ಬಿಜೆಪಿ ಪ್ರಣಾಳಿಕೆ ಸೋರಿಕೆ : ಮದ್ಯಕ್ಕೆ ನಿರ್ಬಂಧ, 20 ರು ಪೆಟ್ರೋಲ್!
Recommended Video

ಹೈದರಾಬಾದ್, ಅಕ್ಟೋಬರ್ 15: ತೆಲಂಗಾಣದಲ್ಲಿ ಮತದಾರರಿಗೆ ಭರಪೂರ ಆಶ್ವಾಸನೆಯುಳ್ಳ ಪ್ರಣಾಳಿಕೆಯನ್ನು ಭಾರತೀಯ ಜನತಾ ಪಕ್ಷ(ಬಿಜೆಪಿ) ಸಿದ್ಧಪಡಿಸುತ್ತಿದೆ. ಈ ನಡುವೆ ಬಿಜೆಪಿ ಪ್ರಣಾಳಿಕೆಯ ಪ್ರಮುಖ ಅಂಶಗಳು ಸೋರಿಕೆಯಾಗಿವೆ. ತೆಲಂಗಾಣದಲ್ಲಿ ಮದ್ಯ ಮಾರಾಟ ನಿಯಂತ್ರಣ ಪಡಿಸುವುದೇ ಮುಖ್ಯ ಅಂಶವಾಗಲಿದೆ.
ತೆಲಂಗಾಣದಲ್ಲಿ ಅನಿಯಂತ್ರಿತ ಮದ್ಯ ಮಾರಾಟದಿಂದಾಗಿ ಹಲವಾರು ಸಾಮಾಜಿಕ ಸಮಸ್ಯೆ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗಿದ್ದು, ಇದರ ಮೇಲೆ ನಿಯಂತ್ರಣ ಸಾಧಿಸಲು ಬಿಜೆಪಿ ಕಾರ್ಯಸೂಚಿಯನ್ನು ರೂಪಿಸಿದೆ ಎಂದು ತಿಳಿದು ಬಂದಿದೆ.
ವಾರಕ್ಕೆ ಐದು ದಿನ ಮಾರಾಟ: ಮದ್ಯ ಮಾರಾಟವನ್ನು ವಾರಕ್ಕೆ ಐದು ದಿನಗಳಿಗೆ ಮಾತ್ರ ಸೀಮಿತಗೊಳಿಸುವುದು ಬಿಜೆಪಿ ಮುಂದಾಗಿದೆ.

ಸಂಜೆ ವೇಳೆ ಮದ್ಯ ಮಾರಾಟಕ್ಕೆ ನಿಷೇಧ ಹೇರುವುದು ಮುಖ್ಯ, 6 ಗಂಟೆ ನಂತರ ವೈನ್ ಹಾಗೂ ಬಾರ್ ಗಳು ಬಂದ್ ಆಗಲಿವೆ ಎಂದು ಬಿಜೆಪಿ ಪ್ರಣಾಳಿಕಾ ಸಮಿತಿ ಮುಖ್ಯಸ್ಥ ಎನ್ ವಿಎಸ್ಎಸ್ ಪ್ರಭಾಕರ್ ಹೇಳಿದ್ದಾರೆ.
ಅವಿಭಜಿತ ಆಂಧ್ರಪ್ರದೇಶದಲ್ಲಿ ಮದ್ಯ ಸೇವನೆ ದೊಡ್ಡ ಸಮಸ್ಯೆಯಾಗಿದ್ದು, ಮಹಿಳೆಯರ ವಿರುದ್ಧ ದೌರ್ಜನ್ಯ, ಅತ್ಯಾಚಾರ, ಕೊಲೆ ಸೇರಿದಂತೆ ಅನೇಕ ಕುಕೃತ್ಯಗಳಿಗೆ ಮೂಲವಾಗುತ್ತಿವೆ.
ಮಿಕ್ಕಂತೆ, ಸರ್ಕಾರಿ ಸ್ವಾಮ್ಯದ ಸಾರಿಗೆ ಸಂಸ್ಥೆ ಮೇಲಿನ ಸರ್ ಚಾರ್ಜ್ ಕಡಿತಗೊಳಿಸುವುದು, ಈ ಮೂಲಕ ಯಾತ್ರಾರ್ಥಿಗಳಿಗೆ ಉಚಿತ ಪ್ರಯಾಣ ಒದಗಿಸುವುದು ಬಿಜೆಪಿ ಗುರಿಯಾಗಿದೆ.

ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ತಗ್ಗಿಸುವುದು ಕೂಡಾ ಮುಖ್ಯ ಅಂಶವಾಗಿದೆ. ಮಹಾರಾಷ್ಟ್ರದಂತೆ ತೆಲಂಗಾಣದಲ್ಲೂ ಇಂಧನದ ಮೇಲೆ ಸೆಸ್, ವ್ಯಾಟ್ ಅಧಿಕವಾಗಿ ಹೇರಲಾಗುತ್ತಿದೆ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಹೀಗಾಗಿ, ವ್ಯಾಟ್ ತಗ್ಗಿಸಿ 20 ರುಗಳಿಗೆ ಪೆಟ್ರೋಲ್ ದೊರಕುವಂತೆ ಮಾಡುವುದಾಗಿ ಬಿಜೆಪಿ ಆಶ್ವಾಸನೆ ನೀಡಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಉಚಿತವಾಗಿ ಆನ್ ಲೈನ್ ಹಾಗೂ ಆಫ್ ಲೈನ್ ಕೋಚಿಂಗ್ ನೀಡುವುದು. ಪ್ರತಿ ಮನೆಗಳಿಗೆ 6ರು ಪ್ರತಿ ಲೀಟರ್ ನಂತೆ ಶುದ್ಧ ಕುಡಿಯುವ ನೀರು ಒದಗಿಸುವುದು ಇವೆ ಮುಂತಾದ ಪ್ರಮುಖ ಅಂಶಗಳು ಪ್ರಣಾಳಿಕೆಯಲ್ಲಿವೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications