ತೆಲಂಗಾಣದ ಪಶುವೈದ್ಯೆಯ ಅತ್ಯಾಚಾರ, ಹತ್ಯೆಗೆ ಮೊದಲೇ ನಡೆದಿತ್ತಾ ಪ್ಲಾನ್?
ಹೈದರಾಬಾದ್, ನವೆಂಬರ್ 29: ಪಶುವೈದ್ಯೆಯ ಅತ್ಯಾಚಾರ ಹತ್ಯೆಗೆ ಮೊದಲೇ ಪ್ಲಾನ್ ನಡೆದಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ.
ವೈದ್ಯೆ ಶಮ್ಶಾಬಾದ್ನಿಂದ ಕೊಲ್ಲುರ್ ಗ್ರಾಮಕ್ಕೆ ತೆರಳಿದ್ದರು. ನಂತರ ಮರಳಿ ಟೋಲ್ ಪ್ಲಾಜಾ ಸಮೀಪ ಸ್ಕೂಟಿ ನಿಲ್ಲಿಸಿ ಮತ್ತೊಂದು ಕಡೆಗೆ ಕ್ಯಾಬ್ನಲ್ಲಿ ತೆರಳಿದ್ದರು.
ಮತ್ತೆ ಬಂದು ಸ್ಕೂಟಿಯಲ್ಲಿ ಸ್ವಲ್ಪ ದೂರ ತೆರಳುವಾಗ ಬೈಕ್ ಪಂಕ್ಚರ್ ಆಗಿರುವುದು ಬೆಳಕಿಗೆ ಬಂದಿದೆ. ಉದ್ದೇಶಪೂರ್ವಕವಾಗಿ ಬೈಕ್ ಪಂಕ್ಚರ್ ಮಾಡಲಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ.

26 ವರ್ಷದ ಪಶುವೈದ್ಯೆಯ ಅತ್ಯಾಚಾರ, ಕೊಲೆ
26 ವರ್ಷದ ಪಶುವೈದ್ಯೆ ಮೇಲೆ ಅತ್ಯಾಚಾರ ನಡೆಸಿ ನಗರದ ಹೊರವಲಯದಲ್ಲಿ ಸುಟ್ಟು ಹಾಕಲಾಗಿತ್ತು. ಪಶುವೈದ್ಯೆ ಗುರುವಾರ ರಾತ್ರಿ ಕೆಲಸ ಮುಗಿಸಿ ಸ್ಕೂಟಿಯಲ್ಲಿ ತೆರಳುತ್ತಿದ್ದರು. ಜನನಿಬಿಡ ಪ್ರದೇಶದಲ್ಲಿ ರಾತ್ರಿ 9.30ರ ಸುಮಾರಿಗೆ ಆಕೆಯ ಬೈಕ್ ಪಂಕ್ಚರ್ ಆಗಿದೆ. ಈ ವೇಳೆ ಇಬ್ಬರು ಯುವಕರು ಆಕೆಯ ಸ್ಕೂಟಿಯನ್ನು ತೆಗೆದುಕೊಂಡು ಹೋಗಿ ಪಂಕ್ಚರ್ ಕಟ್ಟಿಸಿಕೊಂಡು ಬರುವುದಾಗಿ ಹೇಳಿದ್ದರು.

ಲಾರಿ ಚಾಲಕರಿದ್ದಾರೆ, ಭಯವಾಗ್ತಿದೆ ಅಮ್ಮಾ...
ಸುತ್ತಲೂ ಕತ್ತಲು, ಲಾರಿ ಚಾಲಕರು ಬೇರೆ ಇದ್ದಾರೆ ಭಯವಾಗುತ್ತಿದೆ ಎಂದು ಮನೆಗೆ ಕರೆ ಮಾಡಿ ಆಕೆ ತಿಳಿಸಿದ್ದಳು. ಈ ವಿಚಾರವನ್ನು ಆಕೆ ಮನೆಗೆ ಕರೆ ಮಾಡಿ ಹೇಳಿದ್ದರು. ಅಷ್ಟೇ ಅಲ್ಲ, ಪಕ್ಕದಲ್ಲಿ ಲಾರಿ ಚಾಲಕರಿದ್ದಾರೆ. ಅವರನ್ನು ನೋಡಿ ನನಗೆ ಭಯವಾಗುತ್ತಿದೆ ಎಂದು ಆಕೆ ದೂರವಾಣಿ ಕರೆಯಲ್ಲಿ ಹೇಳಿದ್ದರು. ನಂತರ ಆಕೆ ಮೊಬೈಲ್ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಹೀಗಾಗಿ ರಾತ್ರಿ 11 ಗಂಟೆಗೆ ಕುಟುಂಬದವರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಶವ ಸಿಕ್ಕಿದ್ದು ಬೆಳಗ್ಗೆ
ಪಶುವೈದ್ಯೆ ಮೇಲೆ ಲಾರಿ ಚಾಲಕರು ಅತ್ಯಾಚಾರ ನಡಿಸಿ, ಆಕೆಯನ್ನು ಕೊಲೆ ಮಾಡಿದ್ದಾರೆ ಎನ್ನುವ ಶಂಕೆ ಇದೆ. ಅತ್ಯಾಚಾರ ಮಾಡಿದ ನಂತರ ಶಂಶಾಬಾದ್ನ ತೊಂಡುಪಲ್ಲಿಯಲ್ಲಿ ಟೋಲ್ ಪ್ಲಾಜಾ ಸಮೀಪ ಈಕೆಯನ್ನು ಕೊಂದು, ಅಲ್ಲಿಂದ 25 ಕಿ.ಮೀ ದೂರದಲ್ಲಿ ಆಕೆಯನ್ನು ಸುಡಲಾಗಿದೆ.

ಆರೋಪಿಗಳ ಬಂಧನ
ಘಟನೆ ವಿವರಿಸಿದ ನಂತರ ಪೊಲೀಸರು ಹುಡುಕಾಟ ಆರಂಭಿಸಿದ್ದರು. ಟೋಲ್ ಸಿಸಿಟಿವಿಗಳನ್ನು ಪರಿಶೀಲಿಸಿದ್ದರು. ನಂತರ ಇಬ್ಬರು ಲಾರಿ ಚಾಲಕರನ್ನು ಪೊಲೀಸರು ಬಂಧಿಸಿದ್ದಾರೆ. ಅವರಿಂದ ಸಂತ್ರಸ್ತೆಯ ಬಟ್ಟೆ ಹಾಗೂ ಚಪ್ಪಲಿಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications