ತೆಲಂಗಾಣದಲ್ಲಿ ಟಿಆರ್ ಎಸ್ ಮತ್ತೆ ಅಧಿಕಾರಕ್ಕೆ! ಎನ್ ಡಿಟಿವಿ ವಿಶ್ಲೇಷಣೆ
ಹೈದರಾಬಾದ್, ಡಿಸೆಂಬರ್ 04: ತೆಲಂಗಾಣದಲ್ಲಿ ಕೆ.ಚಂದ್ರಶೇರ್ ರಾವ್ ನೇತೃತ್ವದ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ ಎಸ್) ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಎನ್ ಡಿಟಿವಿ ವಿಶ್ಲೇಷಿಸಿದೆ.
ಕೆಸಿಆರ್ ಅವರನ್ನು ಸೋಲಿಸಲೇಬೇಕೆಂಬ ಜಿದ್ದಿಗೆ ಬಿದ್ದಿರುವ ಕಾಂಗ್ರೆಸ್ ಮತ್ತು ತೆಲುಗು ದೇಶಂ ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸುತ್ತಿವೆ. ಟಿಡಿಪಿಯ ಚಂದ್ರಬಾಬು ನಾಯ್ಡು ಅವರಿಗೆ ತೆಲಂಗಾಣದಲ್ಲೂ ಸಾಕಷ್ಟು ಅಭಿಮಾನಿಗಳಿರುವ ಕಾರಣ ಕಾಂಗ್ರೆಸ್, ಟಿಡಿಪಿ ನೆರವಿನ ಮೊರೆಹೋಗಿದೆ.
ಲೋಕಸಭಾ ಚುನಾವಣೆಗೂ ಮುನ್ನ ನಡೆಯುತ್ತಿರುವ ಈ ಚುನಾವಣೆ ದಕ್ಷಿಣ ಭಾರತದ ರಾಜ್ಯಗಳ ಜನಾದೇಶ ಯಾವರೀತಿ ಇದೆ ಎಂಬುದನ್ನು ಅಳೆಯಲು ಮಾನದಂಡವಾಗುವುದರಿಂದ ಈ ಚುನಾವಣೆಯ ಮೇಲೆ ಕೇಂದ್ರ ನಾಯಕರ ಕಣ್ಣೂ ನೆಟ್ಟಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಹಲವರು ತೆಲಂಗಾಣದಲ್ಲಿ ಪ್ರಚಾರ ನಡೆಸಿದ್ದಾರೆ. ಇಷ್ಟೆಲ್ಲ ಆದರೂ ಈ ರಾಜ್ಯದಲ್ಲಿ ಕೆಸಿಆರ್ ಅವರೇ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ ಎಂಬುದು ಎನ್ ಡಿಟಿವಿ ವಿಶ್ಲೇಷಣೆ.

ಟಿಆರ್ ಎಸ್ ಗೆ 66 ಸೀಟು!
ತೆಲಂಗಾಣ ರಾಷ್ಟ್ರ ಸಮಿತಿ - 66
ಕಾಂಗ್ರೆಸ್, ಟಿಡಿಪಿ ಮೈತ್ರಿಕೂಟ -39
ಎಐಎಂಐಎಂ - 7
ಬಿಜೆಪಿ - 4
ಇತರರು - 3

ತೆಲಂಗಾಣ ರಾಷ್ಟ್ರ ಸಮಿತಿ
ತೆಲಂಗಾಣದಲ್ಲಿ ಒಟ್ಟು 119 ಕ್ಷೇತ್ರಗಳಿದ್ದು, ಬಹುಮತಕ್ಕೆ ಅಗತ್ಯವಿರುವ ಮ್ಯಾಜಿಕ್ ಸಂಖ್ಯೆ 60. ಎನ್ ಡಿಟಿವಿ ವಿಶ್ಲೇಷಣೆಯ ಪ್ರಕಾರ ಟಿಆರ್ ಎಸ್ 66 ಕ್ಷೇತ್ರಗಳನ್ನು ಗೆದ್ದು ಬಹುಮತ ಪಡೆಯಲಿದೆ. ಬಿಜೆಪಿ 4 ಸ್ಥಾನ ಗೆದ್ದರೆ, ಇತರರು 3 ಸ್ಥಾನ ಗೆಲ್ಲಲಿದ್ದಾರೆ. ಟಿಆರ್ ಎಸ್ ಬಗ್ಗೆ ಬಿಜೆಪಿ ಮೃಧು ಧೋರಣೆಯನ್ನೇ ತಳೆದಿದ್ದು, ಚುನಾವಣೆಗೂ ಮೊದಲು ಈ ಎರಡು ಪಕ್ಷಗಳು ಮೈತ್ರಿ ಮಾಡಿಕೊಂಡಿಲ್ಲ. ಚುನಾವಣೋತ್ತರ ಮೈತ್ರಿಯ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಅಕಸ್ಮಾತ್ ಬಿಜೆಪಿ ಮೈತ್ರಿ ಮಾಡಿಕೊಳ್ಳದಿದ್ದರೂ ಇಷ್ಟು ಸೀಟುಗಳನ್ನು ಗೆದ್ದರೆ ಟಿಆರ್ ಎಸ್ ಅಂತು ಸುಭದ್ರ ಸರ್ಕಾರ ನೀಡುವುದಕ್ಕೆ ಸಾಧ್ಯ.

ಕಾಂಗ್ರೆಸ್-ಟಿಡಿಪಿ ಜುಗಲ್ ಬಂಧಿಗೆ ಎಷ್ಟು ಅಂಕ?
ತೆಲುಗು ದೇಶಂ ಪಕ್ಷ ಮತ್ತು ಕಾಂಗ್ರೆಸ್ ಮೈತ್ರಿಕೂಟ 39 ಸ್ಥಾನಗಳನ್ನು ಪಡೆಯಲಿದೆ. ಬಹುಮತಕ್ಕೆ ಅಗತ್ಯವಿರುವ ಇನ್ನೂ 21 ಸ್ಥಾನಗಳನ್ನು ಪಡೆಯಲು ಈ ಮೈತ್ರಿಕೂಟಕ್ಕೆ ಸಾಧ್ಯವೇ ಇಲ್ಲ. ಅಸಾದುದ್ದಿನ್ ಓವೈಸಿಯ ಎಐಎಂಐಎಂನ 7 ಮತ್ತು ಇತರ 3 ಶಾಸಕರ ಬೆಂಬಲಸಿಕ್ಕಿಬಿಟ್ಟರೂ ಬಹುಮತ ಪಡೆಯುವುದಕ್ಕೆ ಸಾಧ್ಯವಿಲ್ಲ. ಈ ಕಾರಣದಿಂದ ಟಿಆರ್ ಎಸ್ ಸೇಫ್ ಆಗಿ ಉಳಿಯಲಿದೆ.

ಡಿ.11 ರಂದು ತಿಳಿಯಲಿದೆ ಹಣಬರಹ!
ಹಾಲಿ ಮುಖ್ಯಮಂತ್ರಿ ಟಿಆರ್ ಎಸ್ ನ ಕೆ ಚಂದ್ರಶೇಖರ್ ರಾವ್ ಅವರು ವಿಧಾನಸಭೆಯನ್ನು ಅವಧಿಗೂ ಮುನ್ನವೇ ವಿಸರ್ಜಿಸಿದ್ದರಿಂದ ತೆಲಂಗಾಣದಲ್ಲಿ ಅವಧಿಗೂ ಮುನ್ನವೇ ಚುನಾವಣೆ ನಡೆಯುತ್ತಿದೆ. ಡಿ.7 ರಂದು ಮತದಾನ ನಡೆಯಲಿದ್ದು, ಡಿ.11 ರಂದು ಫಲಿತಾಂಶ ಹೊರಬೀಳಲಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications