ದಿನಾಂಕ ಘೋಷಣೆ ಬೆನ್ನಲ್ಲೇ ವೈಎಸ್ಆರ್ ಪಕ್ಷ ಸೇರಿದ ಖ್ಯಾತ ತೆಲುಗು ನಟ
ಹೈದರಾಬಾದ್, ಮಾರ್ಚ್ 11 : ಕೇಂದ್ರ ಚುನಾವಣಾ ಆಯೋಗ ಆಂಧ್ರಪ್ರದೇಶದ ಅಸೆಂಬ್ಲಿ ಮತ್ತು ಸಾರ್ವತ್ರಿಕ ಚುನಾವಣೆಗೆ ದಿನಾಂಕ ಘೋಷಿಸಿದ ಬೆನ್ನಲ್ಲೇ ಖ್ಯಾತ ತೆಲುಗು ಹಾಸ್ಯನಟ ಆಲಿ, ವೈಎಸ್ ಜಗನ್ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ.
ಸೋಮವಾರ (ಮಾ 11) ಜಗನ್ ಅವರನ್ನು, ಅವರ ಲೋಟಸ್ ಪಾಂಡ್ ನಿವಾಸದಲ್ಲಿ ಭೇಟಿಯಾದ ನಟ ಆಲಿ, ವೈಎಸ್ಆರ್ ಪಕ್ಷವನ್ನು ಸೇರುವ ಮೂಲಕ ಹಲವು ದಿನಗಳಿಂದ ಹರಿದಾಡುತ್ತಿದ್ದ ಸುದ್ದಿಗೆ ತೆರೆ ಎಳೆದಿದ್ದಾರೆ.
ಆಂಧ್ರಪ್ರದೇಶದ ಜನತೆ ಜಗನ್ ಅವರನ್ನು ಮುಖ್ಯಮಂತ್ರಿಯನ್ನಾಗಿ ನೋಡಲು ಬಯಸುತ್ತಿದ್ದಾರೆ. ಚುನಾವಣೆಯ ವೇಳೆ ಪಕ್ಷದ ಪರವಾಗಿ ಸಕ್ರಿಯವಾಗಿ ತೊಡಗಿಸಿಕೊಂಡು, ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದೇನೆ ಎಂದು ಆಲಿ ಹೇಳಿದರು.

ವಿಜಯವಾಡ ಅಥವಾ ರಾಜಮಹೇಂದ್ರಿಯಿಂದ ಪಕ್ಷ ಟಿಕೆಟ್ ನೀಡಿದರೆ ಚುನಾವಣಾ ಕಣಕ್ಕೆ ಇಳಿಯಲಿದ್ದೇನೆ ಎಂದಿರುವ ಆಲಿ, ಎಲ್ಲಾ ನಿರ್ಧಾರವನ್ನು ಜಗನ್ ಅವರಿಗೆ ಬಿಟ್ಟಿದ್ದೇನೆ ಎಂದು ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
Hyderabad: Telugu actor and comedian Ali joins YSRCP in the presence of party president YS Jaganmohan Reddy. pic.twitter.com/Lo0ul371rb
— ANI (@ANI) March 11, 2019
ಚಂದ್ರಬಾಬು ನಾಯ್ಡು ಅವರ ತೆಲುಗುದೇಶಂ ಪಕ್ಷದಿಂದ ಯಾವುದೇ ಭರವಸೆ ಸಿಗದ ಹಿನ್ನಲೆಯಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದೇನೆ ಎಂದು ಆಲಿ ಹೇಳಿದ್ದಾರೆ.
ಏಪ್ರಿಲ್ ಹನ್ನೊಂದರಂದು (ಮೊದಲ ಹಂತದ ಚುನಾವಣೆ) ಆಂಧ್ರಪ್ರದೇಶದ ಅಸೆಂಬ್ಲಿಗೆ ಚುನಾವಣೆ ನಡೆಯಲಿದೆ. ಮತ್ತು ಅದೇ ದಿನದಂದು ಆಂಧ್ರ (25) ಮತ್ತು ತೆಲಂಗಾಣದಲ್ಲಿರುವ (17) ಒಟ್ಟು (42) ಲೋಕಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications