ತೆಲಂಗಾಣ: ನಾಳೆಯೇ ಮುಖ್ಯಮಂತ್ರಿಯಾಗಿ ಕೆಸಿಆರ್ ಪ್ರಮಾಣವಚನ
Recommended Video

ಹೈದರಾಬಾದ್, ಡಿಸೆಂಬರ್ 11: ಚುನಾವಣೋತ್ತರ ಸಮೀಕ್ಷೆಗಳ ಲೆಕ್ಕಾಚಾರವನ್ನೂ ಮೀರಿ ತೆಲಂಗಾಣದಲ್ಲಿ ಕೆ. ಚಂದ್ರಶೇಖರ ರಾವ್ ನೇತೃತ್ವದ ತೆಲಂಗಾಣ ರಾಷ್ಟ್ರೀಯ ಸಮಿತಿ ಭಾರಿ ಜಯಭೇರಿ ಭಾರಿಸಿದೆ.
ಈ ಮೂಲಕ ಸತತ ಎರಡನೆಯ ಬಾರಿ ಟಿಆರ್ ಎಸ್ ಅಧಿಕಾರಕ್ಕೆ ಬಂದಿದೆ. ಹಾಗೆಯೆ ಕೆ. ಚಂದ್ರಶೇಖರ್ ರಾವ್ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಗದ್ದುಗೆ ಏರಲಿದ್ದಾರೆ.
ನಿಚ್ಚಳ ಬಹುಮತ ಪಡೆದುಕೊಂಡಿರುವುದರಿಂದ ಕೆ. ಚಂದ್ರಶೇಖರ್ ರಾವ್ ಅವರಿಗೆ ಸರ್ಕಾರ ರಚನೆ ಹಾದಿ ಸುಗಮವಾಗಿದೆ. ಗೆದ್ದ ಹುಮ್ಮಸ್ಸಿನಲ್ಲಿರುವ ಅವರು, ಇಂದೇ ರಾಜ್ಯಪಾಲರನ್ನು ಭೇಟಿ ಮಾಡಿ ಬುಧವಾರವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುವುದಾಗಿ ಘೋಷಿಸಿದ್ದಾರೆ.

ಸರ್ಕಾರ ರಚನೆ ಸಂಬಂಧ ಸಂಜೆ ನಾಲ್ಕು ಗಂಟೆ ಸುಮಾರಿಗೆ ಟಿಆರ್ ಎಸ್ ಪಕ್ಷದ ಸಭೆ ಕರೆದಿರುವ ಚಂದ್ರಶೇಖರ್ ರಾವ್, ಪಕ್ಷದ ಶಾಸಕರು ಮತ್ತು ಮುಖಂಡರ ಜೊತೆ ಮಾತುಕತೆ ನಡೆಸಲಿದ್ದಾರೆ. ಬಳಿಕ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.
119 ಕ್ಷೇತ್ರಗಳ ವಿಧಾನಸಭೆಯಲ್ಲಿ ಬಹುಮತ ಗಳಿಸಲು 60 ಸೀಟುಗಳು ಬೇಕು. ತೆಲಂಗಾಣ ರಾಜ್ಯ ರಚನೆಯಾದ ಬಳಿಕ ನಡೆದ ಮೊದಲ ಚುನಾವಣೆಯಲ್ಲಿ 63 ಸೀಟುಗಳಲ್ಲಿ ಗೆದ್ದಿದ್ದ ಟಿಆರ್ ಎಸ್ ಸರಳ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತ್ತು.
ಅವಧಿಗೂ ಮುನ್ನವೇ ವಿಧಾನಸಭೆ ವಿಸರ್ಜಿಸಿದ್ದ ಕೆಸಿಆರ್, ಬೇಗನೆ ಚುನಾವಣೆಗೆ ಮುಂದಾಗಿದ್ದರು.
ಈ ಬಾರಿ ಕಾಂಗ್ರೆಸ್ ಮತ್ತು ಟಿಡಿಪಿ ಹಾಗೂ ಇತರೆ ಕೆಲವು ಪಕ್ಷಗಳು ಜೊತೆಗೂಡಿ ಟಿಆರ್ ಎಸ್ ವಿರುದ್ಧ ಸ್ಪರ್ಧೆಗೆ ಇಳಿದಿದ್ದವು. ಆದರೆ, ತೆಲಂಗಾಣದ ಮತದಾರರು ಕೆಸಿಆರ್ ಗೆ ವ್ಯಾಪಕ ಬೆಂಬಲ ವ್ಯಕ್ತಪಡಿಸಿದ್ದಾರೆ. ಇದರಿಂದ ಟಿಆರ್ ಎಸ್ ವಿರುದ್ಧದ ಮಹಾಮೈತ್ರಿಕೂಟ ಹೀನಾಯ ಸೋಲು ಅನುಭವಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications