ಟಿಡಿಪಿ ಜತೆ ಕೈ ಮೈತ್ರಿ, ಪಕ್ಷ ತೊರೆಯಲು ಚಿರಂಜೀವಿ ನಿರ್ಧಾರ
ಹೈದರಾಬಾದ್, ನವೆಂಬರ್ 11: ತೆಲಂಗಾಣ ವಿಧಾನಸಭೆ ಹಾಗೂ ಮುಂಬರುವ ಆಂಧ್ರಪ್ರದೇಶದ ಚುನಾವಣೆಯಲ್ಲಿ ತೆಲುಗುದೇಶಂ ಪಾರ್ಟಿ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲು ಮುಂದಾಗಿರುವುದಕ್ಕೆ ನಟ, ರಾಜಕಾರಣಿ ಚಿರಂಜೀವಿ ಅವರು ಸಿಟ್ಟಿಗೆದ್ದಿದ್ದಾರೆ.
ಈ ಮೈತ್ರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಚಿರಂಜೀವಿ, ತೆಲುಗುದೇಶಂ ಪಕ್ಷದ ಜತೆಗಿನ ಮೈತ್ರಿಯನ್ನು ಅನೈತಿಕ ಎಂದು ಕರೆದಿದ್ದು, ಶೀಘ್ರದಲ್ಲೇ ಪಕ್ಷವನ್ನು ತೊರೆಯಲಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ನವೆಂಬರ್ 1ರಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ದರು. 2019ರ ಲೋಕಸಭಾ ಚುನಾವಣೆ ಮತ್ತು ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಉಭಯ ಪಕ್ಷಗಳು ಜತೆಯಾಗಿ ಕಾರ್ಯ ನಿರ್ವಹಿಸಲು ನಿರ್ಧರಿಸುವ ಸುದ್ದಿ ಬಂದ ಬಳಿಕ ಚಿರಂಜೀವಿ ಅವರು ಹೈಕಮಾಂಡ್ ವಿರುದ್ಧ ಅಸಮಾಧಾನಗೊಂಡಿದ್ದಾರೆ.

ರಾಜೀನಾಮೆಯನ್ನು ಸಲ್ಲಿಸುವ ಬಗ್ಗೆ, ಇನ್ನೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಚಿರಂಜೀವಿ ಅವರು ಕಾಂಗ್ರೆಸ್ ತೊರೆದು ಪವನ್ ಕಲ್ಯಾಣ್ ಅವರ ಜನ ಸೇನಾ ಪಾರ್ಟಿ ಸೇರಲಿದ್ದಾರೆ ಎಂಬ ಸುದ್ದಿಯಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications