ತೆಲಂಗಾಣ ಚುನಾವಣೆ: ಅಮಿತ್ ಶಾಗೆ ಭರ್ಜರಿ ಆಫರ್ ನೀಡಿದ ಓವೈಸಿ
Recommended Video

ಹೈದರಾಬಾದ್, ನ 29: ತೆಲಂಗಾಣ ಅಸೆಂಬ್ಲಿ ಚುನಾವಣೆಗೆ ಪ್ರಚಾರದ ಭರಾಟೆ ತಾರಕಕ್ಕೇರಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ, ಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಭರ್ಜರಿ ಆಫರ್ ನೀಡಿದ್ದಾರೆ.
ಕಳೆದ ಕೆಲವು ದಿನಗಳಿಂದ, ಬಿಜೆಪಿ ಮುಖಂಡರನ್ನು ಕೆಣಕುವ ಹೇಳಿಕೆ ನೀಡುತ್ತಿರುವ ಓವೈಸಿ, ತೆಲಂಗಾಣದ ಹಂಗಾಮಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರಿಗೆ ನನ್ನದೊಂದು ಮನವಿ. ಅವರು, ಅಮಿತ್ ಶಾ ಅವರಿಗೆ ಕಲ್ಯಾಣಿ (ಬೀಫ್) ಬಿರಿಯಾನಿ ಕಳುಹಿಸಿ ಕೊಡಲಿ ಎಂದು ಓವೈಸಿ ಕೆಣಕಿದ್ದಾರೆ.
ಎಂಐಎಂ ಕಾರ್ಯಕರ್ತರಿಗೆ TRS ಮುಖಂಡರು ಬಿರಿಯಾನಿ ಸರಬರಾಜು ಮಾಡುತ್ತಿದ್ದಾರೆ ಎನ್ನುವ ಅಮಿತ್ ಶಾ ನೀಡಿದ್ದ ಹೇಳಿಕೆಗೆ, ಓವೈಸಿ ನೀಡಿದ ತಿರುಗೇಟು ಇದಾಗಿದೆ.

ಕೂಕಟಪಲ್ಲಿಯಲ್ಲಿ ಗುರುವಾರ (ನ 29) ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಓವೈಸಿ, ನಾನು ಈಗಿಂದೀಗಲೇ ಕೆಸಿಆರ್ ಅವರಿಗೆ ಫೋನ್ ಮಾಡಿ, ಬೀಫ್ ಬಿರಿಯಾನಿ ಶಾಗೆ ಕಳುಹಿಸಿ ಕೊಡುವಂತೆ ಕೇಳಿಕೊಳ್ಳುತ್ತೇನೆ ಎಂದಿದ್ದಾರೆ.
ಹೈದರಾಬಾದ್ ಬಿರಿಯಾನಿ ಹೇಗೆ ಹೆಸರುವಾಸಿಯೋ, ಹಾಗೆಯೇ, ದನ ಅಥವಾ ಕೋಣದ ಮಾಂಸದಿಂದ ತಯಾರು ಮಾಡುವ ಕಲ್ಯಾಣಿ ಬಿರಿಯಾನಿ ಕೂಡಾ ತೆಲಂಗಾಣದಲ್ಲಿ ಅಷ್ಟೇ ಹೆಸರುವಾಸಿ.
ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಮಗಳ ಮದುವೆಗೆ ಪ್ರಧಾನಿ ಮೋದಿ ಪಾಕಿಸ್ತಾನಕ್ಕೆ ಹೋಗಿದ್ದಾಗ, ಅಲ್ಲಿ ಅವರ ಊಟೋಪಚಾರ ಯಾವ ರೀತಿ ಇತ್ತು ಎಂದು ಈ ಹಿಂದೆ, ಓವೈಸಿ, ಬಿಜೆಪಿಯನ್ನು ಕೆಣಕ್ಕಿದ್ದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications