Get Updates
Get notified of breaking news, exclusive insights, and must-see stories!

ಮೋದಿ ರ್‍ಯಾಲಿಗೆ ಪರ್ಯಾಯವಾಗಿ ಯಶವಂತ ಸಿನ್ಹಾ ರ್‍ಯಾಲಿ ಆಯೋಜಿಸಿದ ಕೆಸಿಆರ್

ಹೈದರಾಬಾದ್‌, ಜು.2: ತೆಲಂಗಾಣ ರಾಜಧಾನಿ ಹೈದರಾಬಾದ್‌ನಲ್ಲಿ ರಾಷ್ಟ್ರೀಯ ಪಕ್ಷ ಬಿಜೆಪಿ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಆಯೋಜಿಸಿದ್ದು, ದಕ್ಷಿಣ ರಾಜ್ಯಗಳ ಮೇಲೆ ಅದರಲ್ಲೂ ತೆಲಂಗಾಣದ ಮೇಲೆ ಕಣ್ಣಿಟ್ಟಿದೆ. ಹೀಗಾಗಿ ಇದಕ್ಕೆ ಪ್ರತಿರೋಧ ಎಂಬಂತೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ರಾವ್‌ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪರ್ಯಾಯವಾಗಿ ರಾಷ್ಟ್ರಪತಿ ಅಭ್ಯರ್ಥಿ ಯಶವಂತ ಸಿನ್ಹಾ ಅವರ ರ್‍ಯಾಲಿ ಆಯೋಜಿಸಿದ್ದಾರೆ.

ತೆಲಂಗಾಣದ ರಾಜಧಾನಿ ಹೈದರಾಬಾದ್‌ನಲ್ಲಿ ಇಂದು ಎರಡು ಬೃಹತ್ ಶಕ್ತಿ ಪ್ರದರ್ಶನ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿರುವ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಬಿಜೆಪಿ ನಡೆಸುತ್ತಿರುವಾಗ, ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸಿ ರ್‍ಯಾಲಿಯನ್ನು ಆಯೋಜಿಸಿದೆ.

ಇದೇ ಜು. 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಪ್ರಚಾರಕ್ಕಾಗಿ ಆಗಮಿಸಿರುವ ಯಶ್ವಂತ್ ಸಿನ್ಹಾ ಅವರನ್ನು ಟಿಆರ್‌ಎಸ್ ಅಧ್ಯಕ್ಷ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಬೇಗಂಪೇಟೆ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಅದೇ ವಿಮಾನ ನಿಲ್ದಾಣದಲ್ಲಿ ಇಳಿಯುವ ಕೆಲವೇ ಗಂಟೆಗಳ ಮೊದಲು ಬರಮಾಡಿಕೊಂಡರು.

 ಯಶವಂತ ಸಿನ್ಹಾ ಬೆಂಬಲಿಸಿ ಸಭೆ

ಯಶವಂತ ಸಿನ್ಹಾ ಬೆಂಬಲಿಸಿ ಸಭೆ

ಟಿಆರ್‌ಎಸ್ ಕಾರ್ಯಕರ್ತರು ವಿಮಾನ ನಿಲ್ದಾಣದಿಂದ ಜಲ ವಿಹಾರ್‌ಗೆ ಬೃಹತ್ ಬೈಕ್ ರ್‍ಯಾಲಿ ನಡೆಸಿದರು. ಅಲ್ಲಿ ಯುಪಿಎ ಬೆಂಬಲಿತ ರಾಷ್ಟ್ರಪತಿ ಅಭ್ಯರ್ಥಿ ಯಶವಂತ ಸಿನ್ಹಾ ಅವರ ಉಮೇದುವಾರಿಕೆಯನ್ನು ಬೆಂಬಲಿಸಿ ಸಭೆಯನ್ನು ಆಯೋಜಿಸಲಾಗಿದೆ. ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ತಮ್ಮ ಬೆಂಬಲವನ್ನು ಪಡೆಯಲು ಯಶವಂತ್ ಸಿನ್ಹಾ ಅವರು ಎಐಎಂಐಎಂ ಮತ್ತು ಕಾಂಗ್ರೆಸ್ ನಾಯಕರನ್ನು ಪ್ರತ್ಯೇಕವಾಗಿ ಭೇಟಿ ಮಾಡಲು ನಿರ್ಧರಿಸಿದ್ದಾರೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಗಿಂತ ಅಧ್ಯಕ್ಷರಾಗಿ ಆಯ್ಕೆಯಾದರೆ ಅವರು ಹೆಚ್ಚು ಸಾಂವಿಧಾನಿಕ ಆಯ್ಕೆ ಎಂದು ತಮ್ಮನ್ನು ಯಶವಂತ್‌ ಸಿನ್ಹಾ ಸಮರ್ಥಿಸಿಕೊಂಡಿದ್ದಾರೆ.

 ಯಶವಂತ್ ಸಿನ್ಹಾಗೆ ಕೆಸಿಆರ್‌ ಸ್ವಾಗತ

ಯಶವಂತ್ ಸಿನ್ಹಾಗೆ ಕೆಸಿಆರ್‌ ಸ್ವಾಗತ

ಹೈದರಾಬಾದ್‌ ನಗರದ ರಸ್ತೆಗಳಲ್ಲಿ ಈಗಾಗಲೇ ಪೋಸ್ಟರ್ ವಾರ್ ಶುರುವಾಗಿದೆ. ಬಿಜೆಪಿಯು ಕೇಂದ್ರದ ಸಾಧನೆಗಳನ್ನು ಬಿಂಬಿಸುವ ಕಟೌಟ್‌ಗಳು ಮತ್ತು ಬ್ಯಾನರ್‌ಗಳನ್ನು ಹಾಕಿದ್ದರೆ, ಟಿಆರ್‌ಎಸ್ ಕೆಸಿಆರ್ ಮತ್ತು ಯಶವಂತ್ ಸಿನ್ಹಾ ಅವರಿರುವ ಪೋಸ್ಟರ್‌ಗಳನ್ನು ಹಾಕಿದೆ. ರಾವ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಳ್ಳದಿರುವುದು ಆರು ತಿಂಗಳಲ್ಲಿ ಇದು ಮೂರನೇ ಬಾರಿ.

 ಸಮಾನತೆಯ ಪ್ರತಿಮೆ ಉದ್ಘಾಟನೆ ವೇಳೆಯೂ ಭೇಟಿ ಇಲ್ಲ

ಸಮಾನತೆಯ ಪ್ರತಿಮೆ ಉದ್ಘಾಟನೆ ವೇಳೆಯೂ ಭೇಟಿ ಇಲ್ಲ

ಇದಕ್ಕೂ ಮೊದಲು ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ 20ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಿದಾಗ ಅವರು ಮೇ ತಿಂಗಳಲ್ಲಿ ಬೆಂಗಳೂರಿಗೆ ಬಂದಿದ್ದರು. ರಾವ್ ಅವರು ಫೆಬ್ರವರಿಯಲ್ಲಿ ಹೈದರಾಬಾದ್‌ನಲ್ಲಿ ಸಮಾನತೆಯ ಪ್ರತಿಮೆಯನ್ನು ಉದ್ಘಾಟಿಸಲು ಬಂದಾಗ ಪ್ರಧಾನ ಮಂತ್ರಿಯನ್ನು ಭೇಟಿಯಾಗುವುದನ್ನು ತಪ್ಪಿಸಿಕೊಂಡಿದ್ದರು.

 ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಸಭೆ

ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಸಭೆ

2024ರ ರಾಷ್ಟ್ರೀಯ ಚುನಾವಣೆ ಸೇರಿದಂತೆ ಮುಂಬರುವ ಚುನಾವಣೆಗಳಲ್ಲಿ ಬಿಜೆಪಿಯನ್ನು ಎದುರಿಸಲು ವಿರೋಧ ಪಕ್ಷದ ಮೈತ್ರಿಯನ್ನು ರೂಪಿಸುವ ಪ್ರಯತ್ನಗಳನ್ನು ಮುಖ್ಯಮಂತ್ರಿ ಚಂದ್ರಶೇಖರ್‌ ರಾವ್‌ ನಡೆಸುತ್ತಿದ್ದಾರೆ. ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ, ಐದು ವರ್ಷಗಳ ನಂತರ ರಾಷ್ಟ್ರ ರಾಜಧಾನಿಯ ಹೊರಗೆ ಪಕ್ಷದ ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯ ಮೊದಲ ಭೌತಿಕ ಸಭೆಯಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ, ಸೇರಿದಂತೆ 19 ರಾಜ್ಯಗಳು ಮತ್ತು ಇತರ ಬಿಜೆಪಿ ಹಿರಿಯ ನಾಯಕರು, ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಭಾನುವಾರ ಮಧ್ಯಾಹ್ನ, ಪ್ರಧಾನ ಮಂತ್ರಿ ಅವರು ಹೈದರಾಬಾದ್‌ನ ಪರೇಡ್ ಮೈದಾನದಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+