ತೆಲಂಗಾಣ ಸಿಎಂ ಕೆಸಿಆರ್ 'ಬಾಹುಬಲಿ ಮುಹೂರ್ತ'ದಲ್ಲಿ ಅಧಿಕಾರ ಸ್ವೀಕಾರ
ಹೈದರಾಬಾದ್, ಡಿಸೆಂಬರ್ 13: ತೆಲಂಗಾಣದಲ್ಲಿ ಸತತ ಎರಡನೇ ಬಾರಿಗೆ ಮುಖ್ಯಮಂತ್ರಿ ಆದ ತೆಲಂಗಾಣ ರಾಷ್ಟ್ರ ಸಮಿತಿ ಅಧ್ಯಕ್ಷ ಕೆ.ಚಂದ್ರಶೇಖರ್ ರಾವ್ ಅವರಿಗೆ ದೈವ ನಂಬಿಕೆಗಳು ವಿಪರೀತ. ವಾಸ್ತು, ಜ್ಯೋತಿಷ್ಯ ಇತ್ಯಾದಿ ವಿಚಾರಗಳಲ್ಲಿ ಅವರ ನಂಬಿಕೆಯು ಜನರ ಟೀಕೆಗೆ ಗುರಿ ಆಗುವಷ್ಟರ ಮಟ್ಟಿಗೆ ಪ್ರಚಾರ ಪಡೆದಿವೆ. ಆದರೆ ಇಂಥ ಯಾವ ಮಾತಿಗೂ ಜಗ್ಗುವ ಆಸಾಮಿ ಅವರಲ್ಲ.
ಇದಕ್ಕೆ ತಾಜಾ ಉದಾಹರಣೆ ಅಂದರೆ, ಗುರುವಾರದಂದು ಮಧ್ಯಾಹ್ನ 1.25ಕ್ಕೆ ಸರಿಯಾಗಿ ಅಧಿಕಾರ ಸ್ವೀಕಾರ ಪ್ರಮಾಣ ತೆಗೆದುಕೊಂಡಿದ್ದಾರೆ. ಈ ಮುಹೂರ್ತವನ್ನು ನಿಗದಿ ಮಾಡಿಕೊಟ್ಟಿರುವವರು ಭೊಂಗಿರ್ ಜಿಲ್ಲೆಯ ಯಾದಗಿರಿ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ವೇದ ಪಂಡಿತರು. ಈ ಸ್ಥಳವು ತೆಲಂಗಾಣದಲ್ಲಿರುವ ಪ್ರಖ್ಯಾತವಾದ ತೀರ್ಥ ಕ್ಷೇತ್ರ.
ಮುಹೂರ್ತ ನಿಗದಿ ಮಾಡಿರುವ ಪಂಡಿತರ ಪ್ರಕಾರ ಕೆ.ಚಂದ್ರಶೇಖರ್ ರಾವ್ ಅವರು 'ಬಾಹುಬಲಿ ಮುಹೂರ್ತ'ದಲ್ಲಿ ಪದವಿ ಪ್ರಮಾಣ ಸ್ವೀಕರಿಸಿದ್ದಾರಂತೆ. ಹಿಂದೂ ಪದ್ಧತಿಗಳ ಬಗ್ಗೆ ಬಹಳ ನಂಬಿಕೆ ಇರುವ ರಾಜ್ಯಪಾಲ ಇಎಸ್ ಎಲ್ ನರಸಿಂಹನ್ ಅವರು ಪ್ರಮಾಣ ವಚನ ಬೋಧನೆ ಮಾಡಿದ್ದಾರೆ. ಕಳೆದ ಅವಧಿಯಲ್ಲಿ ಡಿಸಿಎಂ ಆಗಿ ಕಾರ್ಯ ನಿರ್ವಹಿಸಿದ್ದ ಮೊಹಮ್ಮದ್ ಮಹಮೂದ್ ಅಲಿ ಅವರು ಕೆಸಿಆರ್ ಜತೆಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಮಾರ್ಗಶಿರ ಷಷ್ಠಿ, ಗುರುವಾರ ಮಧ್ಯಾಹ್ನ 1.25ಕ್ಕೆ ಮುಹೂರ್ತ
64 ವರ್ಷದ ಕೆ ಚಂದ್ರ ಶೇಖರ್ ರಾವ್ ಅವರು ತೆಲುಗಿನಲ್ಲೂ ಅಲಿ ಉರ್ದುವಿನಲ್ಲೂ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಡಿಸೆಂಬರ್ ಹದಿನೆಂಟನೇ ತಾರೀಕು ಸಂಪುಟ ವಿಸ್ತರಣೆ ಆಗಲಿದೆ. ಯಾದಗಿರಿ ದೇವಸ್ಥಾನದ ಮುಖ್ಯ ಅರ್ಚಕರಾದ ಲಕ್ಷ್ಮೀ ನರಸಿಂಹಾಚಾರ್ಯ ಮಾತನಾಡಿ, ಮಾರ್ಗಶಿರ ಮಾಸದ ಷಷ್ಠಿ, ಗುರುವಾರದಂದು ಪ್ರಶಸ್ತವಾದ ಮುಹೂರ್ತದಲ್ಲಿ ಚಂದ್ರಶೇಖರ್ ರಾವ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎಂದಿದ್ದಾರೆ.

ಅಡೆತಡೆಗಳಿಲ್ಲದೆ ರಾಜ್ಯಭಾರ ನಡೆಸಲು ಅನುಕೂಲ
1.24ರಿಂದ ಒಂದೂವರೆ ಗಂಟೆಗಳ ಕಾಲ ಶುಭ ಮುಹೂರ್ತ ಮುಂದುವರಿಯಲಿದೆ. ಆದ್ದರಿಂದಲೇ ಆ ಸಮಯವನ್ನು ನಿಗದಿ ಪಡಿಸಲಾಯಿತು. ಈ ಮುಹೂರ್ತವು 'ರಾಜ ಯೋಗ'ವನ್ನು ನೀಡುತ್ತದೆ. ಯಾವುದೇ ಅಡೆತಡೆಗಳಿಲ್ಲದೆ ತೆಲಂಗಾಣದಲ್ಲಿ ರಾಜ್ಯಭಾರ ನಡೆಸುವುದಕ್ಕೆ ಚಂದ್ರಶೇಖರ್ ರಾವ್ ಅವರಿಗೆ ಶಕ್ತಿ ನೀಡುತ್ತದೆ ಎಂದು ಹೇಳಿದ್ದಾರೆ.

ಗ್ರಹಗಳು ಉಚ್ಚ ಸ್ಥಿತಿಯಲ್ಲಿ ಇವೆ
"ಮುಹೂರ್ತ ನಿಗದಿ ಪಡಿಸಿದ ಅವಧಿಯಲ್ಲಿ ಎಲ್ಲ ಗ್ರಹಗಳು ಉಚ್ಚ ಸ್ಥಿತಿಯಲ್ಲಿದ್ದವು. ಆದ್ದರಿಂದ ಕೆಸಿಆರ್ ಅವರಿಗೆ ಏನು ಮಾಡಿದರೂ ಅದೃಷ್ಟ ತರುತ್ತದೆ ಎಂದು ನರಸಿಂಹಾಚಾರ್ಯ ಭವಿಷ್ಯ ನುಡಿದಿದ್ದಾರೆ. ತೀರಾ ಇತ್ತೀಚೆಗೆ ರಚನೆಯಾದ ತೆಲಂಗಾಣ ರಾಜ್ಯದಲ್ಲಿ ಒಟ್ಟು 119 ವಿಧಾನಸಭಾ ಸ್ಥಾನಗಳಿದ್ದು, ಆ ಪೈಕಿ 88ರಲ್ಲಿ ಟಿಆರ್ ಎಸ್ ಅದ್ಭುತ ಜಯ ದಾಖಲಿಸಿದೆ.

ತೆಲಂಗಾಣದಲ್ಲಿ ಯಾರಿಗೆಷ್ಟು ಸ್ಥಾನ?
ಕಾಂಗ್ರೆಸ್, ತೆಲುಗು ದೇಶಂ ಪಾರ್ಟಿ (ಟಿಡಿಪಿ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಹಾಗೂ ತೆಲಂಗಾಣ ಜನ ಸಮಿತಿ (ಟಿಜೆಎಸ್) ಸೇರಿ ಮಹಾ ಮೈತ್ರಿ ಕೂಟವನ್ನು ರಚಿಸಿಕೊಂಡು ಸ್ಪರ್ಧೆಗೆ ಇಳಿದಿದ್ದವು. ಅವುಗಳಿಗೆ 21 ಸ್ಥಾನಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯವಾಯಿತು. ಬಿಜೆಪಿ ಒಂದು ಸ್ಥಾನದಲ್ಲಿ ಗೆದ್ದಿದ್ದರೆ, ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) 7 ಕ್ಷೇತ್ರಗಳಲ್ಲಿ ಜಯ ಸಾಧಿಸಿದರೆ, ಪಕ್ಷೇತರ ಅಭ್ಯರ್ಥಿಗಳು 3 ಸ್ಥಾನಗಳಲ್ಲಿ ಗೆದ್ದಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications