ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹೈದರಾಬಾದ್ ಹೆಸರು ಭಾಗ್ಯನಗರ್

|
Google Oneindia Kannada News

ಹೈದರಾಬಾದ್, ನವೆಂಬರ್ 8: ತೆಲಂಗಾಣದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆಗೆ ಏರಿದರೆ ಹೈದರಾಬಾದ್ ನಗರದ ಹೆಸರನ್ನು ಭಾಗ್ಯನಗರ್ ಎಂದು ಬದಲಿಸುತ್ತೇವೆ ಎಂದು ಬಿಜೆಪಿ ಮುಖಂಡ ರಾಜ ಸಿಂಗ್ ಹೇಳಿದ್ದಾರೆ. ಅಷ್ಟೇ ಅಲ್ಲ, ಸಿಕಂದರಾಬಾದ್ ಹಾಗೂ ಕರೀಮ್ ನಗರ್ ಹೆಸರುಗಳನ್ನು ಸಹ ಬದಲಿಸುವುದಾಗಿ ಹೇಳಿದ್ದಾರೆ.

ಮೊದಲಿಗೆ ಹೈದರಾಬಾದ್ ಹೆಸರು ಭಾಗ್ಯನಗರ್ ಅಂತಲೇ ಇತ್ತು. ಆದರೆ ಕುತುಬ್ ಷಾ ಬಂದ ನಂತರ ಹೈದರಾಬಾದ್ ಎಂದು ಬದಲಾಯಿಸಿದ. ಆದ್ದರಿಂದ ಹೈದರಾಬಾದ್ ಹೆಸರು ಬದಲಿಸುವ ಆಲೋಚನೆ ಮಾಡುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ತೆಲಂಗಾಣ ಚುನಾವಣೆ: 24 ಸ್ಥಾನಗಳ ಮೇಲೆ ನಿಂತಿದೆ ಬಿಜೆಪಿ ಭವಿಷ್ಯ ತೆಲಂಗಾಣ ಚುನಾವಣೆ: 24 ಸ್ಥಾನಗಳ ಮೇಲೆ ನಿಂತಿದೆ ಬಿಜೆಪಿ ಭವಿಷ್ಯ

ತೆಲಂಗಾಣದಲ್ಲಿ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಆ ನಂತರ ಮೊದಲ ಗುರಿ ರಾಜ್ಯದ ಅಭಿವೃದ್ಧಿ. ಆ ನಂತರ ಹೈದರಾಬಾದ್ ಅನ್ನು ಭಾಗ್ಯನಗರ್ ಎಂದು ಬದಲಾಯಿಸುತ್ತೇವೆ. ಜತೆಗೆ ಸಿಕಂದರಾಬಾದ್ ಹಾಗೂ ಕರೀಮ್ ನಗರ್ ಹೆಸರು ಸಹ ಬದಲಿಸುತ್ತೇವೆ ಎಂದು ಹೇಳಿದ್ದಾರೆ.

Will rename Hyderabad as Bhagyanagar if BJP win in Telangana, says Legislator

ತೆಲಂಗಾಣದಲ್ಲಿ ಡಿಸೆಂಬರ್ ಏಳರಂದು ಚುನಾವಣೆ ನಡೆಯಲಿದೆ. ಮೊಘಲರು ಹಾಗೂ ನಿಜಾಮರು ಹೆಸರು ಇಟ್ಟಿರುವ ಪ್ರದೇಶಗಳಿಗೆ ತೆಲಂಗಾಣಕ್ಕಾಗಿ ಹಾಗೂ ದೇಶಕ್ಕಾಗಿ ಹೋರಾಡಿದವರ ಹೆಸರನ್ನು ಇಡಲಾಗುವುದು ಎಂದಿದ್ದಾರೆ.

'ತೆಲಂಗಾಣದಲ್ಲಿ ಟಿಆರ್ ಎಸ್ 100 ಸೀಟು ಗೆಲ್ಲೋದು ಗ್ಯಾರಂಟಿ!' 'ತೆಲಂಗಾಣದಲ್ಲಿ ಟಿಆರ್ ಎಸ್ 100 ಸೀಟು ಗೆಲ್ಲೋದು ಗ್ಯಾರಂಟಿ!'

ಗುಜರಾತ್ ನ ಅಹ್ಮದಾಬಾದ್ ಗೆ ಕರ್ಣಾವತಿ ಎಂದು ಬದಲಿಸಲು ಚಿಂತಿಸುತ್ತಿರುವುದಾಗಿ ಅಲ್ಲಿನ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಘೋಷಣೆ ಮಾಡಿದ ಒಂದು ದಿನದ ನಂತರ ಬಿಜೆಪಿಯ ರಾಜ ಸಿಂಗ್ ಈ ಹೇಳಿಕೆ ನೀಡಿದ್ದಾರೆ.

English summary
Hyderabad will be renamed as Bhagyanagar if the BJP came to power in the southern state, a BJP legislator said today. Raja Singh, who represents the Goshamahal assembly constituency, said the party will also change the names of Secunderabad and Karimnagar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X