ಶೇ4ರಿಂದ 12ಕ್ಕೆ ಅಲ್ಪ ಸಂಖ್ಯಾತರ ಮೀಸಲಾತಿ ಹೆಚ್ಚಿಸಿದ ತೆಲಂಗಾಣ!
ತೆಲಂಗಾಣ ಸರ್ಕಾರ ಮುಸ್ಲಿಂ ಸಮುದಾಯದ ಮೀಸಲಾತಿ ಪ್ರಮಾಣವನ್ನು ಶೇ 4 ರಿಂದ 12ಕ್ಕೆ ಹೆಚ್ಚಿಸಿದೆ.
ಹೈದರಾಬಾದ್, ಏಪ್ರಿಲ್ 16 : ಮುಸ್ಲಿಂ ಸಮುದಾಯದ ಮೀಸಲಾತಿ ಪ್ರಮಾಣವನ್ನು ಶೇ 4 ರಿಂದ 12ಕ್ಕೆ ಏರಿಕೆ ಮಾಡುವ ವಿವಾದಿತ ಮೀಸಲಾತಿ ಮಸೂದೆಗೆ ತೆಲಂಗಾಣ ಸರ್ಕಾರ ವಿಧಾನಸಭೆಯ ಅನುಮೋದನೆ ಪಡೆದಿದೆ.
ತೆಲಂಗಾಣದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿರುವ ಮುಸ್ಲಿಂ ಮತ್ತು ಹಿಂದೂಳಿದ ಬುಡಕಟ್ಟು ಜನಾಂಗಗಳ ಮೀಸಲಾತಿಯನ್ನು ಶೇ 4ರಿಂದ 12ಕ್ಕೆ ಏರಿಕೆ ಮಾಡುವ ಮಸೂದೆಯನ್ನು ತೆಲಂಗಾಣ ಸರ್ಕಾರ ಜಾರಿಗೊಳಿಸಿದ್ದು, ಬಿಜೆಪಿ ಸದಸ್ಯರ ವ್ಯಾಪಕ ವಿರೋಧ ನಡುವೆಯೇ ಮಸೂದೆಗೆ ಭಾನುವಾರ ಅನುಮೋದನೆ ಪಡೆದಿದೆ. [ಪತ್ರಕರ್ತರ ಕಲ್ಯಾಣಕ್ಕಾಗಿ 30 ಕೋಟಿ ಎತ್ತಿಟ್ಟ ತೆಲಂಗಾಣ]

ಸಿಎಂ ಕೆ ಚಂದ್ರ ಶೇಖರ ರಾವ್ ಅವರ ಈ ನಿರ್ಧಾರ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಸರ್ಕಾರದ ಕ್ರಮವನ್ನು ಬಲವಾಗಿ ಖಂಡಿಸಿರುವ ಬಿಜೆಪಿ ಪಕ್ಷದ ಸದಸ್ಯರು ಸದನದ ಒಳಗೆ ಹಾಗೂ ಹೊರಗೆ ವ್ಯಾಪಕ ಪ್ರತಿಭಟನೆ ನಡೆಸಿದ್ದಾರೆ.
ಮಸೂದೆ ಮಂಡನೆಯಾಗುತ್ತಿದ್ದಂತೆಯೇ ಬಿಜೆಪಿ ಸದಸ್ಯರು ಸದನದಲ್ಲಿ ಕೋಲಾಹಲವೆಬ್ಬಿಸಿದ ಕಾರಣ ಬಿಜೆಪಿ ಐದು ಶಾಸಕರನ್ನು ಸದನದಿಂದ ಬಲವಂತವಾಗಿ ಹೊರಹಾಕಲಾಯಿತು.
ಇದಾಗ್ಯೂ ಬಿಜೆಪಿ ಶಾಸಕರು ಸದನದಲ್ಲಿ ತಮ್ಮ ಪ್ರತಿಭಟನೆ ಮುಂದುವರೆಸಿದರು. ಪ್ರತಿಭಟನೆಯ ನಡುವೆಯೇ ಮಸೂದೆಗೆ ಅನುಮೋದನೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.
ಹಿಂದುಳಿದ ಬುಡಕಟ್ಟು ಜನಾಂಗ ಮತ್ತು ಹಿಂದುಳಿದ ಮುಸ್ಲಿಂ ವರ್ಗಗಳಿಗೆ ಔದ್ಯೋಗಿಕ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಮೀಸಲಾತಿ ಹೆಚ್ಚಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತೆಲಂಗಾಣ ಸರ್ಕಾರ ಹೇಳಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications