿಗೆ ಆಗಿದೆ. ಕೋಟ್ಯಂತರ ರುಪಾಯಿ ಹಣ ಖರ್ಚು ಮಾಡಿ, ನನ್ನ ಸ್ವಂತ ಕ್ಷೇತ್ರದಲ್ಲೇ ಸೋಲಿಸಲಾಯಿತು. ಇತ್ತೀಚೆಗಿನ ಚುನಾವಣೆಯಲ್ಲಿ ನನ್ನ ತಮ್ಮ ಪವನ್ ಕಲ್ಯಾಣ್ ಗೂ ಅದೇ ಆಯಿತು" ಎಂದು ಚಿರಂಜೀವಿ ಹೇಳಿದ್ದಾರೆ.

ನೀವು ರಾಜಕಾರಣದಲ್ಲಿ ಇರಬೇಕು ಅಂದರೆ ಸೋಲು, ನಿರಾಸೆ ಹಾಗೂ ಅವಮಾನವನ್ನು ಎದುರಿಸಬೇಕು. ರಜನೀಕಾಂತ್ ಹಾಗೂ ಕಮಲ್ ಹಾಸನ್ ಜನರಿಗಾಗಿ ಕೆಲಸ ಮಾಡಬೇಕು ಅಂದುಕೊಂಡರೆ ಅಂಥ ಎಲ್ಲ ಸವಾಲು, ನಿರಾಸೆ ಎದುರಿಸಬೇಕು ಎಂದು ಹೇಳಿದ್ದಾರೆ.
ಇತ್ತೀಚೆಗೆ ಲೋಕಸಭಾ ಚುನಾವಣೆಯಲ್ಲಿ ಕಮಲ್ ಹಾಸನ್ ಅವರ ಪಕ್ಷ ಸ್ಪರ್ಧಿಸಿತ್ತು. ಆದರೆ ಕಮಲ್ ಸ್ಪರ್ಧೆ ಮಾಡಿರಲಿಲ್ಲ. ಇನ್ನು ರಜನೀಕಾಂತ್ ಇನ್ನೂ ರಾಜಕೀಯ ಪಕ್ಷವನ್ನು ರಚನೆ ಮಾಡಿಲ್ಲ ಹಾಗೂ ಯಾವುದೇ ಚುನಾವಣೆ ಎದುರಿಸಿಲ್ಲ. ಅಂದ ಹಾಗೆ ಚಿರಂಜೀವಿ ಪ್ರಜಾ ರಾಜ್ಯಂ ಪಾರ್ಟಿಯನ್ನು ಆಂಧ್ರಪ್ರದೇಶದಲ್ಲಿ ಸ್ಥಾಪಿಸಿದ್ದರು. ಅದು 2008ರಲ್ಲಿ ಸ್ಥಾಪಿಸಿದ ಪಕ್ಷ. 2009ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ 294 ಸ್ಥಾನಗಳ ಪೈಕಿ 18ರಲ್ಲಿ ಅವರ ಪಕ್ಷ ಗೆಲುವು ಸಾಧಿಸಿತು.
ತಿರುಪತಿ ಹಾಗೂ ಪಲಕೋಲ್ ಎರಡು ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದ್ದ ಚಿರಂಜೀವಿ, ಎರಡೂ ಕ್ಷೇತ್ರಗಳಲ್ಲಿ ಸೋಲುಂಡಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications