ತೆಲಂಗಾಣ ಚುನಾವಣೆ: ಕೈ ಪಟ್ಟಿಯಲ್ಲಿ 10 ಮಂದಿ ಸಿಎಂ ಆಕಾಂಕ್ಷಿಗಳು
ಹೈದರಾಬಾದ್, ನವೆಂಬರ್ 13: ತೆಲಂಗಾಣ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ತನ್ನ 65 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ 10ಕ್ಕೂ ಅಧಿಕ ಮಂದಿ ಸಿಎಂ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದ ನಡೆದ ಚುನಾವಣಾ ಉಸ್ತುವಾರಿ ಸಭೆ ನಂತರ ಸಿಇಸಿ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಅವರು ಈ ಪಟ್ಟಿಯನ್ನು ಬಿಡುಗಡೆ ಮಾಡಿದರು.
ಕೇಂದ್ರ ಸರ್ಕಾರದಿಂದ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡದ ಕಾರಣ ನೀಡಿ ಬಿಜೆಪಿ ನೇತೃತ್ವದ ಎನ್ಡಿಎ ಒಕ್ಕೂಟದಿಂದ ಟಿಡಿಪಿ ಹೊರಬಂದಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್ ಜತೆ ಕೈ ಜೋಡಿಸಿದೆ. ಹೀಗಾಗಿ, ತೆಲಂಗಾಣದಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಫರ್ಧೆ ಮಾಡಲಿದೆ.

ಕಾಂಗ್ರೆಸ್- ಟಿಡಿಪಿ ಮೈತ್ರಿ ಹಾಗೂ ಬಿಜೆಪಿಗೆ ಕೆ ಚಂದ್ರಶೇಖರರಾವ್ ನೇತೃತ್ವದ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ ಎಸ್) ಎದುರಾಳಿಯಾಗಿದೆ.
ಕಾಂಗ್ರೆಸ್ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಸುಮಾರು 20 ಕ್ಕೂ ಹೆಚ್ಚು ಹಿರಿಯ ರಾಜಕಾರಣಿಗಳಿದ್ದಾರೆ. ಉತ್ತಮ್ಕುಮಾರ್ ರೆಡ್ಡಿ, ಜನರೆಡ್ಡಿ, ರೇವಂತ ರೆಡ್ಡಿ, ಕೊಮಟಿ ರೆಡ್ಡಿ, ಗೀತಾ ರೆಡ್ಡಿ, ಡಿ ಕೆ ಅರುಣಾ ರೆಡ್ಡಿ ಹಾಗೂ ವಂಶಿ ಚಂದ್ರ ರೆಡ್ಡಿ ಸೇರಿದಂತೆ 10ಕ್ಕೂ ಅಧಿಕ ಮಂದಿ ಕಾಂಗ್ರೆಸ್ ಅಭ್ಯರ್ಥಿಗಳು ಸಿಎಂ ಆಕಾಂಕ್ಷಿಗಳಾಗಿದ್ದಾರೆ.
INC COMMUNIQUE
— INC Sandesh (@INCSandesh) November 12, 2018
Announcement of Congress candidates for the ensuing elections to Legislative Assembly of Telangana. @INCTelangana pic.twitter.com/MkZwl7INeo
119 ಸದಸ್ಯ ಬಲದ ತೆಲಂಗಾಣ ರಾಜ್ಯ ವಿಧಾನಸಭೆ ಚುನಾವಣೆಯು ಒಂದೇ ಹಂತದಲ್ಲಿ ಡಿಸೆಂಬರ್ 7 ರಂದು ನಡೆಯಲಿದ್ದು, ಈ ತಿಂಗಳ 19 ರಂದು ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದೆ. ಡಿಸೆಂಬರ್ 12ರಂದು ಫಲಿತಾಂಶ ಹೊರಬೀಳಲಿದೆ. ಕೆ ಚಂದ್ರಶೇಖರರಾವ್ ಅವರು ವಿಧಾನಸಭೆ ವಿಸರ್ಜಿಸಿದ್ದರಿಂದ ತೆಲಂಗಾಣದಲ್ಲಿ ಅವಧಿಗೆ ಮುನ್ನ ಚುನಾವಣೆ ಎದುರಿಸಬೇಕಾಗಿ ಬಂದಿದೆ.












Click it and Unblock the Notifications