ಕಾರಿಡಾರ್ ಕಾರಣಕ್ಕೆ ಮಾತುಕತೆ ನಡೆಸುತ್ತೇವೆ ಎಂದಲ್ಲ: ಸುಷ್ಮಾ ಖಡಕ್ ಮಾತು
ಹೈದರಾಬಾದ್, ನವೆಂಬರ್ 28: ಭಾರತ-ಪಾಕಿಸ್ತಾನದ ಗಡಿಯಲ್ಲಿ ಕರ್ತರ್ ಪುರ್ ಕಾರಿಡಾರ್ ನಿರ್ಮಿಸುತ್ತಿರುವುದು ಉಭಯ ದೇಶಗಳ ನಡುವೆ ಮಾತುಕತೆ ನಡೆಯಲಿದೆ ಎಂಬುದರ ಅರ್ಥವಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ಭಯೋತ್ಪಾದನೆ ಮತ್ತು ಮಾತುಕತೆ ಎರಡೂ ಒಟ್ಟಿಗೆ ಸಾಗಲು ಸಾಧ್ಯವಿಲ್ಲ ಎಂದು ಅವರು ಪಾಕಿಸ್ತಾನಕ್ಕೆ ಖಡಕ್ ಸಂದೇಶ ರವಾನಿಸಿದ್ದಾರೆ.
'ಅನೇಕ ವರ್ಷಗಳಿಂದ ಭಾರತ ಸರ್ಕಾರ ಕರ್ತರ್ ಪುರ ಕಾರಿಡಾರ್ಗೆ ಪಾಕಿಸ್ತಾನವನ್ನು ಕೇಳುತ್ತಾ ಬಂದಿದೆ. ಆದರೆ ಪಾಕಿಸ್ತಾನ ಈಗ ಸಕಾರಾತ್ಮಕವಾಗಿ ಸ್ಪಂದಿಸಿದೆ. ಇದರ ಅರ್ಥ ಈ ಕಾರಣದಿಂದಾಗಿ ದ್ವಿಪಕ್ಷೀಯ ಮಾತುಕತೆ ಶುರುವಾಗಲಿದೆ ಎಂದಲ್ಲ. ಭಯೋತ್ಪಾದನೆ ಮತ್ತು ಮಾತುಕತೆ ಜತೆಯಾಗಿ ಸಾಗಲಾರವು' ಸುಷ್ಮಾ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸಾರ್ಕ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುವಂತೆ ಪಾಕಿಸ್ತಾನ ನೀಡಿರುವ ಆಹ್ವಾನಕ್ಕೆ ನಾವು ಸಕಾರಾತ್ಮಕವಾಗಿ ಪ್ರತಿಕ್ರಿಯಿಸುತ್ತಿಲ್ಲ. ಪಾಕಿಸ್ತಾನವು ಭಾರತದಲ್ಲಿ ಉಗ್ರ ಚಟುವಟಿಕೆಗಳನ್ನು ನಿಲ್ಲಿಸುವವರೆಗೂ ಯಾವುದೇ ಮಾತುಕತೆ ಇಲ್ಲ. ಹೀಗಾಗಿ ನಾವು ಸಾರ್ಕ್ನಲ್ಲಿ ಭಾಗವಹಿಸುವುದಿಲ್ಲ ಎಂದು ತಿಳಿಸಿದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications