ತೆಲಂಗಾಣದಲ್ಲಿ ಬ್ಲ್ಯಾಕ್ ಫಂಗಸ್ ಕುರಿತು ಹೊಸ ಅಧಿಸೂಚನೆ
ಹೈದ್ರಾಬಾದ್, ಮೇ 20: ಕೊರೊನಾವೈರಸ್ ಸೋಂಕಿನಿಂದ ಗುಣಮುಖರಾದ ಜನರಲ್ಲಿ ಕಾಣಿಸಿಕೊಳ್ಳುವ ಬ್ಲ್ಯಾಕ್ ಫಂಗಸ್ ಅಥವಾ ಕಪ್ಪು ಶಿಲೀಂದ್ರ ರೋಗವನ್ನು ಸಾಂಕ್ರಾಮಿಕ ಪಿಡುಗು ಕಾಯ್ದೆ 1897ರ ವ್ಯಾಪ್ತಿಗೆ ಸೇರಿದೆ ತೆಲಂಗಾಣ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ದೇಶದ ಎಲ್ಲ ಸರ್ಕಾರಗಳು ಬ್ಲ್ಯಾಕ್ ಫಂಗಸ್ ರೋಗಿಗಳ ಪರೀಕ್ಷೆ, ತಪಾಸಣೆ ಮತ್ತು ರೋಗ ನಿರ್ಣಯಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸುವಂತೆ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯು ಸಲಹೆ ನೀಡಿದೆ.
ಬ್ಲ್ಯಾಕ್ ಫಂಗಸ್ ರೋಗದ ಲಕ್ಷಣಗಳನ್ನು ಹೊಂದಿರುವವರ ಪರೀಕ್ಷೆಗೆ ಹಾಗೂ ಚಿಕಿತ್ಸೆಗೆ ಪ್ರತ್ಯೇಕವಾದ ವ್ಯವಸ್ಥೆಯನ್ನು ಮಾಡಿಕೊಳ್ಳುವುದು ಕಡ್ಡಾಯ ಎಂದು ಸರ್ಕಾರಗಳಿಗೆ ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಇದರ ಜೊತೆ ಬ್ಲ್ಯಾಕ್ ಫಂಗಸ್ ರೋಗಿಗಳ ಅಂಕಿ-ಸಂಖ್ಯೆಗಳ ಬಗ್ಗೆ ಮಾಹಿತಿ ನೀಡುವಂತೆ ಎಲ್ಲ ಆರೋಗ್ಯ ಇಲಾಖೆಗಳಿಗೆ ಸೂಚಿಸಲಾಗಿದೆ.

ಪ್ರತಿನಿತ್ಯ ಸೋಂಕಿತರ ವರದಿ ಬಗ್ಗೆ ಮಾಹಿತಿ:
ರಾಜ್ಯದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯಕೀಯ ವರಿಷ್ಠಾಧಿಕಾರಿಗಳು ಪ್ರತಿನಿತ್ಯ ಬ್ಲ್ಯಾಕ್ ಫಂಗಸ್ ಲಕ್ಷಣಗಳನ್ನು ಹೊಂದಿರುವವರ ಪರೀಕ್ಷೆ ಮತ್ತು ವರದಿಗಳ ಬಗ್ಗೆ ಪ್ರತಿನಿತ್ಯ ಮಾಹಿತಿ ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ. ತೆಲಂಗಾಣದಲ್ಲಿ ಸದ್ಯಕ್ಕೆ 80 ಮಂದಿಗೆ ಬ್ಲ್ಯಾಕ್ ಫಂಗಸ್ ರೋಗ ಅಂಟಿಕೊಂಡಿದ್ದು, ಎಲ್ಲ ರೋಗಿಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇದರ ಜೊತೆಗೆ ಬ್ಲ್ಯಾಕ್ ಫಂಗಸ್ ರೋಗಿಗಳ ಚಿಕಿತ್ಸೆಗಾಗಿ ಗಾಂಧಿ ಜನರಲ್ ಆಸ್ಪತ್ರೆ ಮತ್ತು ಸರ್ಕಾರದ ಇಎನ್ ಟಿ ಆಸ್ಪತ್ರೆಯಲ್ಲಿ ಪ್ರತ್ಯೇಕ ವ್ಯವಸ್ಥೆ ಸಿದ್ಧಪಡಿಸಲಾಗುತ್ತಿದೆ.
ಬ್ಲ್ಯಾಕ್ ಫಂಗಸ್ ರೋಗದ ಲಕ್ಷಣಗಳೇನು?
* ಕಣ್ಣು ಮತ್ತು ಮೂಗಿನ ಸುತ್ತ ಕೆಂಪಾಗುವಿಕೆ ಮತ್ತು ನೋವು
* ಜ್ವರ
* ತಲೆನೋವು
* ಕೆಮ್ಮು
* ಉಸಿರಾಟದ ಸಮಸ್ಯೆ
* ರಕ್ತಸಿಕ್ತ ವಾಂತಿ
* ಮಾನಸಿಕ ಸ್ಥಿತಿ ಬದಲು
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications