1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದ ಟಿಆರ್ಎಸ್ ಅಭ್ಯರ್ಥಿ
ಹೈದರಾಬಾದ್, ಡಿಸೆಂಬರ್ 11 : ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಟಿಆರ್ಎಸ್ ಸ್ಪಷ್ಟ ಬಹುಮತ ಪಡೆದಿದೆ. ಚುನಾವಣಾ ಕಣದಲ್ಲಿ ಹರೀಶ್ ರಾವ್ ಅವರು 1 ಲಕ್ಷಕ್ಕೂ ಅಧಿಕ ಮತಗಳ ಗೆಲುವು ದಾಖಲಿಸಿದ್ದಾರೆ.
ಸಿದ್ದಿಪೇಟೆ ಕ್ಷೇತ್ರದಿಂದ ಕಣಕ್ಕಿಳಿದಿದ್ದ ನೀರಾವರಿ ಸಚಿವ ಹರೀಶ್ ರಾವ್ ಅವರು ಟಿಜೆಎಸ್ ಅಭ್ಯರ್ಥಿ ಮರಿಕಂಟಿ ಭವಾನಿ ರೆಡ್ಡಿ ವಿರುದ್ಧ 106816 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಅವರು ದಾಖಲೆ ಮಾಡಿದ್ದಾರೆ.
2004ರಲ್ಲಿ ಮೊದಲ ಬಾರಿಗೆ ಹರೀಶ್ ರಾವ್ ಶಾಸಕರಾಗಿ ಆಯ್ಕೆಯಾಗಿದ್ದರು. ಬಳಿಕ ಎಲ್ಲಾ ಚುನಾವಣೆಗಳಲ್ಲಿ ಗೆಲುವು ಸಾಧಿಸುವ ಮೂಲಕ ಸೋಲಿಲ್ಲದ ಸರದಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಟಿಆರ್ಎಸ್ ಸರ್ಕಾರದಲ್ಲಿ ಅವರು ಪುನಃ ಸಚಿವರಾಗುವುದು ಖಚಿತವಾಗಿದೆ.

ಚಾರ್ಮಿನಾರ್ ಕ್ಷೇತ್ರದಲ್ಲಿ ಎಂಐಎಂ ಅಭ್ಯರ್ಥಿ 1 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಹರೀಶ್ ರಾವ್ ಅವರು ಈ ದಾಖಲೆಯನ್ನು ಮುರಿದಿದ್ದಾರೆ.
ಸಿದ್ದಿಪೇಟೆ ಕ್ಷೇತ್ರ ಟಿಆರ್ಎಸ್ ಭದ್ರಕೋಟೆಯಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಚಲಾವಣೆಯಾದ ಶೇ 80ಕ್ಕೂ ಅಧಿಕ ಮತಗಳು ಹರೀಶ್ ರಾವ್ ಅವರಿಗೆ ಸಿಕ್ಕಿವೆ.
2004ರ ಉಪ ಚುನಾವಣೆಯಲ್ಲಿ 25 ಸಾವಿರ, 2008ರ ಉಪ ಚುನಾವಣೆಯಲ್ಲಿ 58 ಸಾವಿರ, 2010ರ ಉಪ ಚುನಾವಣೆಯಲ್ಲಿ 93 ಸಾವಿರ ಮತಗಳ ಅಂತರದಿಂದ ಹರೀಶ್ ರಾವ್ ಅವರು ಗೆಲುವು ಸಾಧಿಸಿದ್ದರು. ಅವರ ಗೆಲುವಿನ ಅಂತರ ಹೆಚ್ಚಾಗುತ್ತಲೇ ಹೋಗುತ್ತಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications