ಮತ್ತೆ ಬದಲಾಗುವುದೇ ತೆಲಂಗಾಣ ರಾಜ್ಯ ರಾಜಕೀಯ ಇತಿಹಾಸ?
Recommended Video

ಹೈದರಾಬಾದ್, ಡಿಸೆಂಬರ್ 7: ಪ್ರತ್ಯೇಕ ರಾಜ್ಯವಾಗಿ ಅಸ್ತಿತ್ವಕ್ಕೆ ಬಂದ ಬಳಿಕ ತೆಲಂಗಾಣ ತನ್ನ ಎರಡನೆಯ ವಿಧಾನಸಭೆ ಚುನಾವಣೆಯನ್ನು ಎದುರಿಸುತ್ತಿದೆ.
ತೆಲಂಗಾಣ ಸ್ವಾತಂತ್ರ್ಯ ಪೂರ್ವದಲ್ಲಿ ಹೈದರಾಬಾದ್ ಸಂಸ್ಥಾನದ ಭಾಗವಾಗಿತ್ತು. ಹೈದರಾಬಾದ್ ಸಂಸ್ಥಾನವು 1948ರಲ್ಲಿ ಭಾರತದ ಒಕ್ಕೂಟದೊಂದಿಗೆ ವಿಲೀನಗೊಂಡಿತು, ಆದರೆ, 1956ರವರೆಗೂ ತೆಲಂಗಾಣ ಸ್ವತಂತ್ರ ರಾಜ್ಯವಾಗಿಯೇ ಉಳಿದಿತ್ತು. ಬಳಿಕ ಆಂಧ್ರ ರಾಜ್ಯದೊಂದಿಗೆ ವಿಲೀನಗೊಂಡಿತು.
ಅವಿಭಜಿತ ಆಂಧ್ರಪ್ರದೇಶದ ವಾಯವ್ಯ ಭಾಗವನ್ನು ಪ್ರತ್ಯೇಕ ರಾಜ್ಯವನ್ನಾಗಿಸುವ ಹೋರಾಟ 1969ರಲ್ಲಿಯೇ ಶುರುವಾಗಿತ್ತು. ಕೊನೆಗೂ 2014ರ ಜೂನ್ 2ರಂದು ಪ್ರತ್ಯೇಕಗೊಂಡು ತೆಲಂಗಾಣ ಎಂಬ 29ನೇ ರಾಜ್ಯ ಉದಯವಾಯಿತು.

ತೆಲಂಗಾಣ ಪ್ರತ್ಯೇಕ ರಾಜ್ಯದ ಕೂಗು ಕೇಳಿ ಬರಲು ಕಾರಣ ಅಲ್ಲಿನ ಜಮೀನ್ದಾರಿ ವ್ಯವಸ್ಥೆ. ರೈತರು ಮತ್ತು ಕಾರ್ಮಿಕರು ಜಮೀನ್ದಾರಿ ಪದ್ಧತಿ ವಿರುದ್ಧ ಸಿಡಿದೆದ್ದರು. ಅಲ್ಲಿಂದ ನಿರಂತರ ಹೋರಾಟಗಳು ಆರಂಭವಾದವು.
2009ರ ಡಿಸೆಂಬರ್ 9ರಂದು ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಗೆ ಬಗ್ಗೆ ಕೇಂದ್ರ ಸರ್ಕಾರ ಘೋಷಣೆ ಮಾಡಿತು. ಅದರ ಬೆನ್ನಲ್ಲೇ ಪ್ರತಿಭಟನೆಗಳು, ಹಿಂಸಾಚಾರಗಳು ನಡೆದವು.
ತೆಲಂಗಾಣ ರಾಷ್ಟ್ರೀಯ ಸಮಿತಿ ನಾಯಕ ಕೆ. ಚಂದ್ರಶೇಖರ ರಾವ್ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹಗಳು ನಡೆದವು.
ತೆಲಂಗಾಣ ಮೊದಲ ಮುಖ್ಯಮಂತ್ರಿ
ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆಯಾದ ಬಳಿಕ ನಡೆದ ಮೊದಲ ಚುನಾವಣೆಯಲ್ಲಿ ಚಂದ್ರಶೇಖರ ರಾವ್ ನೇತೃತ್ವದ ಟಿಆರ್ಎಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತು. ಕೆಸಿಆರ್ ಮೊದಲ ಮುಖ್ಯಮಂತ್ರಿಯಾಗಿ ಆಯ್ಕೆಯಾದರು.

ಇದಕ್ಕೂ ಮೊದಲು ಕಾಂಗ್ರೆಸ್ನ ಡಾ. ಚೆನ್ನಾರೆಡ್ಡಿ ತೆಲಂಗಾಣ ರಾಜ್ಯಕ್ಕೆ ಹೋರಾಟ ನಡೆಸಿದ್ದರು. ಪಿವಿ ನರಸಿಂಹರಾವ್ ಪ್ರಧಾನಿಯಾಗಿದ್ದ ಅವಧಿಯಲ್ಲಿ ಅವರು ಆಂಧ್ರ ಮುಖ್ಯಮಂತ್ರಿಯಾದ ಬಳಿಕ ಹೋರಾಟ ನಿಂತುಹೋಗಿತ್ತು.
ಪ್ರಮುಖ ರಾಜಕಾರಣಿಗಳು
ಕೆ. ಚಂದ್ರಶೇಖರ್ ರಾವ್, ವಿನೋದ್ ಕುಮಾರ್ ಬೋಯಿನಪಳ್ಳಿ, ಕೊಂಡ ಸುರೇಖ, ಕುಂಡೂರು ಜನ ರೆಡ್ಡಿ, ಕಡಿಯಾಮ್ ಶ್ರೀಹರಿ, ಅಜ್ಮೀರಾ ಸೀತಾರಾಮ್ ನಾಯಕ್, ತಣ್ಣೀರು ಹರೀಶ್ ರಾವ್, ನಲಮಡಾ ಉತ್ತಮ್ ಕುಮಾರ್ ರೆಡ್ಡಿ, ಕಲ್ವಕುಂಟ ಕವಿತಾ, ಅನುಮುಲಾ ರೇವಂತ್ ರೆಡ್ಡಿ, ಅಕ್ಬರುದ್ದೀನ್ ಓವೈಸಿ ಇಲ್ಲಿನ ಜನಪ್ರಿಯ ರಾಜಕೀಯ ಮುಖಂಡರಾಗಿದ್ದಾರೆ.
ಕೆಸಿಆರ್ ಯೋಜನೆಗಳು
ಸುವರ್ಣ ತೆಲಂಗಾಣ ರಾಜ್ಯದ ಗುರಿ ಘೋಷಿಸಿದ್ದ ಕೆಸಿಆರ್ ಕೆಲವು ಜನಪ್ರಿಯ ಕಾರ್ಯಕ್ರಮಗಳನ್ನು ತಂದಿದ್ದರು. ಆರೋಗ್ಯ ಲಕ್ಷ್ಮಿ ಯೋಜನೆ, ಆಸರ ಪೆನ್ಷನ್, ಅಮ್ಮಾ ಓದಿ ಮತ್ತು ಕೆಸಿಆರ್ ಕಿಟ್, ಕಲ್ಯಾಣ ಲಕ್ಷ್ಮಿ, ಮಿಷನ್ ಭಗೀರಥ, ರೈತ ಬಂಧು ಯೋಜನೆ, ಕಾಳೇಶ್ವರಂ ಯೋಜನೆ ಮುಂತಾದವು ಟಿಆರ್ ಎಸ್ ಸರ್ಕಾರ ಜಾರಿಗೆ ತಂದ ಜನಪ್ರಿಯ ಕಾರ್ಯಕ್ರಮಗಳಾಗಿವೆ.
ಜನಪ್ರಿಯ ಅಭ್ಯರ್ಥಿಗಳು
ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್, ಅವರ ಮಗ ಕೆ.ಟಿ. ರಾಮರಾವ್, ಸೋದರಳಿಯ ಟಿ. ಹರೀಶ್ ರಾವ್, ಎಐಎಂಐಎಂ ಮುಖಂಡ ಅಕ್ಬರುದ್ದೀನ್ ಓವೈಸಿ, ಕಾಂಗ್ರೆಸ್ ರಾಜ್ಯ ಕಾರ್ಯಾಧ್ಯಕ್ಷ ಎ. ರೇವಂತ್ ರೆಡ್ಡಿ, ಟಿಡಿಪಿ ಸಂಸ್ಥಾಪಕ ಎನ್.ಟಿ. ರಾಮ ರಾವ್ ಅವರ ಮೊಮ್ಮಗಳು ಎನ್. ಸುಹಾಸಿನಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಲಕ್ಷ್ಮಣ್, ತೆಲಂಗಾಣ ಕಾಂಗ್ರೆಸ್ ಘಟಕದ ಮುಖ್ಯಸ್ಥ ಎನ್. ಉತ್ತಮ್ ಕುಮಾರ್ ರೆಡ್ಡಿ ಕಣದಲ್ಲಿರುವ ಜನಪ್ರಿಯ ಅಭ್ಯರ್ಥಿಗಳು.
ಯುವ ಐಕಾನ್ಗಳಿವರು
ಟಿಆರ್ಎಸ್ನ ಕಲ್ವಕುಂಟ್ಲ ಕವಿತಾ, ಬಾಲ್ಕಾ ಸುಮನ್, ಬಿಜೆಪಿಯ ಗಂಗಾಪುರಂ ಕಿಶನ್ ರೆಡ್ಡಿ, ರೇಷ್ಮಾ ಭಾಯ್ ಬುಕ್ಯ, ಲಕಾವತ್ ನಾಗೇಶ್ವರ ರಾವ್ ಈ ಬಾರಿಯ ವಿಧಾನಸಭೆ ಚುನಾವಣೆಯ ಯುವ ಐಕಾನ್ ರಾಜಕಾರಣಿಗಳಾಗಿದ್ದಾರೆ.
ಈ ಬಾರಿ ಇದೆ ಪೈಪೋಟಿ
ತೆಲಂಗಾಣದಲ್ಲಿ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರ ಟಿಆರ್ ಎಸ್ ಪ್ರಾಬಲ್ಯವಿದೆ. ಮೊದಲ ಚುನಾವಣೆಯಲ್ಲಿ ಪ್ರತ್ಯೇಕ ರಾಜ್ಯ ಹೋರಾಟದ ಮುಂಚೂಣಿಯಲ್ಲಿದ್ದ ಟಿಆರ್ ಎಸ್ ಪರ ಜನರ ಒಲವು ಸಹಜವಾಗಿಯೇ ಇತ್ತು.
ಅವಧಿಗೆ ಮುನ್ನವೇ ಕೆಸಿಆರ್ ಅವರು ಚುನಾವಣೆಗೆ ಬಂದಿದ್ದಾರೆ. ಈ ನಾಲ್ಕು ವರ್ಷಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ವಿರೋಧ ಪಕ್ಷಗಳು ಈ ಬಾರಿ ಹೆಚ್ಚು ಪೈಪೋಟಿ ನೀಡುವ ಸಾಧ್ಯತೆ ಇವೆ. 119 ಸೀಟುಗಳ ಪೈಕಿ ಕಾಂಗ್ರೆಸ್-ಟಿಡಿಪಿ ಮುಖ್ಯವಾಗಿ ಸ್ಥಾನಗಳನ್ನು ಹಂಚಿಕೊಂಡಿವೆ. ಬಿಜೆಪಿ ಇಲ್ಲಿ ಪ್ರಾಬಲ್ಯ ಇಲ್ಲದಿದ್ದರೂ, ಹಿಂದಿನ ಐದು ಸೀಟುಗಳನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications