ಕೋಳಿ ಜೂಜು; ಹುಂಜಗಳನ್ನು ಜೈಲಿಗೆ ಹಾಕಿದ ಪೊಲೀಸರು!
ಹೈದರಾಬಾದ್, ಫೆಬ್ರುವರಿ 06: ಕೋಳಿಗಳನ್ನು ಮುಂದಿಟ್ಟುಕೊಂಡು ಜೂಜಾಡಿದರೆ ಯಾರನ್ನು ಬಂಧಿಸಬೇಕು? ಜೂಜು ಆಡಿದವರನ್ನು. ಆದರೆ ತೆಲಂಗಾಣದ ಪೊಲೀಸರು ಜೂಜಾಡಿದವರೊಂದಿಗೆ ಜೂಜಿಗೆ ಬಿಟ್ಟಿದ್ದ ಕೋಳಿಗಳನ್ನೂ ಜೈಲಿಗೆ ಹಾಕಿದ್ದಾರೆ.
ಇಂಥದ್ದೊಂದು ವಿಚಿತ್ರ ಸಂಗತಿ ತೆಲಂಗಾಣದ ಖಮ್ಮಂ ಜಿಲ್ಲೆಯ ಮಿಡಿಗೊಂಡ ಪೊಲೀಸ್ ಠಾಣೆಯಲ್ಲಿ ಬೆಳಕಿಗೆ ಬಂದಿದೆ.
ಸಂಕ್ರಾಂತಿ ಸಮಯದಲ್ಲಿ ತೆಲಂಗಾಣದಲ್ಲಿ ಕೋಳಿಜೂಜು ನಡೆಯುವುದು ಹೆಚ್ಚು. ಹೀಗಾಗಿ ಈ ಸಮಯದಲ್ಲಿ ಕೋಳಿಅಂಕ ವಿರೋಧಿ ಕಾರ್ಯಾಚರಣೆ ಆರಂಭಿಸಿದ್ದರು ಪೊಲೀಸರು. ಈ ಸಂದರ್ಭ ಜನವರಿ 10ರಂದು ಈ ಎರಡು ಹುಂಜಗಳನ್ನೂ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

ಇಲ್ಲಿನ ಬಾನಾಪುರಂ ಹಳ್ಳಿಯಲ್ಲಿ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು ಜೂಜಿನಲ್ಲಿ ತೊಡಗಿಕೊಂಡಿದ್ದ ಹತ್ತು ಜನರನ್ನು ಹಾಗೂ ಕೋಳಿ ಜೂಜು ಆಯೋಜಿಸಿದ್ದ ಇಬ್ಬರನ್ನು ಬಂಧಿಸಿದ್ದರು. ಜೂಜು ಅಡ್ಡೆಯಿಂದ ಬೈಕ್ ಹಾಗೂ ಎರಡು ಹುಂಜಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಜೂಜಿನಲ್ಲಿ ಜೈಲು ಸೇರಿದ್ದವರಿಗೆಲ್ಲಾ ಜಾಮೀನು ದೊರೆತು ಹೊರಗೆ ಬಂದರೂ ಈ ಎರಡು ಹುಂಜಗಳು ಮಾತ್ರ ಕಂಬಿ ಹಿಂದೆಯೇ ಉಳಿದಿವೆ. ಅವುಗಳನ್ನು ತೆಗೆದುಕೊಳ್ಳಲೂ ಯಾರೂ ಮುಂದೆ ಬಂದಿಲ್ಲ.
ಈ ಹುಂಜಗಳನ್ನು ಜೂಜು ಪ್ರಕರಣದ ಸಾಕ್ಷ್ಯವಾಗಿ ಇಟ್ಟುಕೊಂಡಿದ್ದೇವೆ. ಅವುಗಳನ್ನು ನ್ಯಾಯಾಲಯದಲ್ಲಿ ಸಾಕ್ಷ್ಯದಂತೆ ಸಲ್ಲಿಸುತ್ತೇವೆ ಎಂದು ಹೇಳಿರುವ ಪೊಲೀಸರು, ನಂತರ ಅವುಗಳನ್ನು ಹರಾಜಿಗಿಡುವುದಾಗಿ ತಿಳಿಸಿದ್ದಾರೆ. ಆದರೆ ಜೈಲು ಕಂಬಿ ಹಿಂದಿರುವ ಹುಂಜಗಳ ಸಂಗತಿ ಮಾತ್ರ ಜನರಲ್ಲಿ ಭಾರೀ ಚರ್ಚೆಗೆ ಕಾರಣವಾಗಿವೆ.
Recommended Video
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications