ವಾರಂಗಲ್ ಭದ್ರಕಾಳಿಗೆ 3 ಕೋಟಿ ರು ಮೌಲ್ಯದ ಚಿನ್ನದ ಕಿರೀಟ!
ಹೈದರಾಬಾದ್, ಅಕ್ಟೋಬರ್ 08: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಚುನಾವಾಣಾ ಸಂದರ್ಭದಲ್ಲಿ ದೇವಸ್ಥಾನಗಳಿಗೆ ಹೊತ್ತುಕೊಂಡಿದ್ದ ಹರಕೆಗಳನ್ನು ಒಂದೊಂದಾಗಿ ತೀರಿಸಲು ಅಣಿಯಾಗಿದ್ದಾರೆ. ವಾರಂಗಲ್ ಜಿಲ್ಲೆಯ ಪ್ರಸಿದ್ಧ ಭದ್ರಕಾಳಿ ದೇವಸ್ಥಾನದಲ್ಲಿ ನಡೆಯುತ್ತಿರುವ ನವರಾತ್ರಿ ಉತ್ಸವದ ಸಂದರ್ಭದಲ್ಲಿ ಭದ್ರಕಾಳಿ ಅಮ್ಮನವರಿಗೆ ಸುಮಾರು ಮೂರು ಕಟಿ ಬೆಲೆಬಾಳುವ ಚಿನ್ನದ ಕಿರೀಟವನ್ನು ಸರ್ಕಾರದ ವತಿಯಿಂದ ಸಮರ್ಪಿಸಲು ಮುಂದಾಗಿದ್ದಾರೆ.
ಮೂರು ಕೋಟಿ 70 ಲಕ್ಷ ವೆಚ್ಚದಲ್ಲಿ ತಯಾರಿಸಲಾಗಿರುವ ಚಿನ್ನದ ಕೀರಿಟವು 11ಕೆ.ಜಿ. 700ಗ್ರಾಂ ತೂಕ ಹೊಂದಿದೆ. ಈ ಕಿರೀಟವನ್ನು ಭಾನುವಾರ (ಅಕ್ಟೋಬರ್ 9) ದಂದು ಸತಿಸಮೇತರಾಗಿ ದೇವಸ್ಥಾನಕ್ಕೆ ತೆರಳಿ ಅವರು ಸಮರ್ಪಿಸಲಿದ್ದಾರೆ.

ಸ್ವರ್ಣ ಕಿರೀಟವನ್ನು ಜಿಆರ್ ಟಿ ಜ್ಯುವೆಲ್ಲರ್ಸ್ ಸಂಸ್ಥೆಯವರು ತಯಾರಿಸಿದ್ದಾರೆ. ಮಂತ್ರಿ ಪರಿಷತ್ ಶುಕ್ರವಾರ ನಡೆದ ಮಂತ್ರಿ ಪರಿಷತ್ ಸಭೆ ನಂತರ ಮುಖ್ಯಮಂತ್ರಿಯವರ ಕಚೇರಿಯಲ್ಲಿ ಕಿರೀಟವನ್ನು ಸಚಿವ ಸಂಪುಟ ಪರಿಶೀಲಿಸಿದೆ.

ತೆಲಂಗಾಣ ಪ್ರತ್ಯೇಕ ರಾಜ್ಯ ಅನುಷ್ಠಾನಕ್ಕಾಗಿ ಕೆ.ಚಂದ್ರಶೇಖರ್ ರಾವ್ ಅವರು ವರಂಗಲ್ ಭದ್ರಕಾಳಿ ದೇವಸ್ಥಾನ, ವಿಜಯವಾಡ ಕನಕ ದುರ್ಗಮ್ಮ ದೇವಸ್ಥಾನ ಮತ್ತು ತಿರುಪತಿ ಕ್ಷೇತ್ರಗಳಿಗೆ ಹರಕೆ ಹೊತ್ತುಕೊಂಡಿದ್ದರು. ಹರಕೆಯ ಮೊದಲ ಭಾಗವಾಗಿ ವಾರಂಗಲ್ ಭದ್ರಕಾಳಿ ದೇವಸ್ಥಾನಕ್ಕೆ ಹರಕೆ ತೀರಿಸುತ್ತಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications