ಒರಿಸ್ಸಾದಲ್ಲಿ ತಗ್ಗಿಲ್ಲ ಫೈಲಿನ್ ಅಬ್ಬರ
ಹೈದರಾಬಾದ್, ಅ.13 : ಆಂಧ್ರಪ್ರದೇಶ ಮತ್ತು ಒರಿಸ್ಸಾ ರಾಜ್ಯಗಳಿಗೆ ಬಂದು ಅಪ್ಪಳಿಸಿರುವ 'ಫೈಲಿನ್' ಚಂಡಮಾರುತದ ಪ್ರಭಾವ ಭಾನುವಾರ ಬೆಳಗ್ಗೆ ವೇಳೆಗೆ ಸ್ವಲ್ಪ ಕಡಿಮೆಯಾಗಿದೆ. ಆಂಧ್ರಪ್ರದೇಶದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಒಟ್ಟು 8 ಜನರು ಫೈಲಿನ್ ಅಬ್ಬರಕ್ಕೆ ಬಲಿಯಾಗಿದ್ದಾರೆ.
ಗಂಟೆಗೆ 200ಕ್ಕೂ ಹೆಚ್ಚು ಕಿ.ಮೀ. ತೀವ್ರತೆಯ ಭಾರೀ ಬಿರುಗಾಳಿಯೊಂದಿಗೆ ಶನಿವಾರ ರಾತ್ರಿ ಫೈಲಿನ್ ಚಂಡಮಾರುತದ ಆಂಧ್ರಪ್ರದೇಶ ಮತ್ತು ಒರಿಸ್ಸಾ ಕರಾವಳಿ ಪ್ರದೇಶಕ್ಕೆ ಅಪ್ಪಳಿಸಿತ್ತು. ರಾತ್ರಿ ಎರಡೂ ರಾಜ್ಯಗಳಲ್ಲಿ ಭಾರೀ ಮಳೆಸುರಿದಿದೆ.

ಚಂಡಮಾರುತ ಅಪ್ಪಳಿಸಿದ 6 ಗಂಟೆಗಳ ಬಳಿಕ ಅದರ ಪ್ರಭಾವ ಕಡಿಮೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿತ್ತು. ಸದ್ಯ ಭಾನುವಾರ ಬೆಳಗ್ಗೆ ಚಂಡಮಾರುತದ ವೇಗ ಕಡಿಮೆ ಆಗಿದ್ದು, 90 ಕಿ.ಮೀ.ವೇಗದಲ್ಲಿ ಗಾಳಿ ಬೀಸುತ್ತಿದೆ ಎಂದು ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ಆಂಧ್ರಪ್ರದೇಶದಲ್ಲಿ ಚಂಡಮಾರುತದ ಅಬ್ಬರ ಕಡಿಮೆಯಾಗಿದ್ದು, ಶ್ರೀಕಾಕುಳಂ ಹೊರತು ಪಡಿಸಿ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದೆ. ಉತ್ತರ ಆಂಧ್ರ ಕರಾವಳಿ ಸಹಜ ಸ್ಥತಿಯತ್ತ ಮರಳುತ್ತಿದೆ. ವಿಶಾಖಪಟ್ಟಣಂ ನಲ್ಲಿ ವಿಮಾನಯಾನ ಸೇವೆಯನ್ನು ಆರಂಭಿಸಲಾಗಿದೆ.
ಆದರೆ, ಒರಿಸ್ಸಾದಲ್ಲಿ ಫೈಲಿನ್ ಚಂಡಮಾರುತದ ಅಬ್ಬರ ಮುಂದುವರೆದಿದೆ. ಮುಂದಿನ 36 ಗಂಟೆಗಳಲ್ಲಿ ಒರಿಸ್ಸಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಫೈಲಿನ್ ಚಂಡಮಾರುತ ಉತ್ತರ ಮತ್ತು ವಾಯುವ್ಯ ದಿಕ್ಕಿನತ್ತ ಚಲಿಸುತ್ತಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದ್ದರಿಂದ ಛತ್ತೀಸ್ ಗಢ್, ಮಧ್ಯಪ್ರದೇಶ, ಜಾರ್ಖಂಡ್, ಪಶ್ಚಿಮ ಬಂಗಾಳ ರಾಜ್ಯಗಳಿಗೆ ಎಚ್ಚರಿಕೆ ನೀಡಲಾಗಿದೆ.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ












Click it and Unblock the Notifications