ತೆಲಂಗಾಣ:ಭ್ರಷ್ಟಾಚಾರ ಆರೋಪದಲ್ಲಿ ಜೈಲು ಸೇರಿದ್ದ ತಹಶೀಲ್ದಾರ್ ಆತ್ಮಹತ್ಯೆ
ಹೈದರಾಬಾದ್, ಅಕ್ಟೋಬರ್ 14: ಭ್ರಷ್ಟಾಚಾರ ಆರೋಪದಲ್ಲಿ ಜೈಲು ಸೇರಿದ್ದ ತಹಶೀಲ್ದಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಲಂಚ ಪ್ರಕರಣ ಹಿನ್ನೆಲೆಯಲ್ಲಿ ಎನ್ ಸಿಬಿ ಅಧಿಕಾರಿಗಳು ನಾಗರಾಜು ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದರು. ಜೊತೆಗೆ ಅವರ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಿದ್ದರು. 5 ಕೋಟಿ ರು ಲಂಚ ಸ್ವೀಕರಿಸುವ ವೇಳೆ ನಾಗರಾಜ್ ಎಸಿಬಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು.
ಭ್ರಷ್ಟಾಚಾರ ಆರೋಪದ ಮೇಲೆ ಸೆರೆವಾಸದಲ್ಲಿದ್ದ ಕೀಸರ ಮಾಜಿ ತಹಶೀಲ್ದಾರ್ ಚಂಚಲಗೂಡ ಜೈಲಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರನ್ನು ಎರ್ವಾ ಬಸವರಾಜು ನಾಗರಾಜು ಎಂದು ಗುರುತಿಸಲಾಗಿದೆ, ಜೈಲಿನ ಕೊಠಡಿಯಲ್ಲಿ ಅವರ ದೇಹ ನೇತಾಡುತ್ತಿದ್ದನ್ನು ನೋಡಿದ ಜೈಲರ್ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮುಂದಿನ ಪ್ರಕ್ರಿಯೆ ಮುಂದುವರಿಸಲಾಗಿದೆ.












Click it and Unblock the Notifications