ಬೈಬಲ್ ಹಾಗೂ ಭಗವದ್ಗೀತೆ ಹಿಡಿದವರಲ್ಲಿ ಯಾರಿಗೆ ಮತ ಹಾಕುತ್ತೀರಿ: ಬಿಜೆಪಿ ಅಧ್ಯಕ್ಷನ ಹೊಸ ವಿವಾದ
ಹೈದರಾಬಾದ್, ಜನವರಿ 05: ಆಂಧ್ರಪ್ರೇಶದ ಜನತೆ ಬೈಬಲ್ ಹಾಗೂ ಭಗವದ್ಗೀತೆ ಹಿಡಿದವರಲ್ಲಿ ಯಾರಿಗೆ ಮತ ಹಾಕಲಿದೆ ಎಂದು ತೆಲಂಗಾಣ ಬಿಜೆಪಿ ಅಧ್ಯಕ್ಷ ಸಂಜಯ್ ಪ್ರಶ್ನಿಸಿ ವಿವಾದವೆಳೆದುಕೊಂಡಿದ್ದಾರೆ.
ಹಿಂದೂ ದೇವಾಲಯಗಳ ಮೇಲಿನ ದಾಳಿಯ ಘಟನೆಯನ್ನು ಉಲ್ಲೇಖಿಸಿದ ಅವರು, ಆಂಧ್ರ ಪ್ರದೇಶ ಜನರ ತಾಳ್ಮೆಯನ್ನು ಪರೀಕ್ಷಿಸಬೇಡಿ, ಇಲ್ಲದಿದ್ದರೆ ನೀವು ಖಂಡಿತಾ ಬೆಲೆ ತೆರಬೇಕಾಗುತ್ತದೆ. ಬಿಜೆಪಿ ಕಾರ್ಯಕರ್ತರು ಬೀದಿಗೆ ಬಂದು ವಂದೇ ಮಾತರಂ, ಜೈ ಶ್ರೀರಾಂ, ಭಾರತ್ ಮಾತಾ ಕಿ ಜೈ ಪಠಿಸಿದರೆ ವೈಎಸ್ ಆರ್ ಸಿಪಿ ತಮ್ಮ ಕಚೇರಿಯನ್ನು ಖಾಲಿ ಮಾಡಬೇಕಾಗುತ್ತದೆ ಎಂದು ಬಂಡಿ ಸಂಜಯ್ ಕುಮಾರ್ ಹೇಳಿದ್ದಾರೆ.
ತಿರುಪತಿ ಲೋಕಸಭೆ ಉಪ ಚುನಾವಣೆಗೆ ಮುನ್ನ ಬಿಜೆಪಿ ತೆಲಂಗಾಣ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ವಿವಾದಿತ ಹೇಳಿಕೆಯೊಂದನ್ನು ನೀಡಿದ್ದಾರೆ. ಮತದಾರರು ಬೈಬಲ್ ಮತ್ತು ಭಗವದ್ಗೀತೆ ಮಧ್ಯೆ ಯಾವುದನ್ನು ಆಯ್ಕೆ ಮಾಡುತ್ತೀರಿ ಎಂದು ಕೇಳಿದ್ದಾರೆ.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ವೈಎಸ್ ಆರ್ ಸಿ ವಿರುದ್ಧ ವಾಗ್ದಾಳಿ ನಡೆಸುತ್ತಾ, ಆಂಧ್ರ ಪ್ರದೇಶದಲ್ಲಿ ಆಡಳಿತಾರೂಢ ಸರ್ಕಾರವನ್ನು ತಿರುಮಲವನ್ನು ಎರಡು ಪರ್ವತಕ್ಕೆ ಹೋಲಿಸಿದರು, ನಂತರ ಬಿಜೆಪಿಯ ಕಾರ್ಯಕ್ರಮ ಮತ್ತು ನೀತಿಗಳನ್ನು ಗೋವಿಂದ ಮತ್ತು ಏಳು ಬೆಟ್ಟಗಳಲ್ಲಿ ವಾಸಿಸುವ ದೇವರಿಗೆ ಹೋಲಿಸಿ ಮಾತನಾಡಿದರು.
ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ತೆಲಂಗಾಣದಲ್ಲಿ ನಿರ್ದಿಷ್ಟ ಧರ್ಮವನ್ನು ಪ್ರೋತ್ಸಾಹಿಸುತ್ತಿದ್ದರೆ, ಮತ್ತೊಂದು ಧರ್ಮ ಆಂಧ್ರ ಪ್ರದೇಶ ಸರ್ಕಾರವಾಗಿದೆ, ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಒಂದು ಧರ್ಮವನ್ನು ಪ್ರೋತ್ಸಾಹಿಸುತ್ತಿದ್ದರೆ, ಹಿಂದೂಗಳು ಈ ಉಪ ಚುನಾವಣೆಯಲ್ಲಿ ವೋಟ್ ಬ್ಯಾಂಕ್ ಆಗಲಿದ್ದಾರೆ ಎಂದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications