ತೆಲಂಗಾಣದಲ್ಲಿ 120 ಅಡಿ ಕೊಳವೆ ಬಾವಿಗೆ ಬಿದ್ದ 3 ವರ್ಷದ ಮಗು
ಹೈದ್ರಾಬಾದ್, ಮೇ.27: ಕೊಳವೆ ಬಾವಿ ದುರಂತಗಳ ಸಂಖ್ಯೆ ಕಡಿಮೆಯಾಯ್ತು ಅಂದುಕೊಳ್ಳುವುದರಲ್ಲೇ ತೆಲಂಗಾಣದಲ್ಲಿ 3 ವರ್ಷದ ಪುಟ್ಟ ಬಾಲಕ 120 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ಬುಧವಾರ ನಡೆದಿದೆ. ರಾಜ್ಯ ರಾಜಧಾನಿಯಿಂದ 100 ಕಿಲೋ ಮೀಟರ್ ಅಂತರದಲ್ಲೇ ಮತ್ತೊಂದು ಕೊಳವೆ ಬಾವಿ ದುರಂತ ಸಂಭವಿಸಿದೆ.
ತೆಲಂಗಾಣದ ಮೇದಕ್ ಜಿಲ್ಲೆಯ ಪೋಚಂಪಲ್ಲಿ ಪ್ರದೇಶದಲ್ಲಿ 3 ವರ್ಷದ ಬಾಲಕ ಕೊಳವೆ ಬಾವಿಗೆ ಬಿದ್ದಿದ್ದು, ಬಾಲಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರಿಸಲಾಗುತ್ತಿದೆ. ಇನ್ನು ಕೊಳವೆ ಬಾವಿಗೆ ಬಿದ್ದಿರುವ ಬಾಲಕನ ಹೆಸರು ಸಾಯಿ ವರ್ಧನ್ ಎಂದು ಗುರುತಿಸಲಾಗಿದೆ.
ಕಳೆದ ವಾರ ಬಾಲಕ ಸಾಯಿ ವರ್ಧನ್ ಅಜ್ಜ ಬಿಕ್ಷಾಪತಿ ತಮ್ಮ ಕೃಷಿ ಜಮೀನಿನಲ್ಲಿ ಮೂರು ಬೋರ್ ವೆಲ್ ಗಳನ್ನು ತೆಗೆಸಿದ್ದರು. ಆದರೆ ಈ ಪೈಕಿ ಒಂದರಲ್ಲೂ ನೀರು ಬಂದಿರಲಿಲ್ಲ. ಇನ್ನೇನು ಕೊಳವೆ ಬಾವಿಗಳನ್ನು ಮುಚ್ಚಬೇಕು ಎಂದುಕೊಳ್ಳುವಷ್ಟರಲ್ಲೇ ದುರಂತ ನಡೆದು ಹೋಗಿದೆ ಎಂದು ಬಾಲಕನ ತಂದೆ ಗೋವರ್ಧನ್ ತಿಳಿಸಿದ್ದಾರೆ.

ರಜೆ ದಿನ ಕಳೆಯಲು ಅಜ್ಜನ ಮನೆಗೆ ಬಂದಿದ್ದ ಬಾಲಕ:
ತೆಲಂಗಾಣದಲ್ಲಿರುವ ಸಂಗಾರೆಡ್ಡಿ ಜಿಲ್ಲೆಯ ಪತಂಚೇರು ಮೂಲದ 3 ವರ್ಷದ ಬಾಲಕ ಸಾಯಿ ವರ್ಧನ್ ರಜೆ ಅವಧಿಯನ್ನು ಕಳೆಯಲು ತಮ್ಮ ಅಜ್ಜನ ಮನೆಗೆ ಆಗಮಿಸಿದ್ದನು ಎಂದು ಎನ್ ಟಿವಿ ವರದಿ ಮಾಡಿದೆ. 120 ಅಡಿ ಕೊಳವೆ ಬಾವಿಗೆ ಬಾಲಕನು ಬಿದ್ದಿರುವ ವಿಷಯ ತಿಳಿಯುತ್ತಿದ್ದಂತೆ ಮೇದಕ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿಯು ಸ್ಥಳಕ್ಕೆ ದೌಡಾಯಿಸಿದ್ದು ಮಗುವಿನ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications