ಪೇಪರ್ ಬಾಕ್ಸ್ನಲ್ಲಿ ಇನ್ನು ತಿರುಪತಿ ಲಡ್ಡು ವಿತರಣೆ ?
Recommended Video

ತಿರುಪತಿ, ಡಿಸೆಂಬರ್ 1: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬರುವವರಿಗೆ ಇನ್ನುಮುಂದೆ ಪ್ರಸಾದವಾಗಿ ನೀಡುವ ಲಡ್ಡುಗಳನ್ನು ಪೇಪರ್ ಬಾಕ್ಸ್ಗಳಲ್ಲಿ ನೀಡಲು ಚಿಂತನೆ ನಡೆದಿದೆ.
ಸದ್ಯಕ್ಕೆ ತಿರುಪತಿಯಲ್ಲಿ ಲಡ್ಡು ಪ್ರಸಾದ ಪಾಲಿಥಿನ್ ಪ್ಲಾಸ್ಟಿಕ್ ಬ್ಯಾಗ್ಗಳಲ್ಲಿ ನೀಡಲಾಗುತ್ತಿದ್ದು, ಇದರ ಬದಲಿಗೆ ಬಯೋ-ಡಿಗ್ರೇಡಬಲ್ ಪ್ಲಾಸ್ಟಿಕ್ ಕವರ್ಗಳು, ಬಟ್ಟೆ ಬ್ಯಾಗುಗಳನ್ನು ಉಪಯೋಗಿಸಲು ಟಿಟಿಡಿ ಆಲೋಚಿಸಿತ್ತಾದರೂ, ಫುಡ್ ಗ್ರೇಡ್ ಕಾಗದದ ಬಾಕ್ಸ್ಗಳೇ ಉತ್ತಮ ಎಂಬ ನಿರ್ಧಾರಕ್ಕೆ ಬರಲಾಗಿದೆ.

ಇದು ಒಂದೊಮ್ಮೆ ಜಾರಿಯಾದರೆ ಲಡ್ಡುಗಳ ಸಂಖ್ಯೆಗೆ ಅನುಗುಣವಾಗಿ ಮೂರು ಅಳತೆಯ ಬಾಕ್ಸ್ಗಳನ್ನು ತಯಾರಿಸಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ವೆಂಕಟೇಶ್ವರ ಸನ್ನಿಧಾನದ ಕೌಂಟರ್ಗಳಲ್ಲಿ ವಿಶ್ವ ವಿಖ್ಯಾತ ಲಡ್ಡು ಪ್ರಸಾದವನ್ನು ಇನ್ನು ಕೆಲವೇ ದಿನಗಳಲ್ಲಿ ಫುಡ್ ಗ್ರೇಡ್ ಪೇಪರ್ಗಳಲ್ಲಿ ನೀಡಲಾಗುತ್ತದೆ.ಈ ಬಾಕ್ಸ್ಗಳು ಬೇಕರಿ, ಸಿಹಿ ತಿನಿಸುಗಳ ಅಂಗಡಿಗಳಲ್ಲಿ ನೀಡುವ ಪೇಪರ್ ಬಾಕ್ಸ್ಗಳಂತೆಯೇ ಇರಲಿದ್ದು, ಈಗಾಗಲೇ ಶ್ರೀಶೈಲ ದೇಗುಲದಲ್ಲಿ ಪ್ರಸಾದ ವಿನಿಯೋಗಕ್ಕೆ ಈ ಬಾಕ್ಸ್ಗಳನ್ನು ಬಳಸಲಾಗುತ್ತಿದೆ.
ದೇವಾಲಯವನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿಸಲು ದೇವಾಲಯ ಆಡಳಿತ ಮಂಡಳಿ ನಿರ್ಧರಿಸಿದೆ, ದಿನನಿತ್ಯ ಲಕ್ಷಾಂತರ ಮಂದಿ ತಿಮ್ಮಪ್ಪನ ದರ್ಶನಕ್ಕೆಂದು ಬರುತ್ತಾರೆ, ಹಾಗೆಯೇ ಲಕ್ಷಗಟ್ಟಲೆ ಪ್ಲಾಸ್ಟಿಕ್ ಕವರ್ಗಳ ಬಳಕೆಯೂ ಆಗುತ್ತುದೆ.
ಇದನ್ನು ತಪ್ಪಿಸಲು ಆಡಳಿತ ಮಂಡಳಿ ನಿರ್ಧರಿಸಿದ್ದು ಪೇಪರ್ ಬಾಕ್ಸ್ಗಳಲ್ಲಿ ಲಡ್ಡುಗಳನ್ನು ವಿತರಿಸಲು ಚಿಂತನೆ ನಡೆಸಿದೆ. ಶೀಘ್ರವೇ ಇದನ್ನು ಅನುಷ್ಠಾನಕ್ಕೆ ತರುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications