ತೆಲಂಗಾಣದಲ್ಲೇ ಮೊದಲು ಚುನಾವಣೆ, 4 ರಾಜ್ಯಗಳಲ್ಲಿ ನಂತರ
ಹೈದರಾಬಾದ್, ಸೆಪ್ಟೆಂಬರ್ 10: ಈ ವರ್ಷ ಡಿಸೆಂಬರ್ ನಲ್ಲಿ ನಡೆಯಲಿರುವ ನಾಲ್ಕು ರಾಜ್ಯಗಳ ಚುನಾವಣೆಯೊಟ್ಟಿಗೇ ತೆಲಂಗಾಣ ಚುನಾವಣೆಯೂ ನಡೆಯಬಹುದು ಎಂಬ ಊಹೆ ತಪ್ಪಾಗುವ ಎಲ್ಲಾ ಸಾಧ್ಯತೆಗಳಿವೆ.
ಸೆ.11 ರಂದು ಈ ಕುರಿತು ಅಂತಿಮ ನಿರ್ಧಾರ ಹೊರಬರಲಿದ್ದು, ನಾಲ್ಕು ರಾಜ್ಯಗಳ ಚುನಾವಣೆಗೂ ಮುನ್ನವೇ ತೆಲಂಗಾಣದಲ್ಲಿ ಚುನಾವಣೆ ನಡೆಯಬಹುದು ಎನ್ನಲಾಗಿದೆ.
ಡಿಸೆಂಬರ್ ನಲ್ಲಿ ಮಧ್ಯಪ್ರದೇಶ, ಛತ್ತೀಸ್ ಗಢ, ರಾಜಸ್ಥಾನ ಮತ್ತು ಮಿಜೋರಾಂಗಳಲ್ಲಿ ನಡೆಯಲಿರುವ ಚುನಾವಣೆಯೊಂದಿಗೆ ತೆಲಂಗಾಣ ಚುನಾವಣೆಯನ್ನು ನಡೆಸಲು ಸಾಧ್ಯವಿಲ್ಲ. ಏಕೆಂದರೆ ತೆಲಂಗಾಣ ವಿಧಾನಸಭೆಯನ್ನು ಈಗಾಗಲೇ ವಿಸರ್ಜಿಸಲಾಗಿದ್ದು, ಸೆ.06 ರಂದೇ ವಿಧಾನಸಭೆಯ ಕಾಲಾವಧಿ ಅಂತ್ಯವಾಗಿದೆ. ಆದರೆ ಉಳಿದ ನಾಲ್ಕು ರಾಜ್ಯಗಳ ವಿಧಾನಸಭೆಯ ಅವಧಿ ಡಿಸೆಂಬರ್ ಮತ್ತು ಜನವರಿಯವರೆಗೂ ಇರುವುದರಿಂದ ಅವುಗಳ ಚುನಾವಣೆಯನ್ನು ತುರ್ತಾಗಿ ಮಾಡುವ ಪ್ರಮೇಯವಿಲ್ಲ.

ತೆಲಂಗಾಣ ರಾಷ್ಟ್ರೀಯ ಸಮಿತಿ(ಟಿಆರ್ ಎಸ್) ಪಕ್ಷದ ಮುಖಂಡ, ತೆಲಂಗಾಣದ ಮುಖ್ಯಮಂತ್ರಿಯಾಗಿದ್ದ ಕೆ.ಚಂದ್ರಶೇಖರ್ ರಾವ್ ಅವರು ಸೆ.6 ರಂದು ತೆಲಂಗಾಣ ವಿಧಾನಸಭೆಯನ್ನು ವಿಸರ್ಜಿಸಿದ ಕಾರಣ ಇಲ್ಲಿ ಚುನಾವಣೆ ನಡೆಯಬೇಕಿದೆ. ವಿಧನಾಸಭೆ ವಿಸರ್ಜಿಸದೆ ಇದ್ದಿದ್ದರೆ 2019 ಜೂನ್ ವರೆಗೂ ತೆಲಂಗಾಣದಲ್ಲಿ ಚುನಾವಣೆ ನಡೆಸುವ ಅಗತ್ಯವಿರಲಿಲ್ಲ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications