ರೋಹಿತ್ ದಲಿತನಲ್ಲ, ಆತ್ಮಹತ್ಯೆಗೆ ವೈಯಕ್ತಿಕ ಕಾರಣ: 8 ಅಂಶದ ವರದಿ
ಹೈದರಾಬಾದ್, ಅಕ್ಟೋಬರ್ 6: ಹೈದರಾಬಾದ್ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯ್ರೆ ತನಿಖೆಯ ವರದಿ ಬಂದಿದ್ದು, ರೋಹಿತ್ ನ ತಾಯಿ ರಾಧಿಕಾ ಅವರು ಮೀಸಲಾತಿಯ ಲಾಭಕ್ಕಾಗಿ ದಲಿತರು ಎಂದು 'ಬ್ರ್ಯಾಂಡ್' ಮಾಡಿಕೊಂಡಿದ್ದರು. ರೋಹಿತ್ ಆತ್ಮಹತ್ಯೆಗೆ ಆತನೇ ಕಾರಣ ಹೊರತು ಕೇಂದ್ರ ಸಚಿವರಾದ ಬಂಡಾರು ದತ್ತಾತ್ರೇಯ ಹಾಗೂ ಸ್ಮೃತಿ ಇರಾನಿ ತಮ್ಮ ಜವಾಬ್ದಾರಿಯನ್ನಷ್ಟೇ ನಿರ್ವಹಿಸಿದ್ದಾರೆ ಎನ್ನಲಾಗಿದೆ.
ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣದ ತನಿಖೆಗಾಗಿ ರೂಪನ್ ವಾಲ್ ನಿಯೋಗ ರಚಿಸಲಾಗಿತ್ತು. ಜಾತಿಯ ಬಗ್ಗೆ ತುಂಬ ವಿಸ್ತೃತವಾಗಿ ವರದಿಯಲ್ಲಿ ತಿಳಿಸಲಾಗಿದ್ದು, ರಾಧಿಕಾ ವೇಮುಲ ಅವರು ಜಾತಿಯ ವಿಚಾರವಾಗಿ ಹೇಳುವ ಮಾಹಿತಿಯನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದು ತಿಳಿಸಲಾಗಿದೆ.[ತಾಯಿ ಮಗನನ್ನು ಕಳೆದುಕೊಂಡಿದ್ದಾಳೆ: ನರೇಂದ್ರ ಮೋದಿ]
ರೋಹಿತ್ ವೇಮುಲ ಸಾವಿನ ನಂತರ ರಾಜಕೀಯವಾಗಿ ಆಕ್ಷೇಪಗಳು ವ್ಯಕ್ತವಾಗಿದ್ದವು. ಆ ಹಿನ್ನೆಲೆಯಲ್ಲಿ ಸಾವಿಗೆ ಕಾರಣವಾದ ಸನ್ನಿವೇಶಗಳ ಬಗ್ಗೆ ತನಿಖೆ ನಡೆಸುವ ಸಲುವಾಗಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ತನಿಖೆಗೆ ಆದೇಶಿಸಿತ್ತು. ಕಳೆದ ಜನವರಿ 17ರಂದು ರೋಹಿತ್ ವೇಮುಲ ವಿ.ವಿಯ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ.
ರೋಹಿತ್ ವೇಮುಲಗೆ ವೈಯಕ್ತಿಕ ಸಮಸ್ಯೆಗಳಿದ್ದವು. ಕೆಲವು ಅಸಮಾಧಾನಗಳಿದ್ದವು. ಆತ ಆತ್ಮಹತ್ಯೆಗೆ ಯಾರನ್ನೂ ದೂಷಿಸಿಲ್ಲ. ಆತನಿಗೆ ವಿ.ವಿ. ನಿರ್ಧಾರದ ಬಗ್ಗೆ ಅಸಮಾಧಾನ ಇದ್ದರೆ ನಿರ್ದಿಷ್ಟವಾಗಿ ಬರೆದಿರಬಹುದಿತ್ತು. ವೇಮುಲನಿಗೆ ಜೀವನದ ಬಗ್ಗೆ ಇದ್ದ ಅಸಮಾಧಾನದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿಸಲಾಗಿದೆ. ವಿ.ವಿಯು ಸಮಿತಿ 'ಸಕಾರಣ' ವಾಗಿಯೇ ರೋಹಿತ್ ವೇಮುಲ ಹಾಗೂ ಇತರ ನಾಲ್ವರನ್ನು ಅಮಾನತು ಮಾಡಿದೆ ಎಂದು ಕೂಡ ಹೇಳಲಾಗಿದೆ.[ಸ್ಮೃತಿ ಸಮರ್ಥನೆ ನಂತರವೂ 10 ಪ್ರೊಫೆಸರ್ ಗಳು ರಿಸೈನ್]

ಇನ್ನು ವರದಿಯಲ್ಲಿರುವ ಪ್ರಮುಖ ಅಂಶಗಳು ಹೀಗಿವೆ:
1. ರಾಧಿಕಾ ತಾವು ದಲಿತರು ಎಂದು ಬ್ರ್ಯಾಂಡ್ ಮಾಡಿಕೊಂಡಿದ್ದರು.
2. ಆಕೆ ದಲಿತರಲ್ಲ.
3. ರೋಹಿತ್ ಯಾವುದೇ ತಾರತಮ್ಯ ಎದುರಿಸಿಲ್ಲ.
4. ಅಮಾನತಿಗೂ ರೋಹಿತ್ ಅತ್ಮಹತ್ಯೆಗೂ ಸಂಬಂಧವಿಲ್ಲ.
5. ಹಾಸ್ಟೆಲ್ ನಿಂದ ರೋಹಿತ್ ನನ್ನು ಹೊರಹಾಕಿರುವುದಕ್ಕೆ 'ಸಕಾರಣ'ವಿದೆ.
6. ವೈಯಕ್ತಿಕ ಅಸಮಾಧಾನ ಆತ್ಮಹತ್ಯೆಗೆ ಪ್ರೇರಣೆ ನೀಡಿದೆಯೇ ಹೊರತು ತಾರತಮ್ಯವಲ್ಲ,
7. ಎಂಎಲ್ ಸಿ ರಾಮಚಂದ್ರರಾವ್, ಸಚಿವರಾದ ಬಂಡಾರು ದತ್ತಾತ್ರೇಯ ಮತ್ತು ಸ್ಮೃತಿ ಇರಾನಿ ತಮ್ಮ ಜವಾಬ್ದಾರಿಯನ್ನಷ್ಟೇ ನಿರ್ವಹಿಸಿದ್ದಾರೆ.
8 ವಿ.ವಿ.ಸಾಮಾಜಿಕ ನ್ಯಾಯ ವಿಭಾಗದ ತಾರತಮ್ಯ ವಿರೋಧಿ ಅಧಿಕಾರಿ ಸರಿಯಾಗಿ ಕಾರ್ಯನಿರ್ವಹಿಸಿಲ್ಲ. ಕುಂದು-ಕೊರತೆ ನಿವಾರಣೆ ಸಮಿತಿ ಹೊಣೆ ಹೊತ್ತಿರುವ ಒಂಬುಡ್ಸ್ ಮನ್ ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು.
ಇನ್ನು ಈ ವರದಿ ಬಹಿರಂಗವಾದ ನಂತರ, ಇದು 'ತಿಪ್ಪೆ ಸಾರಿಸಲು' ಮಾಡಿದ ವರದಿಯಂತಿದೆ. ನಿರೀಕ್ಷೆಯಂತೆಯೇ ವರದಿ ಬಂದಿದ್ದು, ಕೇಂದ್ರ ಸಚಿವರು ಹಾಗೂ ತಪ್ಪಿತಸ್ಥರನ್ನು ಉಳಿಸುವ ಹುನ್ನಾರವಿದು ಎಂಬ ಆರೋಪಗಳು ಕೇಳಿಬಂದಿವೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications