ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಮತ್ತೊಂದು ಆಘಾತ: ಹಿರಿಯ ಮುಖಂಡ ರಾಜೀನಾಮೆ
ಹೈದರಾಬಾದ್, ಡಿಸೆಂಬರ್ 7: ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಹೀನಾಯ ಪ್ರದರ್ಶನ ನೀಡಿದ್ದ ಕಾಂಗ್ರೆಸ್ಗೆ ತೆಲಂಗಾಣದಲ್ಲಿ ಮತ್ತೊಂದು ದೊಡ್ಡ ಹಿನ್ನಡೆಯಾಗಿದೆ. ಸುಮಾರು ನಾಲ್ಕು ದಶಕಗಳಿಂದ ಪಕ್ಷದಲ್ಲಿದ್ದ ಹಿರಿಯ ಮುಖಂಡ ಗುಡೂರ್ ನಾರಾಯಣ ರೆಡ್ಡಿ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದಾರೆ. ಎಐಸಿಸಿಯ ಸದಸ್ಯ ಮತ್ತು ತೆಲಂಗಾಣ ಕಾಂಗ್ರೆಸ್ ಸಮಿತಿಯ ಖಜಾಂಚಿಯಾಗಿದ್ದ ನಾರಾಯಣ ರೆಡ್ಡಿ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ನಾರಾಯಣ ರೆಡ್ಡಿ ಅವರ ರಾಜೀನಾಮೆ ತೆಲಂಗಾಣ ಕಾಂಗ್ರೆಸ್ಗೆ ಮತ್ತೊಂದು ಹೊಡೆತವಾಗಿದೆ. ತಮ್ಮ ರಾಜೀನಾಮೆ ಕುರಿತು ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಸೋಮವಾರ ಪತ್ರ ಬರೆದಿದ್ದಾರೆ. 1981ರಿಂದ ವಿದ್ಯಾರ್ಥಿ ದಿನಗಳಿಂದ ಇದುವರೆಗೂ ಕಾಂಗ್ರೆಸ್ ಪಕ್ಷಕ್ಕೆ ಸೇವೆ ಸಲ್ಲಿಸಿರುವುದಾಗಿ ಅವರು ತಿಳಿಸಿದ್ದಾರೆ. ಕಾಂಗ್ರೆಸ್ ನಾಯಕತ್ವಕ್ಕೆ ಧನ್ಯವಾದ ಸಲ್ಲಿಸಿರುವ ನಾರಾಯಣ ರೆಡ್ಡಿ, ಟಿಪಿಸಿಸಿ ಖಜಾಂಚಿ, ಎಐಸಿಸಿ ಸದಸ್ಯತ್ವ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವದ ಸ್ಥಾನಗಳಿಗೆ ರಾಜೀನಾಮೆ ನೀಡುತ್ತಿರುವುದಾಗಿ ಪತ್ರದಲ್ಲಿ ಹೇಳಿದ್ದಾರೆ.
ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ 150 ವಾರ್ಡ್ಗಳಲ್ಲಿ ಕಾಂಗ್ರೆಸ್ ಕೇವಲ ಎರಡು ಸೀಟುಗಳನ್ನು ಗೆದ್ದುಕೊಂಡ ಕೆಲವು ದಿನದಲ್ಲಿಯೇ ಕಾಂಗ್ರೆಸ್ಗೆ ಈ ಆಘಾತ ಎದುರಾಗಿದೆ. ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವಷ್ಟು ಸೀಟುಗಳನ್ನು ಪಡೆಯದಿದ್ದರೂ, ಬಿಜೆಪಿ ಅಮೋಘ ಸಾಧನೆ ತೋರಿಸಿದೆ.

ಕಳೆದ ಬಾರಿ (2016) ಜಿಎಚ್ಎಂಸಿ ಚುನಾವಣೆಯಲ್ಲಿ ಕೇವಲ ನಾಲ್ಕು ಸೀಟುಗಳಲ್ಲಿ ಜಯಗಳಿಸಿದ್ದ ಬಿಜೆಪಿ, ಈ ಬಾರಿ 48 ಸೀಟುಗಳಲ್ಲಿ ಜಯಗಳಿಸಿದೆ. ಇನ್ನು 99 ವಾರ್ಡ್ಗಳಲ್ಲಿ ಗೆದ್ದು ಬೀಗಿದ್ದ ಆಡಳಿತಾರೂಢ ಟಿಆರ್ಎಸ್ ಭಾರಿ ಪ್ರಮಾಣದಲ್ಲಿ ಸೀಟುಗಳನ್ನು ಕಳೆದುಕೊಂಡಿದ್ದು, ಕೇವಲ 55 ಸ್ಥಾನಗಳಲ್ಲಿ ಜಯಗಳಿಸಿದೆ. ಇದರಿಂದ ಮ್ಯಾಜಿಕ್ ಸಂಖ್ಯೆ 65ನ್ನು ತಲುಪುವುದು ಅದಕ್ಕೆ ಸಾಧ್ಯವಾಗಿಲ್ಲ.
2023ರಲ್ಲಿ ತೆಲಂಗಾಣ ವಿಧಾನಸಭೆ ಚುನಾವಣೆ ನಡೆಯಲಿದೆ. ಅದಕ್ಕೂ ಮೊದಲು ಪಕ್ಷವನ್ನು ಬಲಪಡಿಸುವತ್ತ ಬಿಜೆಪಿ ಕಣ್ಣಿಟ್ಟಿದೆ. ಹೀಗಾಗಿ ತೆಲಂಗಾಣದ ವಿವಿಧ ಪಕ್ಷಗಳ ಪ್ರಬಲ ಮುಖಂಡರನ್ನು ತನ್ನತ್ತ ಸೆಳೆದುಕೊಳ್ಳುವುದು ಅದರ ಗುರಿಯಾಗಿದೆ. ಅದರ ಮತ್ತೊಂದು ಹೆಜ್ಜೆಯಾಗಿ ನಾರಾಯಣ ರೆಡ್ಡಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಿದೆ ಎಂದು ಹೇಳಲಾಗಿದೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications