ತೆಲಂಗಾಣ ಎನ್ಕೌಂಟರ್: ಡಿ.9ರವರೆಗೂ ಅಂತ್ಯಸಂಸ್ಕಾರ ಮಾಡದಂತೆ ಸೂಚನೆ
ಹೈದರಾಬಾದ್, ಡಿಸೆಂಬರ್ 9: ತೆಲಂಗಾಣದಲ್ಲಿ ಶುಕ್ರವಾರ ಮುಂಜಾನೆ ಎನ್ಕೌಂಟರ್ಗೆ ಬಲಿಯಾದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಮೃತದೇಹಗಳನ್ನು ಡಿ. 9ರ ಸಂಜೆ 6 ಗಂಟೆಯವರೆಗೂ ಕಾಪಾಡುವಂತೆ ತೆಲಂಗಾಣ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಅಲ್ಲದೆ, ಆರೋಪಿಗಳ ಮರಣೋತ್ತರ ಪರೀಕ್ಷೆ ಮುಗಿದ ಬಳಿಕ ಅದರ ಸಂಪೂರ್ಣ ವಿಡಿಯೋವನ್ನು ಸಿ.ಡಿ ಅಥವಾ ಪೆನ್ಡ್ರೈವ್ನಲ್ಲಿ ಮಹಬೂಬನಗರದ ಮುಖ್ಯ ಜಿಲ್ಲಾ ನ್ಯಾಯಾಧೀಶರಿಗೆ ಒಪ್ಪಿಸಬೇಕು ಎಂದು ನಿರ್ದೇಶಿಸಿದೆ.
ನ್ಯಾಷನಲ್ ಅಲೈಯನ್ಸ್ ಆಫ್ ಪೀಪಲ್ಸ್ ಮೂವ್ಮೆಂಟ್ಸ್ (ಎನ್ಎಪಿಎಂ), ಮಾನವ ಹಕ್ಕುಗಳ ಸಂಘಟನೆ ಮತ್ತು ವಿವಿಧ ಮಹಿಳಾ ಸಂಘಟನೆಗಳ ಕಾರ್ಯಕರ್ತರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶ ನೀಡಿದೆ.

ತೆಲಂಗಾಣ-ಆಂಧ್ರಪ್ರದೇಶದ ವೈದ್ಯರಲ್ಲದೆ, ಮರಣೋತ್ತರ ಪರೀಕ್ಷೆಯ ತಜ್ಞರ ವಿಶೇಷ ತಂಡವನ್ನು ರಚಿಸಬೇಕು. ಮರಣೋತ್ತರ ಪರೀಕ್ಷೆಯ ಸ್ವತಂತ್ರ ವಿಡಿಯೋ ಚಿತ್ರೀಕರಣ ಮಾಡಬೇಕು. ಇದಕ್ಕೆ ಕೂಡಲೇ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.
ಘಟನೆಯ ಸ್ವತಂತ್ರ ಪರಿಶೀಲನೆಗೆ ವಿಶೇಷ ವಿಧಿವಿಜ್ಞಾನ ತಂಡವನ್ನು ರಚಿಸಬೇಕು. ಇರುವ ಕಾನೂನು ಪ್ರಕ್ರಿಯೆಗಳನ್ನು ಮೀರಿ ಇಂತಹ ಹತ್ಯೆಗಳನ್ನು ನಡೆಸುವ ಮೂಲಕ ನ್ಯಾಯ ನೀಡುತ್ತೇವೆ ಎಂದು ಆಲೋಚಿಸುವುದು ಕೂಡ ಹೀನಾಯವಾಗಿದೆ. ಈ ಹತ್ಯೆ ಅನಾಗರಿಕ ಮತ್ತು ಕ್ರೂರ ಎಂದು ಆರೋಪಿಸಿದ್ದಾರೆ.
ಈ ಎನ್ಕೌಂಟರ್ ಹಿಂದಿರುವ ಸತ್ಯಾಸತ್ಯತೆಗಳನ್ನು ಪರಿಶೀಲಿಸಲು ಸರ್ಕಾರ ತನ್ನದೇ ವೀಕ್ಷಕರನ್ನು ಕಳುಹಿಸಬೇಕು. ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಕೂಡ ಮನವಿ ಮಾಡಲಾಗಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಡಿ.9ಕ್ಕೆ ಮುಂದೂಡಲಾಗಿದೆ. ಮಾನವ ಹಕ್ಕುಗಳ ಸಂಘಟನೆಯ ಸದಸ್ಯರು ಆರೋಪಿಗಳ ಮೃತದೇಹ ಇರಿಸಿರುವ ಮಹಬೂಬನಗರ ಜಿಲ್ಲಾಸ್ಪತ್ರೆಗೆ ಶನಿವಾರ ಭೇಟಿ ನೀಡಲಿದ್ದಾರೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications