ತೆಲಂಗಾಣ ಚುನಾವಣೆಯಲ್ಲಿ ದಕ್ಷಿಣ ಆಯೋಧ್ಯೆ ಭದ್ರಾಚಲಂ ಸದ್ದು
ಭದ್ರಾಚಲಂ(ತೆಲಂಗಾಣ), ಡಿಸೆಂಬರ್ 04: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಲೋಕಸಭೆ ಚುನಾವಣೆಯ ಪ್ರಮುಖ ವಿಷಯವಾಗಿದೆ. ದಕ್ಷಿಣ ಆಯೋಧ್ಯೆ ಎಂದೇ ಹೆಸರಾಗಿರುವ ಭದ್ರಾಚಲಂನಲ್ಲಿ ಅಭಿವೃದ್ಧಿ ಕುಂಠಿತವಾಗಿ ಎಂದು ಕೆಸಿಆರ್ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ.
ದೇಗುಲ ನಗರಿಯಿಂದ 32 ಕಿ.ಮೀ ದೂರದಲ್ಲಿರುವ ಪರ್ಣಶಾಲೆಯಲ್ಲೇ ರಾಮ -ಸೀತೆ ಹಾಗೂ ಲಕ್ಷ್ಮಣ ನೆಲೆಸಿದ್ದರು. ನಂತರ ಸೀತೆ ಅಪಹರಣದ ನಂತರೂ ರಾಮ ಇಲ್ಲಿ ಇದ್ದರು ಎಂಬ ಪ್ರತೀತಿ ಇದೆ.
ಇಂಥ ಮಹತ್ವದ ತಾಣವನ್ನು ಕಸದ ತೊಟ್ಟಿಯಂತೆ ಮಾಡಲಾಗಿದೆ. ಗೋದಾವರಿ ನದಿ ತೀರದಲ್ಲಿ ಕಸದ ರಾಶಿ ಎದ್ದಿದೆ. ನದಿ ಕಲುಷಿತಗೊಳ್ಳುತ್ತಿದ್ದರೂ ಈ ಬಗ್ಗೆ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳೀಯರ ಆಕ್ರೋಶಕ್ಕೆ ಈಗ ಬಿಜೆಪಿ ದನಿಗೂಡಿಸಿದೆ. ಧಾರ್ಮಿಕ ತಾಣದ ಅಭಿವೃದ್ಧಿಗೆ ಕೆ ಚಂದ್ರಶೇಖರ್ ರಾವ್ ಸರ್ಕಾರವು ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ. 100 ಕೋಟಿ ರು ಬಿಡುಗಡೆ ಎಂಬುದು ಕಾಗದಲ್ಲಿ ಮಾತ್ರ ಇದೆ.
ಟಿಆರ್ ಎಸ್ ಮುಖ್ಯಸ್ಥ, ಮುಖ್ಯಮಂತ್ರಿ ಕೆಸಿಆರ್ ಅವರು ಇಲ್ಲಿನ ವೈಷ್ಣವ ಪಂಥದ ಚಿನ್ನ ಜೀಯರ್ ಅವರ ಅನುಯಾಯಿಯಾಗಿದ್ದಾರೆ. ಸೀತಾರಾಮರ ದೇಗುಲದ ಬಗ್ಗೆ ಯಾಕೆ ತಲೆಕೆಡಿಸಿಕೊಂಡಿಲ್ಲ ಎಂದು ಭಕ್ತ ರಾಮಪ್ರಸಾದ್ ಪ್ರಶ್ನಿಸಿದ್ದಾರೆ.
ಚುನಾವಣೆ ಸಂದರ್ಭದಲ್ಲೂ ಟಿಆರ್ ಎಸ್ ನಾಯಕರು ಇಲ್ಲಿಗೆ ಭೇಟಿ ನೀಡಿಲ್ಲ. ದೇಗುಲದ ಆಸ್ತಿ ಸದ್ಯ ಆಂಧ್ರಪ್ರದೇಶದ ಭಾಗದಲ್ಲಿದೆ. ಭದ್ರಾಚಲಂನ ಎಂಟು ತೆಹಸಿಲ್ ಗಳ ಪೈಕಿ ನಾಲ್ಕು ಆಂಧ್ರಕ್ಕೆಸೇರಿದೆ. ಇದನ್ನು ಹಿಂಪಡೆಯುವ ಯಾವುದೇ ಪ್ರಯತ್ನವನ್ನು ಟಿಆರ್ ಎಸ್ ಸರ್ಕಾರ ಮಾಡಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಪೊದ್ದೆಮ್ ವೀರಯ್ಯ ಹೇಳಿದ್ದಾರೆ.
ಇಲ್ಲಿನ ಪ್ರಸಿದ್ಧ ರಾಮನವಮಿ ಉತ್ಸವದಲ್ಲಿ ಮುಖ್ಯಮಂತ್ರಿ ಪಾಲ್ಗೊಳ್ಳದೇ ಎರಡು ವರ್ಷಗಳಾಗಿವೆ. ದಕ್ಷಿಣ ಆಯೋಧ್ಯೆಯನ್ನು ಕಡೆಗಣಿಸಿದ ರಾವ್ ಅವರಿಗೆ ಈ ಬಾರಿ ಸೋಲು ಖಚಿತ ಎಂದು ಸ್ಥಳೀಯರು ನೊಂದು ನುಡಿದಿದ್ದಾರೆ.
ಸಿಪಿಐಎಂನ ಮಿದಿಯಂ ಬಾಬುರಾವ್, ಬಿಜೆಪಿಯ ಕುಂಜಾ ಸತ್ಯವತಿ, ಟಿಆರ್ ಎಸ್ ನ ತೆಲ್ಲಂ ವೆಂಕಟ ರಾವ್, ಬಿಎಸ್ಪಿಯ ಗುಂಡು ಶರತ್ ಬಾಬು ಈ ಬಾರಿ ಈ ಭಾಗದಿಂದ ವಿಧಾನಸಭೆಗೆ ಸ್ಪರ್ಧಿಸಿದ್ದಾರೆ.(ಪಿಟಿಐ)
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications