"ತಾಕತ್ತಿದ್ರೆ ನಾಯ್ಡು ಸುಳ್ಳು ಪತ್ತೆ ಪರೀಕ್ಷೆಗೆ ಒಳಗಾಗಲಿ"
ಹೈದರಾಬಾದ್, ಜೂ.8: ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ನಡುವಿನ ಕಿತ್ತಾಟ ತಾರಕ್ಕೇರುತ್ತಿದೆ. ಓಟಿಗಾಗಿ ಲಂಚ ನೀಡಿದ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಅವರ ಕೈವಾಡ ಇರುವ ಬಗ್ಗೆ ಆಡಿಯೋ ಟೇಪ್ ರಿಲೀಸ್ ಆದಮೇಲೆ ಪ್ರಕರಣದಲ್ಲಿ ಅನೇಕ ತಿರುವುಗಳು ಕಾಣಿಸಿಕೊಳ್ಳುತ್ತಿವೆ. ನಾಯ್ಡು ಅವರು ಸುಳ್ಳು ಪತ್ತೆ ಪರೀಕ್ಷೆಗೆ ಒಳಗಾಗಲಿ ಎಂದು ಕೆಸಿಆರ್ ಪುತ್ರ ಆಗ್ರಹಿಸಿದ್ದಾರೆ.
ತೆಲಂಗಾಣದ ನಾಮಾಂಕಿತ ಸದಸ್ಯ ಎಲ್ವಿಸ್ ಸ್ಟೀಫನ್ಸನ್ ಅವರಿಗೆ ಟಿಡಿಪಿ ಮುಖಂಡ ರೇವಂತ್ ರೆಡ್ಡಿ ಲಂಚ ನೀಡುವ ಪ್ರಕರಣದಲ್ಲಿ ನಾಯ್ಡು ಅವರ ಪಾತ್ರ ಏನು ಎಂಬುದರ ಬಗ್ಗೆ ಪ್ರಶ್ನೆ ಎದ್ದಿದೆ. ಆಡಿಯೋ ಟೇಪ್ ನಲ್ಲಿರುವ ಧ್ವನಿ ನನ್ನದ್ದಲ್ಲ ಎಂದು ನಾಯ್ಡು ಅವರು ರಾಜ್ಯಪಾಲ ನರಸಿಂಹನ್ ಅವರಿಗೆ ಪತ್ರ ಬರೆದಿದ್ದಾರೆ. ನಾಯ್ಡು ವಿರುದ್ಧ ಮಾತನಾಡಿದ ಕೆಸಿಆರ್ ವಿರುದ್ಧ ಅನೇಕ ಕಡೆ ಎಫ್ಐಆರ್ ದಾಖಲಾಗಿವೆ. [ಆಂಧ್ರ ಸಿಎಂ ತೆಗಳಿದ್ದಕ್ಕೆ ತೆಲಂಗಾಣ ಸಿಎಂ ಮೇಲೆ ಎಫ್ಐಆರ್]
ಈ ನಡುವೆ ಕೆ ಚಂದ್ರಶೇಖರ್ ರಾವ್ ಅವರ ಪುತ್ರ, ರಾಜ್ಯ ಸಚಿವ ಕೆ ತಾರಕರಾಮ ರಾವ್ ಅವರು ಈ ಬಗ್ಗೆ ಪ್ರತಿಕ್ರಿಯೆನೀಡಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಲಿ, ಈ ಬಗ್ಗೆ ಎಸಿಬಿ ದಳ ತಕ್ಷಣವೇ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದ್ದಾರೆ. ತೆಲುಗು ದೇಶಂ ಪಕ್ಷ ಹಾಗೂ ತೆಲಂಗಾಣ ರಾಷ್ಟ್ರ ಸಮಿತಿ ನಡು ಬೆಂಕಿ ಹತ್ತಿಕೊಂಡಿದ್ದು ಕಾಂಗ್ರೆಸ್ ತುಪ್ಪ ಸುರಿಯುತ್ತಿದೆ.

ಸುಳ್ಳು ಪತ್ತೆ ಪರೀಕ್ಷೆಗೆ ಒಳಗಾಗಲಿ
ಓಟಿಗಾಗಿ ಲಂಚ ನೀಡಿದ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಅವರ ಕೈವಾಡ ಇರುವ ಬಗ್ಗೆ ಆಡಿಯೋ ಟೇಪ್ ರಿಲೀಸ್ ಆದಮೇಲೆ ಪ್ರಕರಣದಲ್ಲಿ ಅನೇಕ ತಿರುವುಗಳು ಕಾಣಿಸಿಕೊಳ್ಳುತ್ತಿವೆ. ನಾಯ್ಡು ಅವರು ಸುಳ್ಳು ಪತ್ತೆ ಪರೀಕ್ಷೆಗೆ ಒಳಗಾಗಲಿ ಎಂದು ಕೆಸಿಆರ್ ಪುತ್ರ ಆಗ್ರಹಿಸಿದ್ದಾರೆ.
|
ದಿಗ್ವಿಜಯ್ ಸಿಂಗ್ ಆಗ್ರಹ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು ತೆಲಂಗಾಣ ಎಂಎಲ್ಸಿ ಆಯ್ಕೆಗೆ ಸಂಬಂಧಿಸಿದಂತೆ ನಾಮ ನಿರ್ದೇಶಿತ ಎಂಎಲ್ಸಿಗೆ ಕೋಟ್ಯಾಂತರ ರೂ. ಹಣದ ಆಮಿಷವೊಡ್ಡಿದ ಹಿನ್ನೆಲೆಯಲ್ಲಿ ನಾಯ್ಡು ರಾಜೀನಾಮೆ ನೀಡುವುದು ಸೂಕ್ತ ಎಂದು ದಿಗ್ವಿಜಯ್ ಸಿಂಗ್ ಆಗ್ರಹಿಸಿದ್ದಾರೆ.
|
ಕಾಂಗ್ರೆಸ್ ವಕ್ತಾರರಿಂದ ಆಗ್ರಹ
ಕಾಂಗ್ರೆಸ್ ವಕ್ತಾರೆ ಶೋಭಾ ಓಜಾ ಅವರಿಂದ ನಾಯ್ಡು ರಾಜೀನಾಮೆಗೆ ಆಗ್ರಹ.
|
ಒಳ್ಳೆ ಪಿಆರ್ ಇದ್ದರೆ ಏನಲ್ಲಾ ಸಾಧ್ಯ
ಒಳ್ಳೆ ಪಿಆರ್ ಇದ್ದರೆ ಏನಲ್ಲಾ ಸಾಧ್ಯ ಎಂಬುದು ಈ ಪ್ರಕರಣದಿಂದ ಗೊತ್ತಾಗುತ್ತೆ. ಶಿಬು ಸೊರೆನ್ ಪ್ರಕರಣವನ್ನು ಒಮ್ಮೆ ನೆನಪಿಸಿಕೊಳ್ಳಿ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications