ನೋಟು ನಿಷೇಧ, ಜಗತ್ತಿನ ಶ್ರೀಮಂತ ದೇಗುಲದ ಆದಾಯ ನಿತ್ಯ 2 ಕೋಟಿ ಖೋತಾ
ನೋಟು ನಿಷೇಧದ ಪರಿಣಾಮ ತಿರುಪತಿ ತಿಮ್ಮಪ್ಪನ ನಿತ್ಯದ ಆದಾಯದ ಮೇಲೂ ಆಗಿದೆ. ಈ ಹಿಂದೆ ಆಗುತ್ತಿದ್ದ ಆದಾಯದಲ್ಲಿ ಎರಡು ಕೋಟಿ ಕಡಿಮೆ ಆಗಿದೆಯಂತೆ. ಆ ಕಾರಣಕ್ಕೆ ಟಿಕೆಟ್ ಹಾಗೂ ವಿವಿಧ ಸೇವಾ ದರಗಳನ್ನು ಏರಿಸಲು ಚಿಂತನೆ ನಡೆದಿದೆ
ತಿರುಮಲ, ಫೆಬ್ರವರಿ 18: ತಿರುಪತಿ ತಿಮ್ಮಪ್ಪನಿಗೂ ನೋಟು ನಿಷೇಧದ ಪರಿಣಾಮ ತಾಗಿದಂತಿದೆ. ಏಳು ಬೆಟ್ಟ ಏರಿ ತಿಮ್ಮಪ್ಪನ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಇನ್ನು ಮುಂದೆ ಟಿಕೆಟ್ ಬೆಲೆ ಏರಿಕೆ ಮತ್ತು ಇತರ ಸೇವೆಗಳ ಬೆಲೆ ಏರಿಕೆ ತಟ್ಟಲಿದೆ. ಏಕೆಂದರೆ ನೋಟು ನಿಷೇಧದ ನಂತರ ತಿರುಮಲ ತಿರುಪತಿ ದೇವಸ್ಥಾನದ ನಿತ್ಯದ ಆದಾಯದಲ್ಲೇ ಕುಸಿತವಾಗಿದೆ.
ಆ ಕಾರಣಕ್ಕೆ ದೇವರ ದರ್ಶನದ ಟಿಕೆಟ್ ದರ ಸೇರಿದಂತೆ ಇತರ ಸೇವೆಗಳ ಶುಲ್ಕದಲ್ಲಿ ಏರಿಕೆ ಮಾಡಲು ಚಿಂತನೆ ನಡೆದಿದೆ. ನೋಟು ನಿಷೇಧದ ಮುಂಚೆ ದೇವಸ್ಥಾನಕ್ಕೆ ನಿತ್ಯ 5 ಕೋಟಿ ಆದಾಯ ಇತ್ತು. ಅದರಲ್ಲಿ ಬ್ಯಾಂಕ್ ನಲ್ಲಿ ಇಟ್ಟಿದ್ದ ಠೇವಣಿ ಮೇಲಿನ ಬಡ್ಡಿಯೂ ಸೇರಿತ್ತು. ಹುಂಡಿಗೆ ಬೀಳುತ್ತಿದ್ದ ಹಣ, ಟಿಕೆಟ್ ಮಾರಾಟ, ಪ್ರಸಾದ ಇತ್ಯಾದಿ ಮೂಲದಿಂದ ಆದಾಯ ಸಮೃದ್ಧವಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.[ತಿರುಪತಿ ತಿಮ್ಮಪ್ಪನ ವಿಶೇಷ ದರ್ಶನಕ್ಕೆ ಆಧಾರ್ ಕಾರ್ಡ್ ಕಡ್ಡಾಯ!]

ಅದರೆ, ಯಾವಾಗ ನೋಟು ನಿಷೇಧವಾಯಿತೋ ಹಲವು ದಿನಗಳಿಂದ ನಿತ್ಯ ಒಂದರಿಂದ ಎರಡು ಕೋಟಿ ರುಪಾಯಿಯಷ್ಟು ಆದಾಯ ಕಡಿಮೆಯಾಗಿದೆ. ಆದ್ದರಿಂದ ಭಕ್ತರಿಗೆ ಹೊರೆಯಾಗದ ರೀತಿಯಲ್ಲಿ ಆದಾಯವನ್ನು ಸರಿದೂಗಿಸಲು ಯೋಚಿಸುತ್ತಿದ್ದೇವೆ ಎಂದು ಟಿಟಿಡಿ ಅಧ್ಯಕ್ಷ ಚದಲವಾಡ ಕೃಷ್ಣಮೂರ್ತಿ ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ.
ಅದಕ್ಕಾಗಿ ಟಿಕೆಟ್ ದರದಲ್ಲಿ ಅಲ್ಪ ಪ್ರಮಾಣದ ಏರಿಕೆ ಮಾಡಲು ಯೋಚಿಸಲಾಗುತ್ತಿದೆ. ಈ ಪ್ರಸ್ತಾವವನ್ನು ರಾಜ್ಯ ಸರಕಾರಕ್ಕೆ ಈಗಾಗಲೇ ಕಳುಹಿಸಲಾಗಿದೆ. ಆದರೆ ಅದಕ್ಕೆ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಒಪ್ಪಿಗೆ ನೀಡಿಲ್ಲ. ಟಿಟಿಡಿಯ ಟಿಕೆಟ್ ದರ 50ರಿಂದ 5000ದವರೆಗೆ ಇದೆ.[ತಿರುಪತಿ ಲಡ್ಡುಗೂ ಪರವಾನಗಿಯೇ? ಗೋವಿಂದಾ ಗೋವಿಂದ]
"ಆದಾಯ ಸರಿದೂಗಿಸಲು ಟಿಕೆಟ್ ದರದಲ್ಲಿ ಅಥವಾ ವಿವಿಧ ಸೇವೆಗಳ ದರದಲ್ಲಿ 5 ರಿಂದ 10 ರುಪಾಯಿ ಏರಿಕೆ ಮಾಡಲು ಚಿಂತನೆ ನಡೆಸಿದ್ದೇವೆ" ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications