ಕೊರೊನಾಕ್ಕೆ 'Arsenic Alb 30 P' ಮಾತ್ರೆಗಳು ಮದ್ದಂತೆ!
ಹೈದರಾಬಾದ್, ಮಾರ್ಚ್ 4; ಜಗತ್ತಿನ ನಿದ್ದೆಗೆಡಿಸಿರುವ ಮಾರಕ ಕೊರೊನಾಗೆ ಮದ್ದು ಕಂಡು ಹಿಂಡಿಯಲು ಚೀನಾ ಅಮೆರಿಕ ಸೇರಿದಂತೆ ಅನೇಕ ರಾಷ್ಟ್ರಗಳು ಹೆಣಗಾಡುತ್ತಿವೆ.
ಚೀನಾದಲ್ಲಿ ಕಾಣಿಸಿಕೊಂಡು ಪ್ರಪಂಚದ ಬೇರೆ ಬೇರೆ ಕಡೆಗೆ ಪಸರಿಸುತ್ತಿರುವ ಕೊರೊನಾ ವೈರಸ್ ಸೋಂಕು ಭಾರತಕ್ಕೂ ಕಾಲಿಟ್ಟಿದೆ. ದೆಹಲಿ, ತೆಲಂಗಾಣ, ರಾಜಸ್ತಾನ ಹಾಗೂ ಇಟಲಿ ಪ್ರವಾಸಿಗರು ಸೇರಿದಂತೆ ಭಾರತದಲ್ಲಿ 16 ಪ್ರಕರಣಗಳು ಪತ್ತೆಯಾಗಿವೆ. ಕೊರೊನಾ ತಡೆಗಟ್ಟಲು ಇನ್ನೂ ಮದ್ದು ಕಂಡು ಹಿಡಿಯಲಾಗಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಆದರೆ, ತೆಲಂಗಾಣದಲ್ಲೂ ಒಂದು ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದ್ದರಿಂದ ತೆಲಂಗಾಣದ ಆಯುಷ್ ಇಲಾಖೆ ಮುನ್ನೆಚ್ಚರಿಕೆ ಕ್ರಮವಾಗಿ 'Arsenic Alb 30 P' ಹೋಮಿಯೋಪತಿ ಮಾತ್ರೆಗಳನ್ನು ಜನರಿಗೆ ಉಚಿತವಾಗಿ ನೀಡುತ್ತಿದೆ. ಸೆಂಟ್ರಲ್ ಕೌನ್ಸಿಲ್ ಆಫ್ ಹೋಮಿಯೋಪತಿ ನಿರ್ದೇಶನದ ಮೇರೆಗೆ ಮಾತ್ರೆಗಳನ್ನು ಹಂಚುತ್ತಿದ್ದೇವೆ ಎಂದು ತೆಲಂಗಾಣ ಆಯುಷ್ ಇಲಾಖೆಯ ಮುಖ್ಯಸ್ಥರು ಹೇಳಿದ್ದಾರೆ. ಇದು ಕೊರೊನಾ ಬರದಂತೆ ತಡೆಗಟ್ಟುತ್ತದೆ ಎಂದು ಹೇಳಿದ್ದಾರೆ. ಆ ಮಾತ್ರೆಗಳು ವೈಶಿಷ್ಟತೆ ಏನು? ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

ತೆಲಂಗಾಣದಲ್ಲೂ ಸೋಂಕು
ತೆಲಂಗಾಣದಲ್ಲಿ ಒಬ್ಬ ಟೆಕ್ಕಿಗೆ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿದ್ದರಿಂದ ಹೈದರಾಬಾದ್ನ ಜುಬಿಲಿ ಹಿಲ್ಸ್ನ ಮರಿ ಚೆನ್ನಾ ರೆಡ್ಡಿ ಮಾನವ ಸಂಪನ್ಮೂಲ ಅಧ್ಯಯನ ಕೇಂದ್ರದಲ್ಲಿ ಕೊರೊನಾ ವೈರಸ್ ಸೋಂಕು ತಗುಲಬಾರದು ಎಂದು ಮುನ್ನೆಚ್ಚರಿಕಾ ಕ್ರಮವಾಗಿ ಹೋಮಿಯೋಪತಿ ಮಾತ್ರೆಗಳನ್ನು ವಿತರಿಸಲಾಗುತ್ತಿದೆ.

Arsenic Alb 30 P ಮಾತ್ರೆಗಳು
Arsenic Alb 30 P ಎನ್ನುವ ಮಾತ್ರೆಗಳನ್ನು ಕೊರೊನಾ ಸೋಂಕು ತಗುಲದಂತೆ ಜನರಿಗೆ ಹಂಚಲಾಗುತ್ತದೆ. ಒಬ್ಬರಿಗೆ ಆರು ಮಾತ್ರೆಗಳನ್ನು ನೀಡಲಾಗುತ್ತಿದ್ದು, ಪ್ರತಿದಿನ ಮೂರು ಹೊತ್ತು ಊಟದ ಮೊದಲು ಹಾಗೂ ಊಟಕ್ಕಿಂತ ಮೊದಲು ಮಾತ್ರೆಗಳನ್ನು ತೆಗೆದುಕೊಳ್ಳಬೇಕು ಎಂದು ತೆಲಂಗಾಣ ಆಯುಷ್ ಇಲಾಖೆ ಹೇಳಿದೆ.

11,500 ಮಾತ್ರೆಗಳ ವಿತರಣೆ
ಮಂಗಳವಾರ ಹೈದರಾಬಾದ್ ಹಾಗೂ ಇನ್ನಿತರ ಕೆಲ ಕಡೆಗೆ 11,500 ಮಾತ್ರೆಗಳನ್ನು 3500 ಜನರಿಗೆ ವಿತರಿಸಲಾಗಿದೆ. ಜನ ಸ್ವಯಂ ಪ್ರೇರಿತವಾಗಿ ಬಂದು ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಆಯುಷ್ ಇಲಾಖೆ ತಿಳಿಸಿದೆ. ಕೊರೊನಾ ಅಲ್ಲದೇ, ಮಾರಕ ಹಂದಿಜ್ವರದಂತಹ ರೋಗ ಬರದಂತೆ ತಡೆಗಟ್ಟಲು Arsenic Alb 200 P ಎನ್ನುವ ಮಾತ್ರೆಗಳನ್ನು ವಿತರಿಸಲಾಗುತ್ತಿದೆ. ಚೀನಾದಲ್ಲಿ ಕೊರೊನಾ ಕಾಣಿಸಿಕೊಂಡ ನಂತರ ಹೈದರಾಬಾದ್ನ ರಾಜೀವಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಈ ಮಾತ್ರೆಗಳನ್ನು ಆಯುಷ್ ಇಲಾಖೆ ವಿತರಿಸಿತ್ತು.

ಹೋಮಿಯೋಪತಿ ಎಂದರೇನು?
ಇತ್ತೀಚೆಗೆ ಜನಪ್ರಿಯವಾಗುತ್ತಿರುವ ಹೋಮಿಯೋಪತಿ ಎಂದರೆ ಬಹಳ ಜನರಿಗೆ ಗೊತ್ತಿಲ್ಲ. ಖಾಯಿಲೆ ಬಂದ ವ್ಯಕ್ತಿಗೆ ಅದೇ ಖಾಯಿಲೆಯನ್ನು ತರುವ ಸಾಮರ್ಥ್ಯವುಳ್ಳ ಔಷಧಗಳನ್ನು ಅತ್ಯಲ್ಪ ಪ್ರಮಾಣದಲ್ಲಿ ನೀಡುವುದರ ಮೂಲಕ ಚಿಕಿತ್ಸೆ ಮಾಡುವುದೇ ಹೋಮಿಯೋಪತಿ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications