VIDEO: ಡ್ರೈವರ್ ಬರಲಿಲ್ಲ, ವೈದ್ಯನೇ ಟ್ರ್ಯಾಕ್ಟರ್ ಚಾಲನೆ ಮಾಡಿ ಶವ ಸಾಗಣೆ

ಹೈದರಾಬಾದ್, ಜುಲೈ 13: ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರ ವಿಚಾರದಲ್ಲಿ ಅಧಿಕಾರಿಗಳು, ಸಿಬ್ಬಂದಿ ಅವರು ಅಮಾನವೀಯವಾಗಿ ನಡೆದುಕೊಳ್ಳುತ್ತಿದ್ದಾರೆ ಎಂಬ ಘಟನೆಗಳು ಹಲವು ಕಡೆ ವರದಿಯಾಗಿದೆ.

ಆದರೆ, ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯಲ್ಲೊಂದು ಮಾನವೀಯ ಘಟನೆ ನಡೆದಿದೆ. ಕೊವಿಡ್‌ನಿಂದ ಮೃತಪಟ್ಟ ವ್ಯಕ್ತಿಯನ್ನು ಸಾಗಿಸಲು ಯಾರೂ ಮುಂದೆ ಬರದಿದ್ದಾಗ ಖುದ್ದು ವೈದ್ಯರೇ ಟ್ರ್ಯಾಕ್ಟರ್ ಚಾಲನೆ ಮಾಡಿಕೊಂಡು ಹೋಗಿ ಅಂತ್ಯಕ್ರಿಯೆ ಮಾಡಿರುವ ಘಟನೆ ವರದಿಯಾಗಿದೆ.

ಕೊವಿಡ್ ಬಿಕ್ಕಟ್ಟಿನ ಕಾರಣ ಪೆದ್ದಪಲ್ಲಿ ಜಿಲ್ಲೆಯ ಆರೋಗ್ಯ ಉಸ್ತುವಾರಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ ಶ್ರೀರಾಮ್ ಅವರು, ಶವ ಸಾಗಿಸಲು ಟ್ರ್ಯಾಕ್ಟರ್ ಚಾಲಕ ನಿರಾಕರಿಸಿದ ಕಾರಣ, ತಾವೇ ಟ್ರ್ಯಾಕ್ಟರ್ ಡ್ರೈವ್ ಮಾಡಿರುವ ಘಟನೆ ವರದಿಯಾಗಿದೆ.

ಈ ವಿಡಿಯೋವನ್ನು ಎಎನ್ಐ ಸುದ್ದಿ ಸಂಸ್ಥೆ ಹಂಚಿಕೊಂಡಿದ್ದು, ವೈದ್ಯರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮಾನವೀಯತೆ ಸತ್ತಿದೆ ಎನ್ನುವಂತಾಗಿರುವ ಈ ಸಂದರ್ಭದಲ್ಲಿ ಡಾ ಶ್ರೀರಾಮ್ ಅವರು, ಒಳ್ಳೆಯ ಕೆಲಸ ಮಾಡಿದ್ದಾರೆ. ಅವರಿಗೆ ನಮ್ಮ ಧನ್ಯವಾದ ಎಂದು ನೆಟ್ಟಿಗರು ಶ್ಲಾಘಿಸಿದ್ದಾರೆ.

Body Of A Man Who Had Covid19 Was Driven A Tractor By Dr Sriram

ಮತ್ತೊಂದೆಡೆ ಕೊವಿಡ್ ರೋಗಿಯ ಶವ ಸಾಗಿಸಲು ಆಂಬುಲೆನ್ಸ್ ಸಿಕ್ಕಿಲ್ವಾ? ಇದು ರಾಜ್ಯ ಸರ್ಕಾರದ ವೈಫಲ್ಯ ಎಂದು ಟೀಕಿಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+