'ಬೆಸ್ಟ್ ತಹಸೀಲ್ದಾರ್' ಪ್ರಶಸ್ತಿ ಪಡೆದ ಮಹಿಳಾ ಅಧಿಕಾರಿ ಮನೆಯಲ್ಲಿ ಲಕ್ಷ ಲಕ್ಷ ಹಣ
ನವದೆಹಲಿ, ಜುಲೈ 12: ಎಸಿಬಿ ಬೆಲೆಗೆ ಬಿದ್ದಿರುವ ತೆಲಂಗಾಣ ಮಹಿಳಾ ಅಧಿಕಾರಿ ಲಾವಣ್ಯ ಎರಡು ವರ್ಷಗಳ ಹಿಂದಷ್ಟೇ ಬೆಸ್ಟ್ ತಹಸೀಲ್ದಾರ್ ಪ್ರಶಸ್ತಿಗೆ ಪಾತ್ರರಾಗಿದ್ದರು ಎನ್ನುವುದು ತಿಳಿದುಬಂದಿದೆ.
ಭ್ರಷ್ಟಾಚಾರ ನಿಗ್ರಹ ದಳ ಲಾವಣ್ಯ ಅವರ ಮನೆ ಮೇಲೆದಾಳಿ ನಡೆಸಿ 93.2 ಲಕ್ಷ ರೂ ನಗದು ಹಾಗೂ 400 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಲಾವಣ್ಯ ರಂಗಾರೆಡ್ಡಿ ಜಿಲ್ಲೆಯಲ್ಲಿ ಕಂದಾಯ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು.
ಲಾವಣ್ಯ ಮತ್ತು ಅವರ ಕಿರಿಯ ಅಧಿಕಾರಿ ರೈತ ಬಾಸ್ಕರ್ ಜಾಮೀನಿನ ದಾಖಲೆ ಪತ್ರಗಳನ್ನು ತಿದ್ದುಪಡಿ ಮಾಡಿಕೊಡಲು ಎಂಟು ಲಕ್ಷ ರೂ ಬೇಡಿಕೆ ಇಟ್ಟಿದ್ದರು.
ರೈತರ ಪ್ರಕಾರ ದಾಖಲೆ ಸರಿಪಡಿಸಲು ಒಟ್ಟು 8 ಲಕ್ಷ ರೂ. ಲಂಚ ಬೇಡಿಕೆ ಇಟ್ಟಿದ್ದರು. ಇದರಲ್ಲಿ ತಹಸೀಲ್ದಾರ್ ಲಾವಣ್ಯರಿಗೆ 5 ಲಕ್ಷ ಹಾಗೂ ಅಂತಯ್ಯಗೆ 3 ಲಕ್ಷ ರೂ ಎಂದು ಆರೋಪಿಸಿದ್ದಾರೆ. ರೈತನಿಂದ ಹಣ ಪಡೆದ ಬಳಿಕ ಅಂತಯ್ಯ ತಹಸೀಲ್ದಾರ್ಗೆ ಮಾಹಿತಿ ನೀಡಿದ್ದಾಗಿ ಅಧಿಕಾರಿಗಳ ಬಳಿ ಹೇಳಿಕೊಂಡಿದ್ದು, ಬಳಿಕ ತಹಸೀಲ್ದಾರ್ರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆದರೆ, ತಾನೂ ಲಂಚ ಪಡೆದಿರುವ ಆರೋಪವನ್ನು ತಹಸೀಲ್ದಾರ್ ತಳ್ಳಿಹಾಕಿದ್ದಾರೆ.

ಇದೇ ವೇಳೆಯಲ್ಲಿ ರೈತನೊಬ್ಬ ತಹಸೀಲ್ದಾರ್ ಲಾವಣ್ಯ ಕಾಲಿಗೆ ಬಿದ್ದು ಮನವಿ ಮಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿರುವುದು ಪ್ರಕರಣಕ್ಕೆ ಮತ್ತಷ್ಟು ಪುರಾವೆ ಸಿಕ್ಕಿದಂತಿದೆ.
ವಿಡಿಯೋದಲ್ಲಿರುವ ರೈತನನ್ನು ಭಾಸ್ಕರ್ ಎಂದು ಗುರುತಿಸಲಾಗಿದ್ದು, ಪಾಸ್ಬುಕ್ ಪಡೆದುಕೊಳ್ಳಲು ಗ್ರಾಮ ಕಂದಾಯ ಅಧಿಕಾರಿ ಅಂತಯ್ಯಗೆ 30 ಸಾವಿರ ರೂ. ಲಂಚ ನೀಡಿರುವುದಾಗಿ ತಿಳಿಸಿದ್ದಾನೆ.
ಪಾಸ್ಬುಕ್ನಲ್ಲಿನ ತಪ್ಪು ದಾಖಲೆಯನ್ನು ಸರಿಪಡಿಸಲು 1 ಲಕ್ಷ ರೂ. ಕೇಳಿದ್ದರು ಎಂದು ಎಸಿಬಿ ಮುಂದೆ ಬಾಯ್ಬಿಟ್ಟಿದ್ದಾನೆ.
ಭಾಸ್ಕರ್ 30 ಸಾವಿರ ಹಣವನ್ನು ಪಾವತಿಸಿದ್ದರು. ಉಳಿದ ಹಣವನ್ನು ನೀಡುವಂತೆ ಒತ್ತಾಯಿಸಿದ್ದರು. ಈ ವೇಳೆ ಭಾಸ್ಕರ್ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿ ಸಾಕ್ಷಿ ಸಮೇತ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಲಾವಣ್ಯ ಅವರ ಮನೆಯ ಮೇಲೆ ಗುರುವಾರ ದಾಳಿ ನಡೆಸಿ ಬಂಧಿಸಿದ್ದಾರೆ. ಸಕಾಋದಿಂದ ಉತ್ತಮ ತಹಸೀಲ್ದಾರ್ ಎಂಬ ಬಿರುದು ಪಡೆದಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications