ಬೆಂಗಳೂರು ಆಸ್ಪತ್ರೆಯಿಂದ ಪರಾರಿಯಾಗಿದ್ದ ಸೋಂಕು ಶಂಕಿತೆ ಆಂಧ್ರದಲ್ಲಿ ಪತ್ತೆ
ಬೆಂಗಳೂರು, ಮಾರ್ಚ್ 18: ನಗರದ ಸಿವಿ ರಾಮನ್ ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೊರೊನಾ ವೈರಸ್ ಸೋಂಕು ಶಂಕಿತೆ ಆಂಧ್ರಪ್ರದೇಶದ ಅನಂತಪುರದಲ್ಲಿ ಪತ್ತೆಯಾಗಿದ್ದಾರೆ.
ಕೊರೊನಾ ಸೋಂಕು ಶಂಕೆ ಹಿನ್ನೆಲೆಯಲ್ಲಿ ದಾಖಲಾಗಿದ್ದ ಅವರು ಆಸ್ಪತ್ರೆಯಿಂದ ಪರಾರಿಯಾಗಿದ್ದರು. ಈ ಬಗ್ಗೆ ಇಂದಿರಾನಗರ ಪೊಲೀಸ್ ಠಾಣೆಗೆ ವೈದ್ಯರು ದೂರು ನೀಡಿದ್ದರು.
ವೃದ್ಧನಿಗೆ ಚಿಕಿತ್ಸೆ ನೀಡಿದ್ದ ಕಲಬುರ್ಗಿಯ ವೈದ್ಯನಿಗೂ ಕೊರೊನಾ ಪಾಸಿಟಿವ್
ಈ ವೇಳೆ ಪೊಲೀಸರು ಹಾಗೂ ಆಸ್ಪತ್ರೆ ಸಿಬ್ಬಂದಿ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಬಳಿಕ ಅವರು ಆಂಧ್ರಪ್ರದೇಶ ಮೂಲದವರು ಎಂದು ತಿಳಿದುಬಂದಿದ್ದು, ಅಲ್ಲಿನ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿತ್ತು.
ಅನಂತಪುರ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇತ್ತೀಚೆಗಷ್ಟೇ ಅಮೆರಿಕದಿಂದ ಮಹಿಳೆ ವಾಪಸಾಗಿದ್ದರು. ವಿಮಾನ ನಿಲ್ದಾಣದಲ್ಲೇ ತಪಾಸಣೆ ನಡೆಸಲಾಗಿತ್ತು.
ಇಟಲಿಯಲ್ಲಿ 48 ಗಂಟೆಗಳಲ್ಲಿ ಕೊರೊನಾ ವೈರಸ್ನಿಂದ 717 ಮಂದಿ ಸಾವು
ಕೊರೊನಾ ಬಾಧಿತ ದೇಶದಿಂದ ಬಂದಿದ್ದ ಕಾರಣಕ್ಕಾಗಿ ಬಿ ಗುಂಪಿನವರೆಂದು ಗುರುತಿಸಿ ಸರ್ ಸಿವಿ ರಾಮನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಂಗಳವಾ ಅವರು ಆಸ್ಪತ್ರೆಯಿಂದ ಓಡಿ ಹೋಗಿದ್ದರು.