ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುದುರೆ ವ್ಯಾಪಾರ ಭೀತಿ : ತೆಲಂಗಾಣ ಕಾಂಗ್ರೆಸ್‌ ಶಾಸಕರು ಬೆಂಗಳೂರಿಗೆ?

|
Google Oneindia Kannada News

Recommended Video

5 States Election Results 2018 : ಬೆಂಗಳೂರಿನ ರೆಸಾರ್ಟ್ ಗೆ ಬರಲಿದ್ದಾರೆ ತೆಲಂಗಾಣ ಕಾಂಗ್ರೆಸ್ ಶಾಸಕರು

ಬೆಂಗಳೂರು, ಡಿಸೆಂಬರ್ 11 : ತೆಲಂಗಾಣದ ಕಾಂಗ್ರೆಸ್ ಶಾಸಕರು ಬೆಂಗಳೂರಿನ ರೆಸಾರ್ಟ್‌ಗೆ ಬರುವ ಸಾಧ್ಯತೆ ಇದೆ. ತೆಲಂಗಾಣ ವಿಧಾನಸಭೆ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಕುದುರೆ ವ್ಯಾಪಾರ ನಡೆಯಲಿದೆಯೇ? ಎಂಬ ಪ್ರಶ್ನೆ ಎದ್ದಿದೆ.

ಮಂಗಳವಾರ ಬೆಳಗ್ಗೆ 8 ಗಂಟೆಗೆ 119 ಸ್ಥಾನಗಳನ್ನು ಹೊಂದಿರುವ ತೆಲಂಗಾಣ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಆರಂಭವಾಗಿದೆ. ಕಾಂಗ್ರೆಸ್ ಕುದುರೆ ವ್ಯಾಪಾರ ನಡೆಯಲಿದೆ ಎಂದು ಅಂದಾಜಿಸಿದ್ದು, ಶಾಸಕರನ್ನು ಬೆಂಗಳೂರಿಗೆ ಕಳಿಸಲು ಮುಂದಾಗಿದೆ.

ಮತಎಣಿಕೆಯ ಕ್ಷಣ-ಕ್ಷಣದ ಫಲಿತಾಂಶ ಇಲ್ಲಿದೆಮತಎಣಿಕೆಯ ಕ್ಷಣ-ಕ್ಷಣದ ಫಲಿತಾಂಶ ಇಲ್ಲಿದೆ

Telangana Congress MLAs may come to Bengaluru resort

ಇಬ್ಬರು ಶಾಸಕರ ಜೊತೆ ಈಗಾಗಲೇ ಮಾತುಕತೆ ನಡೆದಿದೆ ಎಂದು ಶಂಕಿಸಲಾಗಿದೆ. ಆದ್ದರಿಂದ, ಶಾಸಕರನ್ನು ಉಳಿಸಿಕೊಳ್ಳಲು ಪಕ್ಷ ಜೆಡಿಎಸ್-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರವಿರುವ ಕರ್ನಾಟಕಕ್ಕೆ ಶಾಸಕರನ್ನು ಕಳಿಸಲು ಮುಂದಾಗಿದೆ.

ತೆಲಂಗಾಣದಲ್ಲಿ ಕೆಸಿಆರ್ ಗೆ ಬೆಂಬಲ ಸೂಚಿಸಿದ ಅಸಾದುದ್ದಿನ್ ಓವೈಸಿತೆಲಂಗಾಣದಲ್ಲಿ ಕೆಸಿಆರ್ ಗೆ ಬೆಂಬಲ ಸೂಚಿಸಿದ ಅಸಾದುದ್ದಿನ್ ಓವೈಸಿ

ಶಾಸಕರನ್ನು ಕಾಪಾಡಲು ಬೆಂಗಳೂರು ಹತ್ತಿರ ಮತ್ತು ಸುರಕ್ಷಿತ ಸ್ಥಳವಾಗಿದೆ. ಆದ್ದರಿಂದ, ಬೆಂಗಳೂರಿನ ರೆಸಾರ್ಟ್‌ಗೆ ಕರೆತರುವ ಸಾಧ್ಯತೆ ಇದೆ. ಬೆಂಗಳೂರಿನ ಕಾಂಗ್ರೆಸ್ ನಾಯಕರು ಈಗಾಗಲೇ ಶಾಸಕರು ಬಂದರೆ ಅಗತ್ಯ ವ್ಯವಸ್ಥೆ ಮಾಡಲು ಸಿದ್ಧರಾಗಿದ್ದಾರೆ.

ರಾಜ್ಯಸಭೆ ಚುನಾವಣೆಯ ಸಮಯದಲ್ಲಿ ಗುಜರಾತ್‌ನ ಕಾಂಗ್ರೆಸ್‌ ಶಾಸಕರು ಬೆಂಗಳೂರಿಗೆ ಬಂದಿದ್ದರು. ಮಹಾರಾಷ್ಟ್ರದ ಶಾಸಕರನ್ನು ಒಮ್ಮೆ ಕರೆತರಲಾಗಿತ್ತು. ರೆಸಾರ್ಟ್ ರಾಜಕೀಯದಲ್ಲಿ ಕರ್ನಾಟಕ ಮೊದಲಿನಿಂದಲೂ ದೊಡ್ಡ ಸುದ್ದಿ ಮಾಡಿದೆ.

English summary
Telangana assembly elections 2018. Congress may send MLA's to Bengaluru resort to control horse trading. Assembly election result will announce on December 11, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X