ಡೆಸ್ಟಿನಿ, ಗುಡ್ ಬೈ ಎಂದು ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ನಟ!
ಹೈದರಾಬಾದ್, 20: ತೆಲುಗು ಚಿತ್ರರಂಗದಲ್ಲಿ ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸಿದ್ದ ಹಿರಿಯ ನಟ ಕಾಗ ರಂಗನಾಥ್ ಅಲಿಯಾಸ್ ತಿರುಮಲ ಸುಂದರ ಶ್ರೀರಂಗನಾಥ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 66 ವರ್ಷ ವಯಸ್ಸಿನ ರಂಗನಾಥ್ ಅವರ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಮುಷಿರಾಬಾದ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಹೈದರಾಬಾದ್ನ ಕವಾಡಿಗೂಡದ ತಮ್ಮ ಮನೆಯಲ್ಲಿ ಶನಿವಾರ ಆತ್ಮಹತ್ಯೆಗೆ ಶರಣಾದ ರಂಗನಾಥ್ ಅವರು, ಈ ನಿರ್ಧಾರ ಕೈಗೊಳ್ಳುವುದಕ್ಕೂ ಮುನ್ನ ತಮ್ಮ ಆಪ್ತ ಗೆಳೆಯರೊಬ್ಬರಿಗೆ ಗುಡ್ ಬೈ ಎಂದು ಸಂದೇಶ ಕಳಿಸಿದ್ದಾರೆ. ಅಡುಗೆ ಮನೆಯಲ್ಲಿ 'destiny' ಎಂದು ಬರೆದಿದ್ದಾರೆ. ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಂಗನಾಥ್ ಅವರ ಮಕ್ಕಳ ಹೇಳಿಕೆ ಪ್ರಕಾರ ಅವರು ಮಾನಸಿಕ ಒತ್ತಡ ತಾಳಲಾರದೆ ಈ ನಿರ್ಧಾರ ಕೈಗೊಂಡರು ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಪೊಲೀಸರು ತಕ್ಷಣದ ಪ್ರತಿಕ್ರಿಯೆ ನೀಡಿದ್ದಾರೆ.

ಮಾನಸಿಕ ಒತ್ತಡ ಕಾರಣವೇ?: ರಂಗನಾಥ್ ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಹಾಗೂ ಒಬ್ಬ ಪುತ್ರನಿದ್ದಾನೆ. ಆದರೆ, ಪತ್ನಿ ಸಾವಿನ ನಂತರ ಒಂಟಿಯಾಗಿದ್ದರು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಮನೆಯವರು ಹೇಳಿದ್ದಾರೆ.ಆದರೆ, ರಂಗನಾಥ್ ಅವರ ಪತ್ನಿ 2009ರಲ್ಲೇ ಇಹಲೋಕ ತ್ಯಜಿಸಿದ್ದರು. ರಂಗನಾಥ್ ಇಷ್ಟು ವರ್ಷ ಅದೇ ನೋವಿನಲ್ಲಿ ಇದ್ದರು ಎಂದು ಹೇಗೆ ನಿರ್ಣಯಕ್ಕೆ ಬರಲು ಸಾಧ್ಯ ಎಂಬ ಪ್ರಶ್ನೆಯೂ ಎದ್ದಿದೆ.
ಘಟನೆ ನಡೆದ ದಿನ ಸನ್ಮಾನ ಕಾರ್ಯಕ್ರಮವೊಂದಕ್ಕೆ ತೆರಳಿ ಮನೆಗೆ ವಾಪಸ್ ಬಂದಿದ್ದರು. ನಂತರ ನಿರ್ಮಾಪಕರೊಬ್ಬರಿಗೆ ಗುಡ್ ಬೈ ಎಂದು ಮೆಸೇಜ್ ಮಾಡಿದ್ದಾರೆ. ರಂಗನಾಥ್ ಅವರ ಶವದ ಮರಣೋತ್ತರ ಪರೀಕ್ಷೆ ಉಸ್ಮಾನಿಯಾ ಆಸ್ಪತ್ರೆಯಲ್ಲಿ ನಡೆಸಲಾಗಿದ್ದು, ವರದಿ ಬಂದ ನಂತರ ಇನ್ನಷ್ಟು ಮಾಹಿತಿ ತಿಳಿಯಲಿದೆ.
ಮದ್ರಾಸ್(ಈಗಿನ ಚೆನ್ನೈ) ನಲ್ಲಿ ಜನಿಸಿದ ರಂಗನಾಥ್ ಅವರು 1973ರಲ್ಲಿ 'ಚಂದನಾ' ಚಿತ್ರದ ಮೂಲಕ ನಾಯಕ ನಟನಾಗಿ ಚಿತ್ರರಂಗ ಪ್ರವೇಶಿಸಿದ್ದರು. ನಂತರ ಪೌರಾಣಿಕ, ಧಾರ್ಮಿಕ, ಸಾಮಾಜಿಕ ಪಾತ್ರಗಳನ್ನು ನಿರ್ವಹಿಸಿ ಜನಮನ್ನಣೆ ಗಳಿಸಿದ್ದರು. 300ಕ್ಕೂ ಅಧಿಕ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಈಗ ರಂಗನಾಥ್ ಅವರ ಸಾವಿನ ಕಾರಣ ತಿಳಿಯಲು ಕುಟುಂಬ ವರ್ಗ ಬಯಸಿದೆ. ರಂಗನಾಥ್ ಅವರ ಸಾವಿಗೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ವಿಪಕ್ಷ ನಾಯಕ ಜಗನ್ ಮೋಹನ್ ರೆಡ್ಡಿ ಸೇರಿದಂತೆ ಚಿತ್ರರಂಗದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. (ಒನ್ ಇಂಡಿಯಾ ಸುದ್ದಿ)
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್












Click it and Unblock the Notifications