ಬೆಳಗ್ಗೆ ಬಿಜೆಪಿ ಸೇರಿ ರಾತ್ರಿಗೆ ಕಾಂಗ್ರೆಸ್ಸಿಗೆ ಮರಳಿದ ಪದ್ಮಿನಿ ರೆಡ್ಡಿ
ಹೈದರಾಬಾದ್, ಅಕ್ಟೋಬರ್ 12: ಹಿರಿಯ ಕಾಂಗ್ರೆಸ್ ನಾಯಕ ಸಿ ದಾವೋದರ್ ರಾಜನರಸಿಂಹ ಅವರ ಪತ್ನಿ, ಸಾಮಾಜಿಕ ಕಾರ್ಯಕರ್ತೆ ಪದ್ಮಿನಿ ರೆಡ್ಡಿ ಅವರ ಪಕ್ಷ ನಿಷ್ಠೆ ಈಗ ಚರ್ಚೆಯ ವಿಷ್ಯವಾಗಿದೆ.
ಬೆಳಗ್ಗೆ ಕಾಂಗ್ರೆಸ್ಸಿನವರ ಜತೆ ಉಪಹಾರ ಸೇವಿಸಿದ್ದರು, ಮಧ್ಯಾಹ್ನ ಬಿಜೆಪಿಯವರ ಜತೆ ಊಟ ಮಾಡಿದರು, ರಾತ್ರಿ ವೇಳೆಗೆ ಹಳೆ ಗಂಡನ ಪಾದವೇ ಗತಿ ಎಂದು ಮತ್ತೆ ಕೈ ಪಕ್ಷಕ್ಕೆ ಮರಳಿದ್ದಾರೆ. ಪದ್ಮಿನಿ ರೆಡ್ಡಿ ಅವರು 10 ಗಂಟೆ ಕಾಲದಲ್ಲಿ ಪಕ್ಷದಿಂದ ಪಕ್ಷಕ್ಕೆ ಹಾರಿ, ವಾಪಸ್ ಆಗಿರುವ ಘಟನೆ ನಡೆದಿದೆ.

ಗುರುವಾರದಇಂದು ಭಾರತೀಯ ಜನತಾ ಪಕ್ಷ(ಬಿಜೆಪಿ) ಸೇರಿದ್ದಾರೆ. ಅವಿಭಜಿತ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಕಿರಣ್ ಕುಮಾರ್ ರೆಡ್ಡಿ ಅವರ ಸಂಪುಟದಲ್ಲಿ ಉಪ ಮುಖ್ಯಮಂತ್ರಿಯಾಗಿ ರಾಜನರಸಿಂಹ ಅವರು ಕಾರ್ಯ ನಿರ್ವಹಿಸಿದ್ದರು.
ಮೇಡಕ್ ಜಿಲ್ಲೆಯಲ್ಲಿ ಸಾಮಾಜಿಕ ಕಾರ್ಯಗಳ ಮೂಲಕ ಮನೆ ಮಾತಾಗಿರುವ ಶ್ರೀಮತಿ ಪದ್ಮಿನಿ ರೆಡ್ಡಿ ಅವರು ಮೋದಿ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ, ಬಿಜೆಪಿ ಸೇರಿರುವುದು ಸಂತಸ ತಂದಿದೆ ಎಂದು ತೆಲಂಗಾಣ ಬಿಜೆಪಿಯ ಅಧ್ಯಕ್ಷ ಕೆ ಲಕ್ಷ್ಮಣ್ ಪ್ರತಿಕ್ರಿಯಿಸಿದ್ದರು.
ಡಿಸೆಂಬರ್ 07ರಂದು ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ತಯಾರಿ ಜೋರಾಗಿ ನಡೆದಿದೆ. ರಾಜ್ಯ ಕಾಂಗ್ರೆಸ್ಸಿನ ಪ್ರಣಾಳಿಕಾ ಸಮಿತಿಯ ಮುಖ್ಯಸ್ಥರಾಗಿರುವ ದಾವೋದರ್ ರಾಜನರಸಿಂಹ ಅವರ ಪತ್ನಿ ಈಗ ಬಿಜೆಪಿ ಸೇರಿರುವುದು, ರಾಜಕೀಯ ವಲಯದಲ್ಲಿ ಹಲವರ ಹುಬ್ಬೇರಿಸಿತ್ತು. ಬಿಜೆಪಿಗೆ ಪ್ರಬಲ ಅಭ್ಯರ್ಥಿ ಸಿಕ್ಕ ಖುಷಿಯಿತ್ತು.
ಆದರೆ, ಎಲ್ಲವೂ ಕ್ಷಣಿಕವಾಗಿತ್ತು. ಪಕ್ಷದ ಕಾರ್ಯಕರ್ತರ ಒತ್ತಡಕ್ಕೆ ಮಣಿದು ನಾನು ಮರಳಿ ಕಾಂಗ್ರೆಸ್ಸಿಗೆ ಹೋಗುತ್ತಿದ್ದೇನೆ ಎಂದು ಪದ್ಮಿನಿ ಅವರು ಸಂಜೆ ವೇಳೆ ಹೊರಟು ನಿಂತಾಗ ತೆಲಂಗಾಣ ಬಿಜೆಪಿ ಮುಖಂಡರಲ್ಲಿ ನಿರಾಶೆ ಮೂಡಿತ್ತು.
ಮಹಿಳಾ ಸಬಲೀಕರಣ, ಗ್ರಾಮೀಣ ಅಭಿವೃದ್ಧಿ ಕ್ಷೇತ್ರದಲ್ಲಿ ಆಕೆ ಮಾಡಿರುವ ಕೆಲಸಗಳನ್ನು ಮೆಚ್ಚಿ ಬಿಜೆಪಿಗೆ ಬರುವಂತೆ ಆಹ್ವಾನಿಸಲಾಯಿತು. ಈಗ ಬಿಜೆಪಿ ತೊರೆದಿದ್ದಾರೆ. ಅವರ ನಿರ್ಣಯವನ್ನು ನಾವು ಗೌರವಿಸುತ್ತೇವೆ ಎಂದು ತೆಲಂಗಾಣ ಬಿಜೆಪಿ ವಕ್ತಾರ ಕೃಷ್ಣ ಸಾಗರ ರಾವ್ ಪ್ರತಿಕ್ರಿಯಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications