ಬಸ್ ದುರಂತದ ಕಾರಣ ಬಹಿರಂಗಗೊಳಿಸಿದ ಆಸ್ಕರ್
ನವದೆಹಲಿ,ಡಿ.15: ಹೈದ್ರಾಬಾದ್ ಜಬ್ಬಾರ್ ಟ್ರಾವೆಲ್ಸ್ ವೋಲ್ವೊ ಬಸ್ ದುರಂತಕ್ಕೆ ಏನು ಕಾರಣ ಎಂಬುದು ಈಗ ತನಿಖಾ ವರದಿಯಿಂದ ಬಹಿರಂಗವಾಗಿದೆ. ಈ ಬಸ್ ದುರಂತದಲ್ಲಿ 52 ಮಂದಿ ಸುಟ್ಟು ಕರಕಲಾಗಿ ಅಸುನೀಗಿದ್ದರು. ಚಾಲಕನ ಬೇಜವಾಬ್ದಾರಿತನ ಹಾಗೂ ಪಟಾಕಿಗಳ ಪಾರ್ಸೆಲ್ ಈ ದುರ್ಘಟನೆಗೆ ಕಾರಣ ಎಂದು ಕೇಂದ್ರ ಭೂ ಸಾರಿಗೆ ಖಾತೆ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಅವರು ಭಾನುವಾರ ಹೇಳಿದ್ದಾರೆ.
ವೋಲ್ವೋ ಬಸ್ ಚಾಲಕ ಎರಡು ಅವಧಿಗೆ ಕರ್ತವ್ಯ ನಿರ್ವಹಿಸಿ ಒತ್ತಡದಲ್ಲಿದ್ದ ಹಾಗೂ ಬಸ್ ಒಳಗಡೆ ಪಟಾಕಿ(ಸಿಡಿಮದ್ದು) ಪಾರ್ಸೆಲ್ ಇದ್ದದ್ದು ಕಾರಣ ಎಂಬುದು ತನಿಖೆಯಿಂದ ತಿಳಿದುಬಂದಿದೆ ಎಂದು ಸಚಿವ ಆಸ್ಕರ್ ಫರ್ನಾಂಡಿಸ್ ತಿಳಿಸಿದರು.
ಬೆಂಗಳೂರಿನಿಂದ ಹೈದರಾಬಾದಿಗೆ ಹೋಗುತ್ತಿದ್ದ ಜಬ್ಬಾರ್ ಸಂಸ್ಥೆಗೆ ಸೇರಿದ ವೋಲ್ವೊ ಬಸ್ ಮಹೆಬೂಬ್ ನಗರ ಬಳಿ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡು 52 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದರು. ಆ ನತದೃಷ್ಟ ಬಸ್ ನ ಚಾಲಕ ಎರಡು ಅವಧಿಗೆ ನಿರ್ವಹಿಸಿದ್ದ ಹಿನ್ನೆಲೆಯಲ್ಲಿ ಭಾರೀ ಒತ್ತಡದಲ್ಲಿದ್ದ ವಾಸ್ತವವಾಗಿ ಚಾಲಕ ಬಸ್ ಗೆ ಬ್ರೇಕ್ ಹಾಕುವಷ್ಟು ಮಾನಸಿಕವಾಗಿ ಎಚ್ಚರವಿರಲಿಲ್ಲ ಎಂಬುದು ವರದಿಯಿಂದ ತಿಳಿದುಬಂದಿದೆ ಎಂದು ಭೂ ಸಾರಿಗೆ ಖಾತೆ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಹೇಳಿದ್ದಾರೆ.[ಬಸ್ ದುರಂತದ ಚಿತ್ರಗಳು]

ಬಸ್ಸಿಗೆ ಬೆಂಕಿ ತಗುಲಿದ ತಕ್ಷಣ ಚಾಲಕ ಫಿರೋಜ್ ಶಾ ಅವರು ಪ್ರಯಾಣಿಕರನ್ನು ಎಚ್ಚರಿಸಿದ್ದರೆ 45 ಮಂದಿ ಪ್ರಾಣ ಕಳೆದುಕೊಳ್ಳುತ್ತಿರಲಿಲ್ಲ. ಸಮಯ ಪ್ರಜ್ಞೆ ತೋರಿ, ಬಾಗಿಲನ್ನೂ ತೆರೆಯದೆ ಚಾಲಕ ಬಸ್ಸಿನಿಂದ ಜಿಗಿದು ಪರಾರಿಯಾಗಲು ಯತ್ನಿಸಿದ್ದ ಎಂದು ವರದಿಯಲ್ಲಿ ತಿಳಿಸಲಾಗಿದೆ.
ವೋಲ್ವೊ ಬಸ್ ಅಗ್ನಿ ದುರಂತಕ್ಕೆ ಅವೈಜ್ಞಾನಿಕ ರಸ್ತೆ ನಿರ್ಮಾಣವೇ (Poor road engineering) ಕಾರಣ ಎಂದು ಆಂಧ್ರ ಪ್ರದೇಶ ಹಾಗೂ ಕರ್ನಾಟಕ ಸಾರಿಗೆ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಸಿದ್ಧಪಡಿಸಿರುವ ಪ್ರಾಥಮಿಕ ತನಿಖಾ ವರದಿಯಲ್ಲಿ ತಿಳಿಸಲಾಗಿತ್ತು.
ಹೆದ್ದಾರಿಯಲ್ಲಿ ಸುಮಾರು 20 ಅಡಿಗಳಷ್ಟು ದೂರ ಸ್ಟೀಲ್ ಪೈಪ್ ತಡೆಗೋಡೆ ನಿರ್ಮಿಸಲಾಗಿದ್ದು, ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ತಡೆಗೋಡೆಗೆ ಉಜ್ಜಿಕೊಂಡು ಚಲಿಸಿದ್ದರಿಂದ ಪೈಪುಗಳಿಂದ ಸಿಡಿದ ಬೆಂಕಿ ಕಿಡಿ ಡೀಸೆಲ್ ಟ್ಯಾಂಕಿಗೆ ತಗುಲಿ ಬೆಂಕಿ ಹೊತ್ತಿಕೊಂಡಿದೆ ಎಂದು Data Analysis Centre of National Automotive Testing and R&D Infrastructure Project ವರದಿಯಲ್ಲಿ ಉಲ್ಲೇಖಿಸಲಾಗಿತ್ತು.
ಬಸ್ ನ ಡೀಸೆಲ್ ಟ್ಯಾಂಕ್ ಸ್ಫೋಟಗೊಳ್ಳುತ್ತಿದ್ದಂತೆ ನಿದ್ರಾಸ್ಥಿತಿಯಲ್ಲಿದ್ದ ಪ್ರಯಾಣಿಕರು ಹೊರಬರಲು ಸಾಧ್ಯವಾಗಲಿಲ್ಲ. ಇದರಿಂದ ಸೀಟಿನಲ್ಲಿ ಕುಳಿತಿದ್ದ ಪ್ರಯಾಣಿಕರು ಸುಟ್ಟು ಭಸ್ಮವಾಗಿದ್ದಾರೆ. ಡಿಎನ್ ಎ ಹೊಂದಾಣಿಕೆ ಮೂಲಕ ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಶವಗಳ ಗುರುತು ಪತ್ತೆ ಹಚ್ಚಿದ್ದರು.
ನವೆಂಬರ್ 14 ರಂದು ಕರ್ನಾಟಕದ ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಬಸ್ ಹಾವೇರಿ ಬಳಿ ಬೆಂಕಿ ಆಕಸ್ಮಿಕಕ್ಕೆ ಸಿಲುಕಿದ ಬಗ್ಗೆ ವರದಿ ಇನ್ನೂ ಬರಬೇಕಿದೆ. ರಸ್ತೆ ಅಪಘಾತ ತಡೆಗೆ ಸೂಕ್ತ ಕ್ರಮ ಜರುಗಿಸುವಂತೆ ಸಂಸದೀಯ ಸಮಿತಿಯಿಂದ ರಸ್ತೆ ಹಾಗೂ ಹೆದ್ದಾರಿ ಸಚಿವಾಲಯಕ್ಕೆ ನಿರ್ದೇಶನ ಬಂದಿದೆ ಎಂದು ಸಚಿವ ಆಸ್ಕರ್ ಫರ್ನಾಂಡಿಸ್ ಹೇಳಿದರು. (ಪಿಟಿಐ)
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications