ತೆಲಂಗಾಣ ಚುನಾವಣೆ : ನಾಮಪತ್ರ ಸಲ್ಲಿಸಿದ ಮುಖ್ಯಮಂತ್ರಿ ಚಂದ್ರಶೇಖರ್ ರಾವ್
ಸಿದ್ದಿಪೇಟ್(ತೆಲಂಗಾಣ), ನವೆಂಬರ್ 14: ತೆಲಂಗಾಣ ಮುಖ್ಯಮಂತ್ರಿ ಹಾಗೂ ತೆಲಂಗಾಣ ರಾಷ್ಟ್ರ ಸಮಿತಿ (ಟಿಎಸ್ ಆರ್) ಮುಖ್ಯ ಕೆ ಚಂದ್ರಶೇಖರ್ ರಾವ್ ಅವರು ಬುಧವಾರ(ನವೆಂಬರ್ 14)ದಂದು ಗಜ್ವೇಲ್ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಸಿದ್ದಿಪೇಟ್ ಜಿಲ್ಲೆಯ ಕೊನಯಿಪಲ್ಲಿ ವೆಂಕಣ್ಣ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಗಜ್ವೇಲ್ ವಿಧಾನಸಭಾ ಕ್ಷೇತ್ರದಿಂದ ಕೆಸಿಆರ್ ಅವರು ಎರಡನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ.2014ರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ತೆಲುಗು ದೇಶಂ ಪಾರ್ಟಿ (ಟಿಡಿಪಿ)ಯ ಅಭ್ಯರ್ಥಿ ವಾಂಟೆರು ಪ್ರತಾಪ್ ರೆಡ್ಡಿ ಅವರನ್ನು 19,391 ಮತಗಳ ಅಂತರದಿಂದ ಸೋಲಿಸಿದ್ದರು.

ಈಗ ಕಾಂಗ್ರೆಸ್ ಪಕ್ಷ ಸೇರಿರುವ ರೆಡ್ಡಿ ಅವರು ಮತ್ತೊಮ್ಮೆ ಕೆಸಿಆರ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.
119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಗೆ ಡಿಸೆಂಬರ್ 07ರಂದು ತೆಲಂಗಾಣದಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 11ರಂದು ಮತ ಎಣಿಕೆ ನಡೆದು, ಫಲಿತಾಂಶ ಹೊರಬರಲಿದೆ. ಸೆಪ್ಟೆಂಬರ್ 06ರಂದು ವಿಧಾನಸಭೆಯನ್ನು ವಿಸರ್ಜನೆ ಮಾಡಿದ್ದರಿಂದ ಅವಧಿಗೂ ಮುನ್ನ ಚುನಾವಣೆ ಎದುರಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications