ಕನ್ಹಯ್ಯಾ ಕುಮಾರ್ ಘೋಷಣೆ ಕೂಗಿದ 2 ವಿಡಿಯೋ ನಕಲಿ!
ಹೈದರಾಬಾದ್, ಮಾರ್ಚ್ 02 : ಜೆಎನ್ಯು ವಿದ್ಯಾರ್ಥಿ ಸಂಘದ ನಾಯಕ ಕನ್ಹಯ್ಯಾ ಕುಮಾರ್ ರಾಷ್ಟ್ರ ವಿರೋಧಿ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾಗಿರುವ ವಿಡಿಯೋ ನಕಲಿ ಎಂದು ವಿಧಿ ವಿಜ್ಞಾನ ಪ್ರಯೋಗಾಲಯ ಹೇಳಿದೆ. ಇಂದು ಕನ್ಹಯ್ಯಾ ಕುಮಾರ್ ಜಾಮೀನು ಅರ್ಜಿಯ ತೀರ್ಪನ್ನು ದೆಹಲಿ ಹೈಕೋರ್ಟ್ ಪ್ರಕಟಿಸಲಿದೆ.
ಕನ್ಹಯ್ಯಾ ಕುಮಾರ್ ರಾಷ್ಟ್ರ ವಿರೋಧಿ ಘೋಷಣೆ ಕೂಗಿರುವ ಬಗ್ಗೆ ವಿಡಿಯೋದಲ್ಲಿ ಸಾಕ್ಷಿಗಳಿಲ್ಲ ಎಂದು ದೆಹಲಿ ಪೊಲೀಸರು ಫೆ.29ರಂದು ದೆಹಲಿ ಹೈಕೋರ್ಟ್ಗೆ ಹೇಳಿಕೆ ನೀಡಿದ್ದರು. ಈಗ ಪೊಲೀಸರು ಸಂಗ್ರಹಣೆ ಮಾಡಿರುವ ವಿಡಿಯೋ ನಕಲಿ ಎಂದು ವಿಧಿವಿಜ್ಞಾನ ಪ್ರಯೋಗಾಲಯ ಹೇಳಿದೆ. ['ಕನ್ಹಯ್ಯಾ ಕುಮಾರ್ ದೇಶ ವಿರೋಧಿ ಘೋಷಣೆ ಕೂಗಿಲ್ಲ']

ಕನ್ಹಯ್ಯಾ ಕುಮಾರ್ ಅವರ ವಿರುದ್ಧ ರಾಜದ್ರೋಹದ ಪ್ರಕರಣ ದಾಖಲಾಗಿದ್ದು, ಸದ್ಯ ಅವರು ಪೊಲೀಸರ ವಶದಲ್ಲಿದ್ದಾರೆ. ಆರೋಪವನ್ನು ಸಾಬೀತುಪಡಿಸಲು ದೆಹಲಿ ಪೊಲೀಸರು 7 ವಿಡಿಯೋಗಳನ್ನು ಸಂಗ್ರಹಣೆ ಮಾಡಿದ್ದರು. ಫೆ.9ರಂದು ವಿವಿಯಲ್ಲಿ ನಡೆದ ಕಾರ್ಯಕ್ರಮಗಳ ವಿಡಿಯೋಗಳಲ್ಲಿ 2 ನಕಲಿ ಎಂದು ಪ್ರಯೋಗಾಲಯ ದೆಹಲಿ ಸರ್ಕಾರಕ್ಕೆ ವರದಿ ನೀಡಿದೆ. [ಬೇಲ್ ಕೇಳಿದ ಕನ್ಹಯ್ಯಾನನ್ನು ವಾಪಸ್ ಕಳಿಸಿದ ಸುಪ್ರೀಂಕೋರ್ಟ್]
ಹೈದರಾಬಾದ್ನ ವಿಧಿವಿಜ್ಞಾನ ಪ್ರಯೋಗಾಲಯ ಆಡಿಯೋ, ವಿಡಿಯೋ, ತುಟಿ ಚಲನೆ ಸಂಯೋಜನೆಯ ಪರೀಕ್ಷೆಗಳನ್ನು ನಡೆಸಿದ ಬಳಿಕ 2 ವಿಡಿಯೋಗಳು ನಕಲಿ ಎಂದು ಹೇಳಿದೆ. ಬೇರೆ-ಬೇರೆ ಸ್ಥಳದಲ್ಲಿ ತೆಗೆದ ವಿಡಿಯೋಗಳನ್ನು ಸೇರಿಸಿ, ನಕಲಿ ವಿಡಿಯೋ ತಯಾರಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.[ಅಫ್ಜಲ್ ಗುರು ಈತನ ಹೃದಯಕ್ಕೆ ಹತ್ತಿರವಾಗಿದ್ದನಂತೆ!]
ಕನ್ಹಯ್ಯಾ ಕುಮಾರ್ ಮತ್ತು ಉಮರ್ ಖಾಲಿದ್ ಸ್ವತಂತ್ರ ಕಾಶ್ಮೀರಕ್ಕಾಗಿ ಘೋಷಣೆ ಕೂಗುವ ವಿಡಿಯೋ ಸಾಮಾಜಿಕ ತಾಲತಾಣದಲ್ಲಿ ಹರಿದಾಡುತ್ತಿತ್ತು. ಮಾಧ್ಯಮಗಳಿಗೂ ಈ ವಿಡಿಯೋ ಸಿಕ್ಕಿತ್ತು. ಈ ವಿಡಿಯೋ ನಕಲಿ ಎಂದು ಪ್ರಯೋಗಾಲಯ ಹೇಳಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications