ತೆಲಂಗಾಣ; ಟ್ರಕ್ಗೆ ಟಾಟಾ ಏಸ್ ಡಿಕ್ಕಿ, 8 ಸಾವು, 20 ಜನರಿಗೆ ಗಾಯ
ಹೈದರಾಬಾದ್, ಮೇ 9: ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ನಿಜಾಮ್ ಸಾಗರ ವಲಯದ ಹಾಸನಪಲ್ಲಿ ಗೇಟ್ನಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟಾಟಾ ಏಸ್ ವಾಹನ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.
Breaking; ಭೀಕರ ಅಪಘಾತ ಒಂದೇ ಕುಟುಂಬದ 7 ಮಂದಿ ಸಾವು, ಮೋದಿ ಸಂತಾಪ
ಇನ್ನು ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ 6 ಮಹಿಳೆಯರು ಸೇರಿದ್ದಾರೆ. ಮಿನಿವ್ಯಾನ್ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಯಲ್ಲರೆಡ್ಡಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಗಾಯಗೊಂಡ ಇಬ್ಬರು ಬಾನ್ಸವಾಡ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
తెలంగాణలోని కామారెడ్డి జిల్లాలో జరిగిన ప్రమాదంలో ప్రాణాలు కోల్పోవడం చాలా బాధాకరం. మృతుల కుటుంబాలకు , క్షతగాత్రులకు నా ప్రగాఢ సానుభూతి తెలియజేస్తున్నాను . మరణించిన వారి కుటుంబ సభ్యులకు రూ. 2 లక్షలు, క్షతగాత్రులకు రూ. 50,000 పిఎమ్ఎన్ఆర్ఎఫ్ నుండి అందజేయబడుతుంది. : ప్రధాని మోదీ
— PMO India (@PMOIndia) May 9, 2022
ತಿಥಿ ಕಾರ್ಯಕ್ಕೆ ಹೋಗಿದ್ದರು; ಕಾಮರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರು ಮತ್ತು ಗಾಯಗೊಂಡ ಪ್ರಯಾಣಿಕರು ಪಿಟ್ಲಂ ಮಂಡಲದ ಚಿಲ್ಲರಗಿ ಗ್ರಾಮದವರು ಎಂದು ತಿಳಿದು ಬಂದಿದೆ. ಪಕ್ಕದ ಹಳ್ಳಿಯಲ್ಲಿ ನಡೆದ 10ನೇ ದಿನದ ಪುಣ್ಯಸ್ಮರಣೆಯಲ್ಲಿ ಪಾಲ್ಗೊಂಡು ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ.
ತೆಲಂಗಾಣದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಇದರ ಜೊತೆಗೆ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ನೀಡುವುದಾಗಿ ಪ್ರಧಾನಿ ಟ್ವೀಟ್ ಮಾಡಿದ್ದಾರೆ.