ತೆಲಂಗಾಣದಲ್ಲಿ ಬ್ಲ್ಯಾಕ್ ಫಂಗಸ್ ಕುರಿತು ಹೊಸ ಅಧಿಸೂಚನೆ
ಹೈದ್ರಾಬಾದ್, ಮೇ 20: ಕೊರೊನಾವೈರಸ್ ಸೋಂಕಿನಿಂದ ಗುಣಮುಖರಾದ ಜನರಲ್ಲಿ ಕಾಣಿಸಿಕೊಳ್ಳುವ ಬ್ಲ್ಯಾಕ್ ಫಂಗಸ್ ಅಥವಾ ಕಪ್ಪು ಶಿಲೀಂದ್ರ ರೋಗವನ್ನು ಸಾಂಕ್ರಾಮಿಕ ಪಿಡುಗು ಕಾಯ್ದೆ 1897ರ ವ್ಯಾಪ್ತಿಗೆ ಸೇರಿದೆ ತೆಲಂಗಾಣ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ದೇಶದ ಎಲ್ಲ ಸರ್ಕಾರಗಳು ಬ್ಲ್ಯಾಕ್ ಫಂಗಸ್ ರೋಗಿಗಳ ಪರೀಕ್ಷೆ, ತಪಾಸಣೆ ಮತ್ತು ರೋಗ ನಿರ್ಣಯಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸುವಂತೆ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯು ಸಲಹೆ ನೀಡಿದೆ.
ಬ್ಲ್ಯಾಕ್ ಫಂಗಸ್ ರೋಗದ ಲಕ್ಷಣಗಳನ್ನು ಹೊಂದಿರುವವರ ಪರೀಕ್ಷೆಗೆ ಹಾಗೂ ಚಿಕಿತ್ಸೆಗೆ ಪ್ರತ್ಯೇಕವಾದ ವ್ಯವಸ್ಥೆಯನ್ನು ಮಾಡಿಕೊಳ್ಳುವುದು ಕಡ್ಡಾಯ ಎಂದು ಸರ್ಕಾರಗಳಿಗೆ ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಇದರ ಜೊತೆ ಬ್ಲ್ಯಾಕ್ ಫಂಗಸ್ ರೋಗಿಗಳ ಅಂಕಿ-ಸಂಖ್ಯೆಗಳ ಬಗ್ಗೆ ಮಾಹಿತಿ ನೀಡುವಂತೆ ಎಲ್ಲ ಆರೋಗ್ಯ ಇಲಾಖೆಗಳಿಗೆ ಸೂಚಿಸಲಾಗಿದೆ.

ಪ್ರತಿನಿತ್ಯ ಸೋಂಕಿತರ ವರದಿ ಬಗ್ಗೆ ಮಾಹಿತಿ:
ರಾಜ್ಯದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯಕೀಯ ವರಿಷ್ಠಾಧಿಕಾರಿಗಳು ಪ್ರತಿನಿತ್ಯ ಬ್ಲ್ಯಾಕ್ ಫಂಗಸ್ ಲಕ್ಷಣಗಳನ್ನು ಹೊಂದಿರುವವರ ಪರೀಕ್ಷೆ ಮತ್ತು ವರದಿಗಳ ಬಗ್ಗೆ ಪ್ರತಿನಿತ್ಯ ಮಾಹಿತಿ ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ. ತೆಲಂಗಾಣದಲ್ಲಿ ಸದ್ಯಕ್ಕೆ 80 ಮಂದಿಗೆ ಬ್ಲ್ಯಾಕ್ ಫಂಗಸ್ ರೋಗ ಅಂಟಿಕೊಂಡಿದ್ದು, ಎಲ್ಲ ರೋಗಿಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇದರ ಜೊತೆಗೆ ಬ್ಲ್ಯಾಕ್ ಫಂಗಸ್ ರೋಗಿಗಳ ಚಿಕಿತ್ಸೆಗಾಗಿ ಗಾಂಧಿ ಜನರಲ್ ಆಸ್ಪತ್ರೆ ಮತ್ತು ಸರ್ಕಾರದ ಇಎನ್ ಟಿ ಆಸ್ಪತ್ರೆಯಲ್ಲಿ ಪ್ರತ್ಯೇಕ ವ್ಯವಸ್ಥೆ ಸಿದ್ಧಪಡಿಸಲಾಗುತ್ತಿದೆ.
ಬ್ಲ್ಯಾಕ್ ಫಂಗಸ್ ರೋಗದ ಲಕ್ಷಣಗಳೇನು?
* ಕಣ್ಣು ಮತ್ತು ಮೂಗಿನ ಸುತ್ತ ಕೆಂಪಾಗುವಿಕೆ ಮತ್ತು ನೋವು
* ಜ್ವರ
* ತಲೆನೋವು
* ಕೆಮ್ಮು
* ಉಸಿರಾಟದ ಸಮಸ್ಯೆ
* ರಕ್ತಸಿಕ್ತ ವಾಂತಿ
* ಮಾನಸಿಕ ಸ್ಥಿತಿ ಬದಲು
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications